ಭಾರತದ ಪ್ರವಾಸಿಪ್ರಿಯ ತಾಣ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮತ್ತೊಂದು ಗೌರವದ ಗರಿ
ಚಾಮರಾಜನಗರ, ಮೇ, 03: ಭಾರತದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮತ್ತೊಂದು ಗೌರವದ ಗರಿ ಬಂದಿದೆ. ಈ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ ಸಂದಿದೆ.
ವಿದ್ಯಾರ್ಥಿಗಳಿಗೆ ಕಾಡಿನ ಬಗ್ಗೆ ಅರಿವು, ಅರಣ್ಯದ ಬಗ್ಗೆ ಜಾಗೃತಿ, ಪರಿಸರ ರಕ್ಷಣೆ ಪ್ರಾಮುಖ್ಯತೆ ಬಗ್ಗೆ ತಿಳಿಸಿಕೊಡಲು ಆರಂಭಿಸಿದ್ದ ಯುವಮಿತ್ರ ಕಾರ್ಯಕ್ರಮಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ ಸಂದಿದೆ. ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಅತಿಹೆಚ್ಚು ಮಂದಿ ಭಾಗಿಯಾಗಿದ್ದಾರೆ ಎಂದು ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲಾಗಿದ್ದು, ಪ್ರಶಸ್ತಿಯನ್ನು ವಿತರಣೆ ಮಾಡಲಾಗಿದೆ.

ಬಂಡೀಪುರ ಯುವ ಮಿತ್ರ ಜಾಗೃತಿ ಕಾರ್ಯಕ್ರಮದಲ್ಲಿ ಒಟ್ಟು 8,410 ಮಂದಿ ಭಾಗಿಯಾಗಿದ್ದಾರೆ. ಸಫಾರಿ ವೀಕ್ಷಿಸಿ, ಕಾನನದ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಜೊತೆಗೆ ಅರಣ್ಯ ಸಂರಕ್ಷಣೆ ಮಹತ್ವ ಅರಿತಿದ್ದಾರೆ. 8,410 ಮಂದಿಯಲ್ಲಿ 7,019 ವಿದ್ಯಾರ್ಥಿಗಳು, 655 ಶಿಕ್ಷಕರು, 197 ಗ್ರಾಮ ಪಂಚಾಯತಿ ಸಿಬ್ಬಂದಿ, ಸದಸ್ಯರು, 395 ಸ್ಥಳೀಯ ರೈತರು ಮತ್ತು 143 ಮಂದಿ ಗಿರಿಜನರಿದ್ದು, 2023ರ ಮಾರ್ಚ್ 3ರಿಂದ 2024ರ ಮಾರ್ಚ್ 8ರ ವರೆಗೆ 162 ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
2023ರಲ್ಲಿ ಅಂದಿನ ಬಂಡೀಪುರ ಸಿಎಫ್ಒ ಆಗಿದ್ದ ಡಾ.ಪಿ.ರಮೇಶ್ ಕುಮಾರ್ ಅವರಿಂದ ಬಂಡೀಪುರ ಯುವ ಮಿತ್ರ ಎಂಬ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿತ್ತು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸುವರ್ಣ ಮಹೋತ್ಸವದ ಅಂಗವಾಗಿ ಈ ಕಾರ್ಯಕ್ರಮ ರೂಪಿಸಿ ವಿದ್ಯಾರ್ಥಿಗಳಿಗೆ ಉಚಿತ ಸಫಾರಿ ಮಾಡಿಸಿ ಪ್ರಕೃತಿ ಶಿಕ್ಷಣ ನೀಡುವ ಕಾರ್ಯಕ್ರಮ ಇದಾಗಿದೆ.
ಬಂಡೀಪುರ ಯುವ ಮಿತ್ರ ಕಾರ್ಯಕ್ರಮದಲ್ಲಿ ಭಾಗಿಯಾದ ವಿದ್ಯಾರ್ಥಿಗಳಿಗೆ "ಪರಿಸರ ಸ್ವಯಂ ಸೇವಕರು" ಎಂಬ ಗುರುತಿನ ಚೀಟಿ ಕೊಟ್ಟು ಅರಣ್ಯ ರಕ್ಷಣೆ ಜಾಗೃತಿಗೆ ಪ್ರೇರಣೆ ನೀಡುವ ವಿಶಿಷ್ಟ ಕಾರ್ಯಕ್ರಮ ಇದಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications