ಕಾವೇರಿ ವಿವಾದ: ಚಾಮರಾಜನಗರದಲ್ಲಿ ಬೂದುಗುಂಬಳಕಾಯಿ ಒಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ
ಚಾಮರಾಜನಗ, ಅಕ್ಟೋಬರ್, 23: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ಕನ್ನಡಪರ ಹೋರಾಟಗಾರರು ಚಾಮರಾಜನಗರದಲ್ಲಿ ಕಳೆದ 40 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಆಯುಧಪೂಜೆ ಹಿನ್ನೆಲೆ ಬೂದುಗುಂಬಳಕಾಯಿ ಒಡೆದು ಆಕ್ರೋಶ ಹೊರಹಾಕಿದ್ದಾರೆ.

ಚಾಮರಾಜನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದಲ್ಲಿ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಬೂದುಗುಂಬಳಕಾಯಿ ಹಿಡಿದು ಧಿಕ್ಕಾರದ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು. ನಡು ರಸ್ತೆಯಲ್ಲಿ ಕರ್ನಾಟಕ, ಕೇಂದ್ರ ಸರ್ಕಾರದ ಹೆಸರೇಳಿ ನಿವಾಳಿಸಿ ಬೂದುಗುಂಬಳಕಾಯಿಗಳನ್ನು ಒಡೆದರು. ಕರ್ನಾಟಕ ಸರ್ಕಾರಕ್ಕೆ ಮುಂದಾದರೂ ಒಳ್ಳೆಯ ಬುದ್ದಿ ಬರಲಿ, ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಲಿ ಎಂದು ಆಗ್ರಹಿಸಿದರು.
ನ್ಯಾಯಾಲಯದಿಂದ ಪರಿಹಾರ ಸಿಗುವುದಿಲ್ಲ
ಕಾವೇರಿ ವಿವಾದಕ್ಕೆ ನ್ಯಾಯಾಲಯದಿಂದ ಪರಿಹಾರ ಸಿಗುವುದಿಲ್ಲ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.
ರಾಜ್ಯಸರ್ಕಾರ ಸುಪ್ರೀಂಕೋರ್ಟ್ಗೆ ಒಂದು ಅರ್ಜಿಯನ್ನು ಸಲ್ಲಿಸಬೇಕು. ಒಂದು ಸ್ವತಂತ್ರ ಪರಿಶೀಲನಾ ಸಮಿತಿಯನ್ನು ನೇಮಕ ಮಾಡಬೇಕು. ಅವರು ನಮ್ಮ ರಾಜ್ಯಕ್ಕೆ ಸೇರಿದವರೂ ಆಗಿರಬಾರದು. ತಮಿಳುನಾಡಿಗೆ ಸೇರಿದವರೂ ಆಗಿರಬಾರದು. ಆ ಸಮಿತಿಯನ್ನು ರಾಜ್ಯಕ್ಕೆ ಕಳುಹಿಸಿ ನೀರಿನ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ವರದಿ ಪಡೆಯಬೇಕು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಸಮಿತಿ ನೀಡುವ ವರದಿಯಲ್ಲಿ ನಮ್ಮಲ್ಲಿ ಸಾಕಷ್ಟು ನೀರಿದೆ, ಸುಳ್ಳು ಹೇಳುತ್ತಿದ್ದೇವೆ ಎನ್ನುವುದಾದರೆ ನೀರು ಕೊಡಲೇಬೇಕು. ಇಲ್ಲದಿದ್ದರೆ ನಮ್ಮ ನೀರನ್ನು ನಮಗೆ ಬಿಟ್ಟುಕೊಡಬೇಕು. ನಾವು ತಮಿಳುನಾಡಿನವರಿಗೆ ನೀರನ್ನು ದಾನ ಮಾಡಿ ನಮ್ಮವರನ್ನು ಕೊಲ್ಲುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು.
ಕಾವೇರಿ ವಿಷಯದಲ್ಲಿ ರಾಜ್ಯ ಸರ್ಕಾರದಿಂದ ಸರಿಯಾದ ವಾದ ಮಂಡನೆ ಆಗುತ್ತಿಲ್ಲ ಎಂದ ಆರೋಪದ ಬಗ್ಗೆ ಕೇಳಿದಾಗ, ಒಬ್ಬ ನ್ಯಾಯಮೂರ್ತಿಯಾಗಿ ಆ ವಿಚಾರದಲ್ಲಿ ಇನ್ನೊಬ್ಬರನ್ನು ದೂಷಿಸುವುದಿಲ್ಲ ಎಂದು ಹೇಳಿದರು. ರಾಜಕೀಯ ಬೆಳವಣಿಗೆಗಳ ಬಗ್ಗೆ ಅವರನ್ನು ಪ್ರಶ್ನಿಸಿದಾಗ, ಹಿಂದೆ ರಾಜಕೀಯ ಎನ್ನುವುದು ಒಂದು ಸೇವೆಯಾಗಿತ್ತು. ಈಗ ಅದು ವೃತ್ತಿಯಾಗಿದೆ. ಸುಲಭವಾಗಿ ದುಡ್ಡು ಮಾಡಬಹುದಾದ ಕ್ಷೇತ್ರವಾಗಿದೆ.
ಪ್ರಸ್ತುತ ಸೇವೆಗೆ ಇಲ್ಲಿ ಜಾಗವೇ ಇಲ್ಲ. ಇದಕ್ಕಾಗಿಯೇ ನ್ಯಾಯಾಧೀಶರು, ಐಎಎಸ್, ಐಪಿಎಸ್ ಅಧಿಕಾರಿಗಳು ರಾಜಕೀಯಕ್ಕೆ ಬರುತ್ತಿದ್ದಾರೆ. ಸೇವೆ ಮಾಡುವವರಷ್ಟೇ ರಾಜಕೀಯಕ್ಕೆ ಬರಬೇಕು. ವೃತ್ತಿ ಮಾಡಿಕೊಳ್ಳುವವರು ಬಂದರೆ ವ್ಯವಸ್ಥೆ ಅವ್ಯವಸ್ಥೆ ಆಗುತ್ತದೆ. ಇದನ್ನು ಸರಿಪಡಿಸಬೇಕಾದರೆ ಜನರು ಎಚ್ಚೆತ್ತುಕೊಳ್ಳಬೇಕು ಎಂದು ನುಡಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications