ಕಾವೇರಿ ಕಿಚ್ಚು: ಚಾಮರಾಜನಗದಲ್ಲಿ ತಮಿಳುನಾಡು ವಾಹನಗಳಿಗೆ ಮೆಟ್ನಲ್ಲಿ ಹೊಡ್ದು ವಾಪಸ್ ಕಳ್ಸಿದ ಪ್ರತಿಭಟನಾಕಾರರು
ಚಾಮರಾಜನಗರ, ಸೆಪ್ಟೆಂಬರ್, 29: ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಈ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಹಾಗೆಯೇ ಚಾಮರಾಜನಗರದಲ್ಲಿ ರೈತರ ಪ್ರತಿಭಟನೆ ಕ್ಷಣ ಕ್ಷಣಕ್ಕೂ ತೀವ್ರ ಸ್ವಾರೂಪ ಪಡೆಯುತ್ತಲೇ ಇದ್ದು, ಪ್ರತಿಭಟನಾಕಾರರು ಜಿಲ್ಲೆಗೆ ಆಗಮಿಸುಬ ಮತ್ತು ಇಲ್ಲಿಂದ ತೆರಳುವ ತಮಿಳುನಾಡು ವಾಹನಗಳಿಗೆ ಕಾಲಿನಲ್ಲಿ ಒದ್ದು ಆಕ್ರೋಶ ಹೊರಹಾಕುತ್ತಿದ್ದಾರೆ. ಇದರಿಂದ ತಮಿಳುನಾಡು ಮೂಲದ ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ.
ಚಾಮರಾಜನಗರದಲ್ಲಿ ತೀವ್ರಗೊಂಡ ಪ್ರತಿಭಟನೆ
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದೆಂದು ಕರೆಕೊಟ್ಟಿರುವ ಕರ್ನಾಟಕ ಬಂದ್ಗೆ ಚಾಮರಾಜನಗರ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪ್ರತಿಭಟನೆ ಕ್ಷಣ ಕ್ಷಣಕ್ಕೂ ತೀವ್ರಗೊಳ್ಳುತ್ತಲೇ ಇದೆ. ಇನ್ನು ನಗರದ ಸತ್ಯಮಂಗಲಂ ರಸ್ತೆಯಲ್ಲಿರುವ ಸಿದ್ಧಾರ್ಥ ಚಿತ್ರಮಂದಿರಕ್ಕೆ ನುಗ್ಗಿದ ಕಬ್ಬು ಬೆಳೆಗಾರರು ರಾಘವ ಲಾರೆನ್ಸ್ ಅಭಿನಯದ "ಚಂದ್ರಮುಖಿ-2" ಚಿತ್ರದ ಪೋಸ್ಟರ್ ಅನ್ನು ಹರಿದು ಹಾಕಿ ಆಕ್ರೋಶ ಹೊರಹಾಕಿದ್ದಾರೆ.

ಕಾವೇರಿ ಕ್ಯಾತೆ ನಿಲ್ಲಿಸದಿದ್ದರೇ ತಮಿಳು ಚಿತ್ರಗಳು ಪ್ರದರ್ಶನ ಮಾಡುವಂತಿಲ್ಲ ಎಂದು ಆಕ್ರೋಶಗೊಂಡು ತಮಿಳು ಚಿತ್ರದ ಪೋಸ್ಟರ್ಗಳನ್ನು ಹರಿದುಹಾಕಿ ತಮಿಳುನಾಡು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇನ್ನು, ಸತ್ಯಮಂಗಲಂ ರಸ್ತೆಯಲ್ಲಿ ಪ್ರತಿಭಟಿಸುತ್ತಿದ್ದ ಉಡಿಗಾಲ ಮಂಜುನಾಥ್ ಎಂಬವರು ಹಸಿರು ಟವೆಲ್ನಿಂದ ನೇಣು ಬಿಗಿದುಕೊಳ್ಳು ಯತ್ನಿಸಿ ಅಸ್ವಸ್ಥರಾಗಿದ್ದಾರೆ. ಇನ್ನು, ಪೊಲೀಸ್ ಜೀಪ್ ನಲ್ಲೇ ಅವರನ್ನು ಆಸ್ಪತ್ರೆಗೆ ರವಾನಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ.
ತಮಿಳುನಾಡು ವಾಹನವೊಂದನ್ನು ಕಂಡ ಪ್ರತಿಭಟನಾಕಾರರು ಉದ್ರಿಕ್ತರಾಗಿ ಕಾರಿಗೆ ಒದ್ದು ಆಕ್ರೋಶ ಹೊರಹಾಕಿದ ಘಟನೆ ಚಾಮರಾಜನಗರ ಹೊರವಲಯದಲ್ಲಿ ನಡೆದಿದ್ದು, ಪೊಲೀಸರು ಮಧ್ಯ ಪ್ರವೇಶ ಮಾಡಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ.
ಕರ್ನಾಟಕಕ್ಕೆ ಬಾರದ ತಮಿಳುನಾಡು ವಾಹನಗಳು
ಚಾಮರಾಜನಗರದಲ್ಲಿ ನಿರಂತರ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಧರ್ಮಪುರಿ ಜಿಲ್ಲಾಡಳಿತ ಟಿಎನ್ ನೋಂದಣಿ ವಾಹನಗಳನ್ನು ಕರ್ನಾಟಕಕ್ಕೆ ಕಳುಹಿಸದೇ ನಿರ್ಬಂಧ ಹೇರಿದೆ. ಬಣ್ಣಾರಿ ಚೆಕ್ ಪೋಸ್ಟ್ನಲ್ಲಿ ಕಿಲೋ ಮೀಟರ್ಗಟ್ಟಲೇ ಸರಕು ತುಂಬಿದ ವಾಹನಗಳು, ಕಾರುಗಳು ಸರತಿ ಸಾಲಿನಲ್ಲಿ ನಿಂತಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ತಮಿಳುನಾಡು ಗಡಿಯಾದ ಚಾಮರಾಜನರ ತಾಲೂಕಿನ ಪುಣಜನೂರು ಮತ್ತು ಎಲ್ಲೆಕಟ್ಟೆ ಬಳಿ ಎರಡೂ ರಾಜ್ಯದ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಹೀಗೆ ಕಾವೇರಿ ಕಿಚ್ಚು ಚಾಮರಾಜನಗರದಲ್ಲಿ ಜೋರಾಗಿದ್ದು, ಬೆಳಗ್ಗೆಯಿಂದ ಹತ್ತಾರು ಸಂಘಟನೆಗಳು ನಿರಂತರವಾಗಿ ಧರಣಿ ನಡೆಸುತ್ತಿವೆ. ಮಧ್ಯಾಹ್ನವಾದರೂ ಸಾರಿಗೆ ಸಂಸ್ಥೆ ಬಸ್ಗಳು ರಸ್ತೆಗೆ ಇಳಿದಿಲ್ಲ. ಎಪಿಎಂಸಿ ಹಾಗೂ ತರಕಾರಿ ಮಾರುಕಟ್ಟೆಗಳು, ಅಂಗಡಿಗಳು, ಹೋಟೆಲ್ಗಳು ಕ್ಲೋಸ್ ಆಗಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications