ರಾಜ್ಯಕ್ಕೆ ದ್ರೋಹ ಬಗೆಯುತ್ತಿರುವ CWMA ಬ್ಯಾನ್ ಆಗ್ಬೇಕು ಅಷ್ಟೇ; ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳ ಆಕ್ರೋಶ
ಚಾಮರಾಜನಗರ, ಅಕ್ಟೋಬರ್, 12: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ಚಾಮರಾಜನಗರದಲ್ಲಿ ಕನ್ನಡಪರ ಸಂಘನೆಗಳು ಪ್ರತಿಭಟನೆ ನಡೆಸಿದವು.
ತಮಿಳುನಾಡಿಗೆ ಮತ್ತೆ ನೀರು ಹರಿಸಬೇಕೆಂದು ಆದೇಶ ಬಂದಿರುವ ಹಿನ್ನೆಲೆ ಕನ್ನಡಪರ ಸಂಘಟನೆಗಳು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದವು. ನಗರದ ಚಾಮರಾಜೇಶ್ವರ ದೇವಾಲಯದಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನೆ ಮೆರವಣಿಗೆ ಸಾಗಿದ್ದು, ಈ ವೇಳೆ ಮಂಡಳಿಯಿಂದ ನಿರಂತರವಾಗಿ ಅನ್ಯಾಯವಾಗುತ್ತಿದೆ. ನಮ್ಮ ರಾಜ್ಯದ ಹಿತ ಕಾಯದ ಕಾವೇರಿ ನೀರು ನಿರ್ವಹಣಾ ಮಂಡಳಿ ನಮಗೆ ಬೇಡವೇ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಳೇ ಸೈಕಲ್, ಕಬ್ಬಿಣ, ಸೀಸ ಹಿಡಿದು ಆಕ್ರೋಶ
ಇತ್ತೀಚೆಗಷ್ಟೇ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಕಳೆದ 1 ತಿಂಗಳಿನಿಂದಲೂ ನಿರಂತರವಾಗಿ ಪ್ರತಿಭಟನೆ ನಡೆಸಿದ್ದು,ಗುಜರಿ ವಸ್ತುಗಳನ್ನು ಹಿಡಿದು ಆಕ್ರೋಶ ಹೊರಹಾಕಿದ್ದರು.
ಇದೇ ವೇಳೆ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಿರುವ ರಾಜ್ಯ ಸರ್ಕಾರ, ಕೇಂದ್ರ ಹಾಗೂ ತಮಿಳುನಾಡು ಸರ್ಕಾರಗಳು ತುಕಾಲಿ ಸರ್ಕಾರಗಳಾಗಿವೆ ಎಂದು ಆಕ್ರೋಶ ಹೊರಹಾಕಿದ್ದರು.
ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ ಹಾಗೂ ಕೇಂದ್ರ ಸರ್ಕಾರ ರೈತರು, ಕನ್ನಡಿಗರ ಪಾಲಿಗೆ ಗುಜರಿ ಸರ್ಕಾರಗಳಾಗಿವೆ ಎಂಬುದನ್ನು ತೋರಿಸಲು ಮುರುಕಲು ಸೈಕಲ್, ಹಳೇ ಕಬ್ಬಿಣ, ಖಾಲಿ ಸೀಸಗಳನ್ನು ಹಿಡಿದು ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದರು.
ರಾಜ್ಯದ ಜನರ ಹಿತ ಕಾಯದೇ ನಿರಂತರವಾಗಿ ನೀರು ಹರಿಸುತ್ತಿರುವ ಕರ್ನಾಟಕ ಸರ್ಕಾರ, ಮಾತನಾಡದ ಜನಪ್ರತಿನಿಧಿಗಳು, ಮಧ್ಯಸ್ಥಿಕೆ ವಹಿಸದ ಕೇಂದ್ರ ಸರ್ಕಾರ, ಕಾವೇರಿ ಕ್ಯಾತೆ ತೆಗೆಯುವ ತಮಿಳುನಾಡು ಸರ್ಕಾರ ಯಾವುದಕ್ಕೂ ಉಪಯೋಗಕ್ಕೆ ಬಾರದ ಗುಜರಿ ಸರ್ಕಾರಗಳಾಗಿವೆ ಎಂದು ಆಕ್ರೋಶ ಹೊರಹಾಕಿದರು. ಇನ್ನು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications