ಗುಂಡ್ಲುಪೇಟೆ: ಬೈಕ್ಗೆ ಡಿಕ್ಕಿಯಾಗಿ ಶೆಡ್ಗೆ ನುಗ್ಗಿದ ಕಾರು; ಓರ್ವ ಸಾವು, ಇಬ್ಬರಿಗೆ ಗಾಯ
ಚಾಮರಾಜನಗರ, ನವೆಂಬರ್, 22: ಬೈಕ್ಗೆ ಡಿಕ್ಕಿ ಹೊಡೆದು ಬಳಿಕ ರಸ್ತೆಬದಿ ಶೆಡ್ಗೆ ಕಾರು ನುಗ್ಗಿದೆ. ಪರಿಣಾಮ ಓರ್ವ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕೂತನೂರು ಸಮೀಪ ಶುಕ್ರವಾರ (ನವೆಂಬರ್ 22) ನಡೆದಿದೆ.
ಕೂತನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಬೈಕ್ಗೆ ಕಾರು ಡಿಕ್ಕಿಯಾಗಿ ಬಳಿಕ ಶೆಡ್ಗೆ ನುಗ್ಗಿದ ಪರಿಣಾಮ ಕೂತನೂರು ಗ್ರಾಮದವ ನಿಂಗಶೆಟ್ಟಿ(46) ಮೃತಪಟ್ಟಿದ್ದಾರೆ. ಮಹದೇವ ಮತ್ತು ಭೀಮನಬೀಡು ಗ್ರಾಮದ ಮಾದಶೆಟ್ಟಿ ತೀವ್ರವಾಗಿ ಗಾಯಗೊಂಡ್ಡಿದ್ದು, ಇವರನ್ನು ಚಿಕಿತ್ಸೆಗಾಗಿ ಮೈಸೂರಿಗೆ ರವಾನೆ ಮಾಡಲಾಗಿದೆ.

ಮೂವರು ಎಲೆಕೋಸು ಕಟಾವಿಗೆ ಹೋಗಿದ್ದು, ಮನೆಗೆ ಬೈಕ್ನಲ್ಲಿ ತೆರಳಲು ರಸ್ತೆ ಬದಿ ನಿಂತಿದ್ದರು. ಈ ವೇಳೆ ಭೀಮನಬೀಡು ಕಡೆಯಿಂದ ಬಂದ ಕಾರು ಡಿಕ್ಕಿಯಾಗಿ ಮೂವರ ಸ್ಥತಿ ಗಂಭೀರವಾಗಿತ್ತು. ಬಳಿಕ ಸುತ್ತಲಿದ್ದವರು ರಕ್ಷಣೆಗೆ ಧಾವಿಸಿದ್ದು, ತುರ್ ತುಚಿಕಿತ್ಸಾ ವಾಹನದಲ್ಲಿ ಮೂವರನ್ನು ಮೈಸೂರಿಗೆ ಕರೆದುಕೊಂಡು ಹೋಗುವಾಗ ತೀವ್ರವಾಗಿ ಗಾಯಗೊಂಡಿದ್ದ ನಿಂಗಶೆಟ್ಟಿ ಮೃತಪಟ್ಟಿದ್ದಾರೆ.
ಇನ್ನು ಕಾರು ಚಾಲಕ, ಕಾರು ಮತ್ತು ಬೈಕ್ನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಭೀಮನಬೀಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಹೋಗುತ್ತಿತ್ತು. ಚಾಲಕ ಮದ್ಯಪಾನ ಮಾಡಿದ್ದ ಕಾರಣ ರಸ್ತೆಯ ಬಲಭಾಗದಲ್ಲಿ ನಿಂತಿದ್ದವರಿಗೆ ಡಿಕ್ಕಿಯಾಗಿ ಶೆಡ್ಗೆ ನುಗ್ಗಿದ ಕಾರು ಕೊನೆಗೆ ಜಮೀನೊಳಗೆ ಬಂದು ನಿಂತಿದೆ.
ಇದರಿಂದ ಶೆಡ್ ಸಂಪೂರ್ಣ ಹಾನಿಯಾಗಿದ್ದು, ಬೈಕ್ ಕೂಡ ನಜ್ಜುಗುಜ್ಜಾಗಿದೆ. ಆದ್ದರಿಂದ ಕಾರು ಚಾಲಕನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಕೂತನೂರು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಮದ್ಯಪಾನ ಮಾಡಿ ಕಾರು ಚಲಾಯಿಸಿದ್ದ ಬಗ್ಗೆ ತನಿಖೆಯಿಂದ ತಿಳಿದುಬರಬೇಕಿದ್ದು, ಸದ್ಯ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications