ಚಾಮರಾಜನಗರ: ಕಟ್ಟಡ ನಿರ್ಮಾಣ ಕಾರ್ಮಿಕರ ಐಡಿ ಕಾಳಸಂತೆಯಲ್ಲಿ ಮಾರಾಟ!
ಚಾಮರಾಜನಗರ, ಏ. 30: ಲಾಕ್ ಡೌನ್ ಸಮಯದಲ್ಲಿ ಕಟ್ಟಡ ಕಾರ್ಮಿಕರ ಅಮಾಯಕತೆಯನ್ನೇ ಬಂಡವಾಳ ಮಾಡಿಕೊಂಡಿರುವ ದುಷ್ಕರ್ಮಿಗಳು ಜಿಲ್ಲೆಯಲ್ಲಿ ಕಾಳ ಸಂತೆಯಲ್ಲಿ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಗಳನ್ನು ಮಾರಾಟ ಮಾಡುತ್ತಿದ್ದಾರೆ. ಮೊದಲೇ ದುಡಿಮೆಯಿಲ್ಲದೆ ಸಂಕಷ್ಟದಲ್ಲಿರುವ ಕಟ್ಟಡ ನಿರ್ಮಾಣ ಕಾರ್ಮಿಕರು ಕೇಂದ್ರ ಸರ್ಕಾರದ ಹಣ ಪಡೆಯಲು ಕೈಯಲ್ಲಿದ್ದ ಬಿಡಿಗಾಸನ್ನು ಕಳೆದುಕೊಳ್ಳುತ್ತಿದ್ದಾರೆ.
ಈಗಾಗಲೇ ಅವಧಿ ಮೀರಿರುವ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಯೊಂದಕ್ಕೆ 300 ರೂಪಾಯಿಗಳನ್ನು ನಿಗದಿ ಮಾಡಿ ಜಿಲ್ಲೆಯಲ್ಲಿ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ ಬಂದಿದೆ.
ಕೇಂದ್ರ ಸರ್ಕಾರ ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗೆ ಎರಡು ಸಾವಿರ ರೂ. ಜಮಾ ಮಾಡಿದ ಬೆನ್ನಲ್ಲೆ ಗುರುತಿನ ಚೀಟಿ ಪಡೆಯಲು ಕಾರ್ಮಿಕರು ಮುಗಿಬಿದ್ದಿದ್ದಾರೆ.

ಐಡಿ ವಿತರಿಸಲು ಸೇವಾ ಶುಲ್ಕ ವಾಗಿ 50 ರೂ. ನಿಗದಿ ಪಡಿಸಿ ಐಕ್ಯ ಬಿಸಿನೆಸ್ ಸಲ್ಯೂಷನ್ ಸೆಂಟರ್ ಎಂಬ NGOಗೆ ಕಾರ್ಮಿಕ ಇಲಾಖೆ ಟೆಂಡರ್ ನೀಡಿತ್ತು.
ಚಾಮರಾಜನಗರ ಜಿಲ್ಲೆಯಲ್ಲಿ 47000 ಜನರನ್ನ ಕಟ್ಟಡ ಕಾರ್ಮಿಕರೆಂದು ಗುರುತಿಸಲಾಗಿತ್ತು, 12634 ಜನರಿಗೆ ಈ ಹಿಂದೆಯೆ ಗುರುತಿನ ಚೀಟಿ ವಿತರಿಸಲಾಗಿತ್ತು.
ಐಕ್ಯ ಸಂಸ್ಥೆಯ ಮಾಜಿ ನೌಕರ ಹಾಗೂ ಮಹಿಳೆಯೊಬ್ಬರು ಕೇಂದ್ರ ಸರ್ಕಾರದ ಹಣ ಪಡೆಯಲು ಕಾರ್ಮಿಕ ಇಲಾಖೆಯ ಐಡಿ ಅವಶ್ಯವೆಂದು ಪ್ರಚಾರ ನಡೆಸಿದ್ದರು.
ಗುರುತಿನ ಚೀಟಿ ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಮಹಿಳೆ, ಐಕ್ಯ ಸಂಸ್ಥೆ ಮಾಜಿ ಪ್ರತಿನಿಧಿ ಹಾಗೂ ಐಕ್ಯ ಸಂಸ್ಥೆ ವಿರುದ್ದ ದೂರು ದಾಖಲಿಸಿರುವ ಕಾರ್ಮಿಕ ಇಲಾಖೆ. ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications