ಚಾಮರಾಜನಗರ ಗ್ರಂಥಾಲಯ ಎದುರು ವಾಮಾಚಾರ?
ಚಾಮರಾಜನಗರ, ಆಗಸ್ಟ್ 03 : ಚಾಮರಾಜನಗರ ಜಿಲ್ಲಾ ಕೇಂದ್ರ ಗ್ರಂಥಾಲಯದ ಬಾಗಿಲಲ್ಲಿ ಮಣ್ಣಿನ ಕುಡಿಕೆ, ನಿಂಬೆಹಣ್ಣು, ಅರಿಸಿನ ಕುಂಕುಮಗಳು ಕಂಡು ಬಂದಿದ್ದು ಕಿಡಿಗೇಡಿಗಳು ವಾಮಾಚಾರ ಮಾಡಿರಬಹುದು ಎಂದು ಶಂಕಿಸಲಾಗಿದೆ.
ಚಾಮರಾಜನಗರ ಮುಖ್ಯ ಗ್ರಂಥಾಲಯದ ಎದುರು ಇದಕ್ಕೂ ಹಿಂದೆಯೂ ಇದೇ ರೀತಿಯ ವಾಮಚಾರ ನಡೆದಿತ್ತು, ಇದು ಮೂರನೇ ಬಾರಿಗೆ ವಾಮಾಚಾರದ ಪ್ರಯೋಗ ನಡೆದಿದೆ ಎಂದು ತಿಳಿದುಬಂದಿದೆ. ಕಚೇರಿಗೆ ಆಗಮಿಸಿದ ಸಿಬ್ಬಂದಿಗೆ ಕೇಂದ್ರ ಗ್ರಂಥಾಲಯದ ಎದುರು ಬಾಗಿಲ ಬಳಿ ಮಣ್ಣಿನ ಕುಡಿಕೆ, ನಿಂಬೆಹಣ್ಣು, ಅರಿಸಿನ ಕುಂಕುಮ ಇರುವುದು ನೋಡಿ ಭಯಭೀತಾಗಿದ್ದಾರೆ.
ಆದರೆ, ವಾಮಾಚಾರ ಯಾರು ಮಾಡಿಸಿದರು? ಯಾವ ಉದ್ದೇಶಕ್ಕೆ ಮಾಡಿದ್ದಾರೆ? ಎನ್ನುವುದು ತಿಳಿಯಬೇಕಾಗಿದೆ. ಆಗಾಗ ಗ್ರಂಥಾಲಯದ ಬಳಿ ಇಂತಹ ಕೃತ್ಯ ನಡೆಸುವುದಕ್ಕೆ ಕಾರಣ ಏನು? ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಆ.12 ರಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ರಾಜ್ಯ ಮಟ್ಟದ ಗ್ರಂಥಪಾಲಕರ ದಿನಾಚರಣೆಯನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ವಿಘ್ನ ತರುವ ಸಲುವಾಗಿ ಈ ರೀತಿಯ ವಾಮಾಚಾರ ಮಾಡಿಸಿರಬಹುದೆಂದು ಕೆಲವರು ಸಂಶಯಪಟ್ಟಿದ್ದಾರೆ. ಕೆಲವು ಕಿಡಿಗೇಡಿಗಳು ಭಯ ಹುಟ್ಟಿಸಲೆಂದೇ ಇಂತಹ ಕೃತ್ಯಕ್ಕೆ ಮುಂದಾಗಿದ್ದಾರಾ? ಎಂಬುದು ಪತ್ತೆಯಾಗಬೇಕಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications