ಪಣ್ಯದಹುಂಡಿ ಗ್ರಾಮದಲ್ಲಿ ಯುವ ರೈತನ ಮದುವೆಗೆ ವಿಶೇಷ ಅತಿಥಿಗಳಾದ ಎತ್ತುಗಳು
ಚಾಮರಾಜನಗರ, ಡಿಸೆಂಬರ್, 13: ಮದುವೆ ಅಂದರೆ ವರನ ಐಷಾರಾಮಿ ಕಾರು, ಬೈಕ್ ತಂದು ನಿಲ್ಲಿಸುವುದು ಸಾಮಾನ್ಯವಾಗಿದೆ. ಆದರೆ ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಗ್ರಾಮದಲ್ಲೊಬ್ಬ ಯುವ ರೈತ ತನ್ನ ನೆಚ್ಚಿನ ಜೋಡೆತ್ತುಗಳಿಗೆ ವಿಶೇಷ ವೇದಿಕೆ ನಿರ್ಮಿಸಿ, ತನ್ನ ಮದುವೆಯನ್ನು ವಿಶಿಷ್ಟವಾಗಿ ನೆರವೇರಿಸಿಕೊಂಡಿದ್ದಾರೆ.
ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಗ್ರಾಮದಲ್ಲಿ ವಿಶೇಷ ಮದುವೆಯೊಂದು ನಡೆದಿದ್ದು, ಕೃಷಿ ಚಟುವಟಿಕೆಗೆ ನೆರವಾಗುವ ತಮ್ಮ ಎತ್ತುಗಳನ್ನು ಮದುವೆ ಛತ್ರಕ್ಕೆ ಕರೆತಂದಿದ್ದಾರೆ. ಎತ್ತುಗಳಿಗಾಗಿಯೇ ವೇದಿಕೆ ನಿರ್ಮಿಸಿ ಗೋಪ್ರೀತಿ ತೋರುವ ಮೂಲಕ ಮದುವೆ ಸಂಭ್ರಮವನ್ನು ಹೆಚ್ಚಿಸಿದ್ದಾರೆ.
ವಿಶಿಷ್ಟವಾಗಿ ನಡೆದ ಯುವ ರೈತನ ವಿವಾಹ
ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದ ಮಹೇಶ್ ಅವರೊಟ್ಟಿಗೆ ತೊರವಳ್ಳಿ ಗ್ರಾಮದ ಯೋಗಿತಾ ಸಪ್ತಪದಿ ತುಳಿದಿದ್ದಾರೆ. ತಾವು ಸಾಕಿದ ಎತ್ತುಗಳನ್ನು ಕರೆತಂದು ಅವುಗಳು ಕೂಡ ವಿವಾಹಕ್ಕೆ ಸಾಕ್ಷಿಯಾಗಬೇಕು ಅನ್ನುವುದು ವರನ ಆಸೆಯಾಗಿತ್ತು. ಆದ್ದರಿಂದ ವರನ ಕುಟುಂಬಸ್ಥರು ಎತ್ತುಗಳನ್ನು ಸಿಂಗರಿಸಿ- ಅದಕ್ಕಾಗಿ ವೇದಿಕೆಯನ್ನು ನಿರ್ಮಿಸಿ ವಧು-ವರರಿಗೆ ಜೋಡೆತ್ತುಗಳಿಂದ ಆಶೀರ್ವಾದವನ್ನು ಕೊಡಿಸಿ ವಿಶೇಷವಾಗಿ ಮದುವೆ ನಡೆಸಿದ್ದಾರೆ.

ಎರಡು ಎತ್ತುಗಳ ಮೌಲ್ಯ ಎಷ್ಟು?
ಎತ್ತುಗಳು ಎರಡು ಲಕ್ಷ ರೂಪಾಯಿ ಮೌಲ್ಯದ್ದಾಗಿದ್ದು, ಅವುಗಳಿಂದಲೇ ಕೃಷಿ ಚಟುವಟಿಕೆ ನಡೆಸುತ್ತೇವೆ. ಮದುವೆ ಸಮಾರಂಭಕ್ಕೆ ಎತ್ತುಗಳನ್ನು ಕರೆತರೋಣವೆಂದು ಪುತ್ರ ಮಹೇಶ್ ಆಸೆ ಪಟ್ಟಿದ್ದ. ಆದ್ದರಿಂದ ಮದುವೆ ಛತ್ರಕ್ಕೆ ಅವುಗಳನ್ನು ಕರೆತಂದೆವು ಎಂದು ವರನ ತಂದೆ ಬಸವರಾಜಪ್ಪ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೃಷಿ ಚಟುವಟಿಕೆಯಿಂದ ವಿಮುಖರಾಗುತ್ತಿರುವವರೇ ಹೆಚ್ಚಾಗಿದ್ದಾರೆ. ಆದರೆ ಇದೀಗ ಯುವಕನೋರ್ವ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ತಾನು ಸಾಕಿದ ಎತ್ತುಗಳ ಮೇಲೆ ಅಪಾರ ಪ್ರೀತಿ ಇಟ್ಟಿರುವುದು ಶ್ಲಾಘನೀಯವಾಗಿದೆ. ವ್ಯವಸಾಯದಿಂದ ವಿಮುಖರಾಗುವವರು ಇವರನ್ನು ನೋಡಿ ಕಲಿಯಬೇಕು ಎಂದು ಸ್ಥಳೀಯರಾದ ಲಿಂಗರಾಜು ಹರ್ಷ ವ್ಯಕ್ತಪಡಿಸಿದ್ದಾರೆ.

ಮದುವೆ ಎಂದರೆ ನೆನಪಿನಲ್ಲಿ ಉಳಿಯುವ ಜೀವನದ ಘಳಿಗೆಯಾಗಿದ್ದು, ಅದನ್ನು ಮತ್ತಷ್ಟು ಸ್ಮರಣೀಯ ಮಾಡಿಕೊಂಡಿರುವ ಯುವ ರೈತ ಮಹೇಶ್ ಅವರ ಗೋಪ್ರೀತಿ ನಿಜಕ್ಕೂ ಯುವ ಪೀಳಿಗೆಗೆ ಮಾದರಿಯಾಗಿದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications