ಗುಂಡ್ಲುಪೇಟೆ: ಬೈಕ್ಗೆ ಡಿಕ್ಕಿಯಾಗಿ ಶೆಡ್ಗೆ ನುಗ್ಗಿದ ಕಾರು; ಓರ್ವ ಸಾವು, ಇಬ್ಬರಿಗೆ ಗಾಯ
ಚಾಮರಾಜನಗರ, ನವೆಂಬರ್, 22: ಬೈಕ್ಗೆ ಡಿಕ್ಕಿ ಹೊಡೆದು ಬಳಿಕ ರಸ್ತೆಬದಿ ಶೆಡ್ಗೆ ಕಾರು ನುಗ್ಗಿದೆ. ಪರಿಣಾಮ ಓರ್ವ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕೂತನೂರು ಸಮೀಪ ಶುಕ್ರವಾರ (ನವೆಂಬರ್ 22) ನಡೆದಿದೆ.
ಕೂತನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಬೈಕ್ಗೆ ಕಾರು ಡಿಕ್ಕಿಯಾಗಿ ಬಳಿಕ ಶೆಡ್ಗೆ ನುಗ್ಗಿದ ಪರಿಣಾಮ ಕೂತನೂರು ಗ್ರಾಮದವ ನಿಂಗಶೆಟ್ಟಿ(46) ಮೃತಪಟ್ಟಿದ್ದಾರೆ. ಮಹದೇವ ಮತ್ತು ಭೀಮನಬೀಡು ಗ್ರಾಮದ ಮಾದಶೆಟ್ಟಿ ತೀವ್ರವಾಗಿ ಗಾಯಗೊಂಡ್ಡಿದ್ದು, ಇವರನ್ನು ಚಿಕಿತ್ಸೆಗಾಗಿ ಮೈಸೂರಿಗೆ ರವಾನೆ ಮಾಡಲಾಗಿದೆ.

ಮೂವರು ಎಲೆಕೋಸು ಕಟಾವಿಗೆ ಹೋಗಿದ್ದು, ಮನೆಗೆ ಬೈಕ್ನಲ್ಲಿ ತೆರಳಲು ರಸ್ತೆ ಬದಿ ನಿಂತಿದ್ದರು. ಈ ವೇಳೆ ಭೀಮನಬೀಡು ಕಡೆಯಿಂದ ಬಂದ ಕಾರು ಡಿಕ್ಕಿಯಾಗಿ ಮೂವರ ಸ್ಥತಿ ಗಂಭೀರವಾಗಿತ್ತು. ಬಳಿಕ ಸುತ್ತಲಿದ್ದವರು ರಕ್ಷಣೆಗೆ ಧಾವಿಸಿದ್ದು, ತುರ್ ತುಚಿಕಿತ್ಸಾ ವಾಹನದಲ್ಲಿ ಮೂವರನ್ನು ಮೈಸೂರಿಗೆ ಕರೆದುಕೊಂಡು ಹೋಗುವಾಗ ತೀವ್ರವಾಗಿ ಗಾಯಗೊಂಡಿದ್ದ ನಿಂಗಶೆಟ್ಟಿ ಮೃತಪಟ್ಟಿದ್ದಾರೆ.
ಇನ್ನು ಕಾರು ಚಾಲಕ, ಕಾರು ಮತ್ತು ಬೈಕ್ನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಭೀಮನಬೀಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಹೋಗುತ್ತಿತ್ತು. ಚಾಲಕ ಮದ್ಯಪಾನ ಮಾಡಿದ್ದ ಕಾರಣ ರಸ್ತೆಯ ಬಲಭಾಗದಲ್ಲಿ ನಿಂತಿದ್ದವರಿಗೆ ಡಿಕ್ಕಿಯಾಗಿ ಶೆಡ್ಗೆ ನುಗ್ಗಿದ ಕಾರು ಕೊನೆಗೆ ಜಮೀನೊಳಗೆ ಬಂದು ನಿಂತಿದೆ.
ಇದರಿಂದ ಶೆಡ್ ಸಂಪೂರ್ಣ ಹಾನಿಯಾಗಿದ್ದು, ಬೈಕ್ ಕೂಡ ನಜ್ಜುಗುಜ್ಜಾಗಿದೆ. ಆದ್ದರಿಂದ ಕಾರು ಚಾಲಕನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಕೂತನೂರು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಮದ್ಯಪಾನ ಮಾಡಿ ಕಾರು ಚಲಾಯಿಸಿದ್ದ ಬಗ್ಗೆ ತನಿಖೆಯಿಂದ ತಿಳಿದುಬರಬೇಕಿದ್ದು, ಸದ್ಯ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications