ಚಾಮರಾಜನಗರ ರೈಲ್ವೇ ಸಂಪರ್ಕ ಯೋಜನೆಗೆ ಭರ್ತಿ ನೂರು ವರ್ಷ
ಚಾಮರಾಜನಗರ, ಜುಲೈ 1: ರಾಜ್ಯದ ಅತ್ಯಂತ ಹಿಂದುಳಿದ ಜಿಲ್ಲೆ ಎಂದೇ ಖ್ಯಾತಿಯಾಗಿರುವ ಚಾಮರಾಜನಗರ ಜಿಲ್ಲೆಯ ರೈಲ್ವೇ ಸಂಪರ್ಕ ಯೋಜನೆಗೆ ಜುಲೈ 1ರಂದು ಶತಮಾನೋತ್ಸವದ ಸಂಭ್ರಮ.
ರಾಜ್ಯದ ದಕ್ಷಿಣದ ಗಡಿ ಜಿಲ್ಲಾ ಕೇಂದ್ರವಾದ ಚಾಮರಾಜನಗರವನ್ನು ಸಂಪರ್ಕಿಸುವ ರೈಲು ಮಾರ್ಗ ಯೋಜನೆಯನ್ನು ಇಂದಿಗೆ ಸರಿಯಾಗಿ 100 ವರ್ಷದ ಹಿಂದೆ (1921ರ ಜುಲೈ 1ರಂದು) ಹಾಕಿಕೊಳ್ಳಲಾಗಿತ್ತು. ನಂಜನಗೂಡಿನಿಂದ ಚಾಮರಾಜನಗರಕ್ಕೆ ರೈಲು ಮಾರ್ಗ ವಿಸ್ತರಣೆ ಯೋಜನೆ ಹಾಕಿಕೊಂಡ ಐದು ವರ್ಷದ ನಂತರ 1926ರ ಆಗಸ್ಟ್ 27ರಂದು ಮೊದಲ ಉಗಿಬಂಡಿ ನಗರಕ್ಕೆ ಬಂದು ಇತಿಹಾಸ ದಾಖಲಿಸಿದೆ.
ಜಿಲ್ಲೆಯ ರೈಲ್ವೇ ಇತಿಹಾಸವನ್ನು ಅತ್ಯಂತ ಚೆನ್ನಾಗಿ ಬಲ್ಲ ಹಿರಿಯ ನಾಗರಿಕ ಪಿ.ಸಿ. ಹುಚ್ಚೇಗೌಡ ಅವರು ಮಾತನಾಡಿ, "ಮೈಸೂರಿನಿಂದ ನಂಜನಗೂಡಿನವರೆಗೆ 1891ರ ಡಿ.1ರಂದು ಮೀಟರ್ ಗೇಜ್ ರೈಲು ಸಂಚಾರ ಆರಂಭವಾಯಿತು. ಮೈಸೂರಿನ ರಾಜಮನೆತನದವರಿಗೆ ನಂಜನಗೂಡಿಗೆ ಬರಲು ಅನುಕೂಲವಾಗುತ್ತದೆ ಎಂಬ ಕಾರಣಕ್ಕೆ, ಈ ಮಾರ್ಗ ನಿರ್ಮಾಣಕ್ಕಾಗಿ ರಾಜಮನೆತನದವರೇ ಹಣ ಹೂಡಿಕೆ ಮಾಡಿದ್ದರು,'' ಎಂದು ತಿಳಿಸಿದರು.

ಮಾರ್ಗ ನಿರ್ಮಾಣಕ್ಕೆ ಐದು ವರ್ಷ
"1920ರ ಸಮಯದಲ್ಲಿ ಕ್ಷಾಮ ಇತ್ತು. ಈ ಸಂದರ್ಭದಲ್ಲಿ ಜನರ ಸಂಚಾರಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಂಜನಗೂಡಿನಿಂದ ಚಾಮರಾಜನಗರಕ್ಕೆ ರೈಲು ಮಾರ್ಗ ವಿಸ್ತರಣೆಗೆ ಯೋಜನೆ ರೂಪಿಸಲಾಗಿತ್ತು. 22 ಮೈಲಿ ಉದ್ದದ ಮಾರ್ಗ ನಿರ್ಮಾಣ ಯೋಜನೆಯನ್ನು 14 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗಿತ್ತು. ಮಾರ್ಗ ನಿರ್ಮಾಣಕ್ಕೆ ಐದು ವರ್ಷ ಬೇಕಾಯಿತು,'' ಎಂದು 87 ವರ್ಷದ ಗೌಡ ತಿಳಿಸಿದರು.

ಮೈಸೂರು ರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್
"1927ರ ಆಗಸ್ಟ್ 27ರಂದು ನಂಜನಗೂಡಿನಿಂದ ಮೊದಲ ರೈಲು ಚಾಮರಾಜನಗರಕ್ಕೆ ತಲುಪಿತು. ಅಂದಿನ ಮೈಸೂರು ರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅದೇ ರೈಲಿನಲ್ಲಿ ನಗರಕ್ಕೆ ಬಂದಿದ್ದರು. ಚಾಮರಾಜನಗರದ ಮೂಲಕ ತಮಿಳುನಾಡಿನ ಸತ್ಯಮಂಗಲ, ಧಾರಾಪುರ, ಮಧುರೈ ಮೂಲಕ ಕೊಲಂಬೊವರೆಗೆ ರೈಲು ಮಾರ್ಗ ನಿರ್ಮಿಸುವ ಪ್ರಸ್ತಾಪ ಆಗಲೇ ಇತ್ತು. ಇದನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದ ಮಹಾರಾಜರು, 30 ವರ್ಷಗಳಾದರೂ ಅದು ಕಾರ್ಯರೂಪಕ್ಕೆ ಬಾರದೆ, ಚಾಮರಾಜನಗರದವರೆಗೆ ಆಯಿತು ಎಂದು ಬೇಸರ ವ್ಯಕ್ತಪಡಿಸಿದ್ದರು. ನಮ್ಮ ಮನೆಯಲ್ಲಿ ಕೆಲಸಕ್ಕೆ ಇದ್ದವರೊಬ್ಬರು ತಮ್ಮ ಮಗನೊಂದಿಗೆ ಮೊದಲ ದಿನ ರೈಲು ಸಂಚಾರ ಕಂಡಿದ್ದರು. ಆಗಾಗ ಅವರು ಇದನ್ನು ನನಗೆ ಹೇಳುತ್ತಿದ್ದರು,'' ಎಂದು ಹುಚ್ಚೇಗೌಡ ವಿವರಿಸಿದರು.

ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ
ಚಾಮರಾಜನಗರದ ಮೂಲಕ ತಮಿಳುನಾಡಿನ ಮೆಟ್ಟುಪಾಳ್ಯಂಗೆ ಸಂಪರ್ಕ ಕಲ್ಪಿಸುವ ರೈಲು ಯೋಜನೆಯು ದಶಕಗಳಿಂದಲೂ ಜಿಲ್ಲೆಯ ಜನತೆಯ ಬೇಡಿಕೆ ಆಗಿದೆ. ಆದರೆ ಇದು ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲದಿರುವುದು ನಿಜಕ್ಕೂ ಬೇಸರದ ಸಂಗತಿ. ಮೆಟ್ಟುಪಾಳ್ಯಂ ರೈಲ್ವೆ ಮಾರ್ಗ ಯೋಜನೆಗೆ ಸಮೀಕ್ಷೆ ನಡೆಸಿದ ತಂಡದಲ್ಲಿ ಹುಚ್ಚೇಗೌಡ ಕೂಡ ಪಾಲ್ಗೊಂಡಿದ್ದರು.
Recommended Video

ಕೊಡಗು ರೈಲ್ವೇ ಸಂಪರ್ಕ ಹೊಂದಿಲ್ಲದ ಜಿಲ್ಲೆ
"ಯೋಜನೆ ಅನುಷ್ಠಾನದ ಬಗ್ಗೆ ವಿಸ್ತೃತ ವರದಿಯನ್ನೂ ಸಲ್ಲಿಸಲಾಗಿತ್ತು. ಮೆಟ್ಟುಪಾಳ್ಯಂನಿಂದ ಕೊಯಮತ್ತೂರಿಗೆ ರೈಲು ಸಂಪರ್ಕ ಇದೆ. ನಗರದಿಂದ ಮೆಟ್ಟುಪಾಳ್ಯಂವರೆಗೆ ಸಂಪರ್ಕ ಕಲ್ಪಿಸಿದ್ದರೆ, ಜನರಿಗೆ ಅನುಕೂಲವಾಗುತ್ತಿತ್ತು. ಸರಕು ಸಾಗಣೆ ಲಾರಿ ಮಾಲೀಕರ ಲಾಬಿ ಯೋಜನೆಗೆ ಅಡ್ಡಗಾಲು ಹಾಕಿತು'' ಎಂದು ಹುಚ್ಚೇಗೌಡ ಆರೋಪಿಸುತ್ತಾರೆ.
ರಾಜ್ಯದಲ್ಲಿ ಇಂದಿಗೂ ರೈಲ್ವೇ ಸಂಪರ್ಕ ಹೊಂದಿಲ್ಲದ ಜಿಲ್ಲೆ ಎಂದರೆ ಕೊಡಗು ಜಿಲ್ಲೆ ಆಗಿದ್ದು, ಈಗ ಅಲ್ಲಿಗೂ ರೈಲ್ವೇ ಸಂಪರ್ಕ ಕಲ್ಪಿಸಲು ಸರ್ವೆ ಕಾರ್ಯ ನಡೆಯುತ್ತಿದೆ. ಇದರ ಜೊತೆಗೆ ಚಾಮರಾಜನಗರ ಮಾರ್ಗವಾಗಿ ಕೊಯಮತ್ತೂರಿಗೆ ಸಂಪರ್ಕ ಕಲ್ಪಿಸಿದರೆ ಕೊಡಗಿನ ಜನತೆಗೂ ಅನುಕೂಲವಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications