Get Updates
Get notified of breaking news, exclusive insights, and must-see stories!

ಚಾಮರಾಜನಗರ: ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕ್ವಾಟ್ರಸ್ ಕೊಡಲ್ಲ..!

ಚಾಮರಾಜನಗರ, ಏಪ್ರಿಲ್ 9: ಆರನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು ಮತ್ತು ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ನೀಡಿದ ಸಿಬ್ಬಂದಿಗಳಿಗೆ ಹಿರಿಯ ಅಧಿಕಾರಿಗಳು ವಸತಿಗೃಹ ಖಾಲಿ ಮಾಡಿಸಲು ನೋಟಿಸ್ ನೀಡುವ ಮೂಲಕ ಬೆದರಿಕೆ ಹಾಕಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರದ ಬಸ್ ಡಿಪೋ ಬಳಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ನೌಕರರಿಗೆ ವಸತಿ ಗೃಹವಿದ್ದು, ಅಲ್ಲಿ ಕೆಲವರಿಗೆ ವಸತಿ ಗೃಹವನ್ನು ಹಂಚಿಕೆ ಮಾಡಲಾಗಿದೆ. ಏ.7ರಿಂದ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮತ್ತು ನೌಕರರು ಅನಿರ್ದಿಷ್ಟ ಕಾಲ ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ, ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ವಸತಿ ಗೃಹದಲ್ಲಿ ವಾಸವಾಗಿರುವ ಕುಟುಂಬಗಳನ್ನು ಖಾಲಿ ಮಾಡಲಿಸಲು ನೋಟಿಸ್ ಜಾರಿ ಮಾಡಿದ್ದು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಿದಂತಾಗಿದೆ.

ಚಾಮರಾಜನಗರ ಜಿಲ್ಲೆಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್ಸುಗಳು ಸಂಚಾರ ಮಾಡದೇ ಇರುವ ಹಿನ್ನಲೆಯಲ್ಲಿ ಮುಷ್ಕರವನ್ನು ಬದಿಗೊತ್ತಿ ಕರ್ತವ್ಯಕ್ಕೆ ಹಾಜರಾಗಬೇಕು, ಇಲ್ಲದಿದ್ದರೆ ವಸತಿ ಗೃಹ ಹಂಚಿಕೆಯ ಆದೇಶವನ್ನು ರದ್ದುಪಡಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ನೋಟಿಸ್ ಜಾರಿ ಮಾಡಿ ಬೀಗ ಹಾಕಿದ ವಸತಿ ಗೃಹಗಳ ಬಾಗಿಲಲ್ಲಿ ನೋಟಿಸ್ ಅಂಟಿಸಿದ್ದಾರೆ. ಇದರಿಂದ ಕೆಲವು ನೌಕರರು ಭಯಭೀತರಾಗಿದ್ದಾರೆ.

 Bus Strike: Transport Dept Issued Notice To Workers To Empty Quarters

ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರ ಆರನೇ ವೇತನ ಆಯೋಗ ವರದಿಯನ್ನು ಜಾರಿ ಮಾಡಲು ಸದ್ಯಕ್ಕೆ ಒಪ್ಪಿದಂತೆ ಕಾಣುತ್ತಿಲ್ಲ. ಇದರಿಂದ ಮುಷ್ಕರ ಮುಂದುವರೆದಿದ್ದು, ಪ್ರಯಾಣಿಕರ ಪರದಾಟವೂ ಮುಂದುವರೆದಿದೆ. ಒಂದೆಡೆ ಮೇಲಾಧಿಕಾರಿಗಳ ಒತ್ತಡ ಮತ್ತು ಬೆದರಿಕೆ ಮತ್ತೊಂದೆಡೆ ಪ್ರಯಾಣಿಕರ ಹಿಡಿಶಾಪದ ನಡುವೆ ಸಾರಿಗೆ ನೌಕರರು ಹೈರಾಣರಾಗಿದ್ದಂತು ಸತ್ಯ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+