ಏ. 24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ, ತಯಾರಿಗಳು
ಚಾಮರಾಜನಗರ, ಏಪ್ರಿಲ್ 20: ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿಗಳು ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂಬ ಮಾತಿತ್ತು. ಈ ಮಾತನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಟ್ಟಕ್ಕೆ ಪದೇ ಪದೇ ಭೇಟಿ ನೀಡುವ ಮೂಲಕ ಸುಳ್ಳಾಗಿಸಿದ್ದಾರೆ. ಈಗ ಏಪ್ರಿಲ್ 24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆಯನ್ನು ಆಯೋಜನೆ ಮಾಡಲಾಗಿದೆ. ಈ ಸಚಿವ ಸಂಪುಟ ಸಭೆಯಲ್ಲಿ ಶಿಷ್ಟಾಚಾರ ಕಡ್ಡಾಯವಾಗಿ ಪಾಲನೆಯಾಗಬೇಕು ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಈಗಾಗಲೇ ಸೂಚನೆ ನೀಡಿದ್ದಾರೆ.
ವಿಶೇಷ ಸಚಿವ ಸಂಪುಟ ಸಭೆಯ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮತ್ತು ಶಾಸಕ ಎಂ. ಆರ್. ಮಂಜುನಾಥ್ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಭೆಯ ಪೂರ್ವ ಸಿದ್ದತೆಗಳನ್ನು ಪರಿಶೀಲನೆ ನಡೆಸಿದರು. ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದರು. ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಅಧಿಕಾರಿಗಳು ಆಗಮಿಸುವ ಹಿನ್ನಲೆಯಲ್ಲಿ ತಯಾರಿಯನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ನಿರ್ದೇಶನ ನೀಡಿದರು.

* ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು, ಸಚಿವರು ಪಾಲ್ಗೊಳ್ಳಲಿರುವ ಹಿನ್ನೆಲೆಯಲ್ಲಿ ವಿವಿಧ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿದ ಜಿಲ್ಲಾಧಿಕಾರಿಗಳು ಸಿದ್ದತೆಗಳ ಸಂಬಂಧ ಪರಿಶೀಲನೆ ನಡೆಸಿದರು.
* ಶಾಶ್ವತ ಹೆಲಿಪ್ಯಾಡ್ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು. ಪಾರ್ಕಿಂಗ್ಗೆ ನಿಗದಿಪಡಿಸಿರುವ ಜಾಗದಲ್ಲಿ ನಿರ್ವಹಿಸಬೇಕಿರುವ ಕೆಲಸ ಕಾರ್ಯಗಳ ಬಗ್ಗೆ ನಿರ್ದೇಶನ ಕೊಟ್ಟರು. ಹೆಚ್ಚುವರಿ ಹೆಲಿಪ್ಯಾಡ್ ನಿಮಾಣ ಮಾಡುವ ಸಂಬಂಧ ಸ್ಥಳ ಪರಿಶೀಲಿಸಿದರು.
* ಮುಖ್ಯಮಂತ್ರಿಗಳು, ಸಚಿವರು, ಹಿರಿಯ ಅಧಿಕಾರಿಗಳ ವಾಸ್ತವ್ಯಕ್ಕಾಗಿ ನಿಗದಿಯಾಗಿರುವ ವಸತಿಗೃಹಗಳಿಗೆ ಭೇಟಿಕೊಟ್ಟು ಕೈಗೊಳ್ಳಲಾಗಿರುವ ಸ್ವಚ್ಚತೆ, ಸಿದ್ದತೆ, ಇನ್ನಿತರೆ ವ್ಯವಸ್ಥೆಗಳನ್ನು ವೀಕ್ಷಿಸಿದರು. ವಸತಿಗೃಹ ಬಳಿ ವಾಹನಗಳ ನಿಲುಗಡೆಗೆ ಇರುವ ಸ್ಥಳವನ್ನು ಸಹ ವೀಕ್ಷಿಸಿ ಅಧಿಕಾರಿಗಳಿಗೆ ಸೂಚನೆ ಕೊಟ್ಟರು.
* ಸಚಿವ ಸಂಪುಟ ಸಭೆ ನಿಗದಿಯಾಗಿರುವ ದೀಪದಗಿರಿ ಒಡ್ಡುವಿನ ಸ್ಥಳಕ್ಕೆ ಭೇಟಿ ನೀಡಿ ಪೂರ್ವ ತಯಾರಿ ಪ್ರಕ್ರಿಯೆಯನ್ನು ಪರಿಶೀಲಿಸಿದರು. ಸಭೆ ನಡೆಯುವ ಸ್ಥಳದಲ್ಲಿ ಯಾವ ಯಾವ ಸಿದ್ದತೆಗಳು ಇರಬೇಕು ಹಾಗೂ ವ್ಯವಸ್ಥೆಗಳು ಕೈಗೊಳ್ಳುತ್ತಿರುವ ಬಗ್ಗೆ ವಿವರವಾಗಿ ವೀಕ್ಷಿಸಿ ಸಲಹೆ ಸೂಚನೆಗಳನ್ನು ಸಂಬಂಧಪಟ್ಟವರಿಗೆ ನೀಡಿದರು.
* ಶಿಷ್ಟಾಚಾರ, ಸ್ವಾಗತ, ಭದ್ರತೆ ಹಾಗೂ ಸಚಿವ ಸಂಪುಟ ಸಭೆ ಸ್ಥಳದಲ್ಲಿ ಯಾವುದೇ ಕೊರತೆಯಾಗದಂತೆ ಎಲ್ಲಾ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು, ಶಾಸಕರು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, "ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯುವ ಅವಕಾಶ ದೊರೆತಿದೆ. ಇದು ನಮ್ಮ ವಿಭಾಗಕ್ಕೆ ಮುಖ್ಯವಾಗಿದೆ. ಅತ್ಯಂತ ಪ್ರಮುಖವಾಗಿರುವ ಸಚಿವ ಸಂಪುಟ ಸಭೆಯ ಪೂರ್ವಭಾವಿ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಉತ್ಸಾಹದಿಂದ ನಿರ್ವಹಿಸುತ್ತಿದ್ದು, ಇದರ ಯಶಸ್ಸಿಗೆ ಒಂದು ತಂಡವಾಗಿ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ" ಎಂದರು.
ಶಾಸಕ ಎಂ. ಆರ್. ಮಂಜುನಾಥ್ ಮಾತನಾಡಿ, "ಸಚಿವ ಸಂಪುಟ ಸಭೆ ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ನಡೆಯುತ್ತಿರುವುದು ಸಂತಸದ ವಿಷಯವಾಗಿದೆ. ಕ್ಷೇತ್ರ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ದಿಯ ಉದ್ದೇಶದ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದೆ" ಎಂದು ತಿಳಿಸಿದರು.
ಸಚಿವ ಸಂಪುಟ ಸಭೆ ನಿರ್ವಹಣೆಗಾಗಿ ರಚಿಸಲಾಗಿರುವ ಅಧಿಕಾರಿಗಳ ಸಮಿತಿಯ ಸಭೆಯನ್ನು ನಡೆಸಲಾಯಿತು. ಸಮಿತಿಗಳು ನಿಗದಿಪಡಿಸಲಾಗಿರುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶವಾಗಬಾರದು. ಸಾಕಷ್ಟು ಮುಂಚಿತವಾಗಿಯೇ ಎಲ್ಲಾ ಕೆಲಸಗಳು ಪೂರ್ಣಗೊಂಡಿರಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications