ಚಾಮರಾಜನಗರ: ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕ್ವಾಟ್ರಸ್ ಕೊಡಲ್ಲ..!
ಚಾಮರಾಜನಗರ, ಏಪ್ರಿಲ್ 9: ಆರನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಸಿಬ್ಬಂದಿಗಳು ಮತ್ತು ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ನೀಡಿದ ಸಿಬ್ಬಂದಿಗಳಿಗೆ ಹಿರಿಯ ಅಧಿಕಾರಿಗಳು ವಸತಿಗೃಹ ಖಾಲಿ ಮಾಡಿಸಲು ನೋಟಿಸ್ ನೀಡುವ ಮೂಲಕ ಬೆದರಿಕೆ ಹಾಕಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರದ ಬಸ್ ಡಿಪೋ ಬಳಿ ಕೆಎಸ್ಆರ್ಟಿಸಿ ಸಿಬ್ಬಂದಿ ನೌಕರರಿಗೆ ವಸತಿ ಗೃಹವಿದ್ದು, ಅಲ್ಲಿ ಕೆಲವರಿಗೆ ವಸತಿ ಗೃಹವನ್ನು ಹಂಚಿಕೆ ಮಾಡಲಾಗಿದೆ. ಏ.7ರಿಂದ ಕೆಎಸ್ಆರ್ಟಿಸಿ ಸಿಬ್ಬಂದಿ ಮತ್ತು ನೌಕರರು ಅನಿರ್ದಿಷ್ಟ ಕಾಲ ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ, ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ವಸತಿ ಗೃಹದಲ್ಲಿ ವಾಸವಾಗಿರುವ ಕುಟುಂಬಗಳನ್ನು ಖಾಲಿ ಮಾಡಲಿಸಲು ನೋಟಿಸ್ ಜಾರಿ ಮಾಡಿದ್ದು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಿದಂತಾಗಿದೆ.
ಚಾಮರಾಜನಗರ ಜಿಲ್ಲೆಯಾದ್ಯಂತ ಕೆಎಸ್ಆರ್ಟಿಸಿ ಬಸ್ಸುಗಳು ಸಂಚಾರ ಮಾಡದೇ ಇರುವ ಹಿನ್ನಲೆಯಲ್ಲಿ ಮುಷ್ಕರವನ್ನು ಬದಿಗೊತ್ತಿ ಕರ್ತವ್ಯಕ್ಕೆ ಹಾಜರಾಗಬೇಕು, ಇಲ್ಲದಿದ್ದರೆ ವಸತಿ ಗೃಹ ಹಂಚಿಕೆಯ ಆದೇಶವನ್ನು ರದ್ದುಪಡಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ನೋಟಿಸ್ ಜಾರಿ ಮಾಡಿ ಬೀಗ ಹಾಕಿದ ವಸತಿ ಗೃಹಗಳ ಬಾಗಿಲಲ್ಲಿ ನೋಟಿಸ್ ಅಂಟಿಸಿದ್ದಾರೆ. ಇದರಿಂದ ಕೆಲವು ನೌಕರರು ಭಯಭೀತರಾಗಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರ ಆರನೇ ವೇತನ ಆಯೋಗ ವರದಿಯನ್ನು ಜಾರಿ ಮಾಡಲು ಸದ್ಯಕ್ಕೆ ಒಪ್ಪಿದಂತೆ ಕಾಣುತ್ತಿಲ್ಲ. ಇದರಿಂದ ಮುಷ್ಕರ ಮುಂದುವರೆದಿದ್ದು, ಪ್ರಯಾಣಿಕರ ಪರದಾಟವೂ ಮುಂದುವರೆದಿದೆ. ಒಂದೆಡೆ ಮೇಲಾಧಿಕಾರಿಗಳ ಒತ್ತಡ ಮತ್ತು ಬೆದರಿಕೆ ಮತ್ತೊಂದೆಡೆ ಪ್ರಯಾಣಿಕರ ಹಿಡಿಶಾಪದ ನಡುವೆ ಸಾರಿಗೆ ನೌಕರರು ಹೈರಾಣರಾಗಿದ್ದಂತು ಸತ್ಯ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್












Click it and Unblock the Notifications