ಪರಿಷತ್ ಫಲಿತಾಂಶ ಮುಂದಿನ ಚುನಾವಣೆ ದಿಕ್ಸೂಚಿಯಲ್ಲ: ಕಟೀಲ್
ಚಾಮರಾಜನಗರ, ಜೂನ್ 16; "ಪ್ರಸ್ತುತ ನಡೆದ ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಯಾವುದೇ ಚುನಾವಣೆಗೆ ದಿಕ್ಸೂಚಿಯಲ್ಲ" ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
ಗುರುವಾರ ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ವಿಧಾನ ಪರಿಷತ್ ಚುನಾವಣೆಯಲ್ಲಿ ನಾವು 4 ರಲ್ಲಿ ಎರಡು ಸ್ಥಾನದಲ್ಲಿ ಗೆದ್ದಿದ್ದೇವೆ. ಹಿಂದೆಯೂ ಎರಡು ಸ್ಥಾನ ಇತ್ತು, ಅದನ್ನು ಈಗಲೂ ಉಳಿಸಿಕೊಂಡಿದ್ದೇವೆ" ಎಂದರು.
"ವಿಧಾನ ಪರಿಷತ್ ಚುನಾವಣೆಗಳು ಎಂದಿಗೂ ಯಾವುದೇ ಚುನಾವಣೆಗೆ ದಿಕ್ಸೂಚಿಯಾಗುವುದಿಲ್ಲ. ನಮ್ಮ ಮತಗಳು ನಮಗೆ ಬಂದಿದೆ. ಹಿಂದೆ ನಾವು ಪಡೆದಿದ್ದಕ್ಕಿಂತ ಈ ಬಾರಿ ಹೆಚ್ಚು ಮತಗಳನ್ನು ಪಡೆದಿದ್ದೇವೆ. ಜೊತೆಗೆ ಜೆಡಿಎಸ್ ಮತಗಳು ನಮ್ಮ ಕಡೆ ಬಂದಿದೆ" ಎಂದು ಎಂಎಲ್ಸಿ ಚುನಾವಣೆ ಫಲಿತಾಂಶವನ್ನು ಕಟೀಲ್ ವಿವರಿಸಿದರು.
ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಮಾತನಾಡಿ, "ದೇಶ ಕಾಂಗ್ರೆಸ್ ಮುಕ್ತ ಭಾರತ ಆಗುತ್ತಿದೆ, ವಿರೋಧ ಪಕ್ಷ ಆಗುವುದಕ್ಕೂ ಅದು ನಾಲಾಯಕ್ಕಾಗಿದೆ. ಕಾಂಗ್ರೆಸ್ ಅನ್ನು ಇಡೀ ದೇಶದಲ್ಲಿ ಜನ ತಿರಸ್ಕರಿಸುತ್ತಿದ್ದಾರೆ, ಅವರದೇ ಪಕ್ಷ ಅಧಿಕಾರದಲ್ಲಿದ್ದ ಪಂಜಾಬ್ನಲ್ಲಿ ಇವತ್ತು ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ" ಎಂದು ಟೀಕಿಸಿದರು.

ಮೋದಿ -ಶಾ ವಿರುದ್ಧವೂ ಇಡಿ ವಿಚಾರಣೆ ನಡೆದಿತ್ತು
"ಕಾಂಗ್ರೆಸ್ಗೆ ಸಂವಿಧಾನ ಹಾಗೂ ಕಾನೂನಿನ ಬಗ್ಗೆ ನಂಬಿಕೆ ಇಲ್ಲ. ಇಡಿ ಕಾನೂನಿನ ಆಧಾರದ ಮೇಲೆ ವಿಚಾರಣೆ ಮಾಡುತ್ತಿದೆ. ಹಿಂದೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧವೂ ಇಡಿ ತನಿಖೆ ನಡೆದಿದೆ. ಅಂದು ಪಕ್ಷದಿಂದ ಯಾರೂ ಹೋರಾಟ ಮಾಡಿರಲಿಲ್ಲ. ಈಗ ಕಾಂಗ್ರೆಸ್ಗೆ ಯಾವುದರ ಮೇಲೂ ನಂಬಿಕೆ ಇಲ್ಲ, ಪ್ರತಿದಿನ ರಾಜಭವನ ಚಲೋ ಚಳುವಳಿ ಬೇರೆ ಬೇರೆ ಕಾರಣಗಳಿಂದ ಮಾಡುತ್ತಿದ್ದಾರೆ" ಎಂದು ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದರು.

ವಿರೋಧ ಪಕ್ಷಕ್ಕೂ ನಾಲಾಯಕ್
"ದೇಶ ಕಾಂಗ್ರೆಸ್ ಮುಕ್ತ ಭಾರತವಾಗುತ್ತಿದೆ. ವಿರೋಧ ಪಕ್ಷ ಆಗುವುದಕ್ಕೂ ಕಾಂಗ್ರೆಸ್ ನಾಲಾಯಕ್ ಆಗಿದೆ. ದೇಶದ ಜನರು ಪಕ್ಷವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಈಗ ಪ್ರತಿಭಟಿಸುವ ಮುನ್ನ ಸಿದ್ದರಾಮಣ್ಣ ಹಿಂದೆ ತುರ್ತು ಪರಿಸ್ಥಿತಿ ಹೇರಿದ್ದು ಅವರದೇ ಪಾರ್ಟಿ, ಪ್ರಜಾಪ್ರಭುತ್ವವನ್ನ ಕಗ್ಗೊಲೆ ಮಾಡಿದ್ದು ಅವರದೇ ಪಾರ್ಟಿ ಎನ್ನುವುದನ್ನು ಆಲೋಚನೆ ಮಾಡಬೇಕಿತ್ತು. ಇವತ್ತು ಇಡಿ ತನಿಖೆ ವಿರುದ್ಧ ಹೋರಾಟ ಮಾಡುತ್ತಿರುವುದು ಸಿದ್ದರಾಮಯ್ಯನವರ ನಡವಳಿಕೆ ಎಂಥಹದ್ದು ಎನ್ನುವುದನ್ನು ತೋರುತ್ತದೆ. ಕಾಂಗ್ರೆಸ್ ವಿರುದ್ಧ ಈಗಾಗಲೇ ಜನ ದಂಗೆ ಎದ್ದಿದ್ದಾರೆ, ಸಿದ್ದರಾಮಯ್ಯನ ಪಾಠ ಕೇಳುವವರು ಯಾರು ಇಲ್ಲ" ಎಂದು ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದರು.

ನಾಯಕತ್ವ ಬದಲಾವಣೆಯಲ್ಲಿ
ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, "ರಾಜ್ಯ ಬಿಜೆಪಿ ಸರಕಾರದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ. ಮುಂದಿನ ಚುನಾವಣೆಯನ್ನು ಸಹ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಎದುರಿಸುತ್ತೇವೆ. ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರ್ ರಚನೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ" ಎಂದರು.

ತಲಾ 2 ಕ್ಷೇತ್ರ ಹಂಚಿಕೊಂಡ ಕೈ-ಕಮಲ
ಜೂನ್ 13ರಂದು ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿರೂಢ ಬಿಜೆಪಿ 2 ಸ್ಥಾನಗಳನ್ನು ಪಡೆದುಕೊಂಡಿದೆ. ಮತ್ತೆರಡು ಕ್ಷೇತ್ರಗಳಲ್ಲಿ ವಿಪಕ್ಷ ಕಾಂಗ್ರೆಸ್ ಜಯ ಸಾಧಿಸಿದೆ. ಜೆಡಿಎಸ್ ತನ್ನ 2 ಸ್ಥಾನಗಳನ್ನು ಕಳೆದುಕೊಂಡಿದೆ. ಕಳೆದ ಬಾರಿ ಪಶ್ಚಿಮ ಕ್ಷೇತ್ರದಲ್ಲಿ ಬಸವರಾಜ ಹೊರಟ್ಟಿ ಮತ್ತು ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಕೆ. ಟಿ. ಶ್ರೀಕಂಠೇಗೌಡ ಜೆಡಿಎಸ್ನಿಂದ ಆಯ್ಕೆಯಾಗಿದ್ದರು. ಈ ಬಾರಿ ಹೊರಟ್ಟಿ ಬಿಜೆಪಿಯಲ್ಲಿ ಗೆದ್ದರೆ, ಮಧು ಮಾದೇಗೌಡ ಕಾಂಗ್ರೆಸ್ನಲ್ಲಿ ಜಯ ಸಾಧಿಸಿದ್ದಾರೆ. ಬಿಜೆಪಿ ವಾಯುವ್ಯ ಶಿಕ್ಷಕರ ಕ್ಷೇತ್ರವನ್ನು ಕಳೆದುಕೊಂಡಿದೆ. ಕಳೆದ 2 ಬಾರಿ ಇಲ್ಲಿ ಬಿಜೆಪಿ ಜಯ ಸಾಧಿಸಿತ್ತು. ಆದರೆ ವಾಯುವ್ಯ ಪದವೀಧರರ ಕ್ಷೇತ್ರದಲ್ಲಿ ಮತ್ತೊಮ್ಮೆ ಹಣಮಂತ ನಿರಾಣಿ ಜಯ ಸಾಧಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications