1,693 ವಿಶೇಷ ಚೇತನರಿಗೆ ನೆರವಾದ ಕೇಂದ್ರ ಸರ್ಕಾರ: ₹1 ಕೋಟಿ ವೆಚ್ಚದ ಸಾಧನ ಸಲಕರಣೆ ವಿತರಣೆ
ಚಾಮರಾಜನಗರ, ಡಿಸೆಂಬರ್ 24: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ ಕರ್ನಾಟಕದಲ್ಲಿ ಆಯ್ಕೆಯಾದ ಏಕೈಕ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಾವಿರಾರು ದಿವ್ಯಾಂಗರಿಗೆ ಶನಿವಾರ ಸಾಧನ-ಸಲಕರಣೆಗಳನ್ನು ವಿತರಿಸಲಾಯಿತು.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಅಲ್ಕಿಮೊ ಸಂಸ್ಥೆ, ಜಿಲ್ಲಾಡಳಿತ ಸಂಯುಕ್ತವಾಗಿ ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ 1693 ವಿಶೇಷ ಚೇತನರಿಗೆ ಸಾಧನ-ಸಲಕರಣೆಗಳನ್ನು ಡಿಸೆಂಬರ್ 24ರಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ, ಸಂಸದ ವಿ.ಶ್ರೀನಿವಾಸಪ್ರಸಾದ್ ಮತ್ತು ಸ್ಥಳೀಯ ಶಾಸಕರುಗಳು ವಿತರಣೆ ಮಾಡಿದರು.
ಸರ್ಕಾರದ ವತಿಯಿಂದ ವಿಶೇಷ ಚೇತನರಿಗೆ ನಡೆದ ದಕ್ಷಿಣ ಭಾರತದ ಬೃಹತ್ ಕಾರ್ಯಕ್ರಮ ಇದಾಗಿದ್ದು ಟ್ರೈಸಿಕಲ್, ಶ್ರವಣ ಸಾಧನ, ವಿಶೇಷ ಚೇತನ ಮಕ್ಕಳಿಗೆ ಕಿಟ್ ಸೇರಿದಂತೆ 16 ಬಗೆಯ 2755 ಸಾಧನಗಳನ್ನು ವಿತರಿಸಲಾಗಿದ್ದು ಇವುಗಳ ಒಟ್ಟು ಮೌಲ್ಯ ಬರೋಬ್ಬರಿ 1.20 ಕೋಟಿ ರೂ.ಗಳಾಗಿದೆ. ಲೋಕಸಭಾ ಸದಸ್ಯ ವಿ. ಶ್ರೀನಿವಾಸಪ್ರಸಾದ್ ಅವರ ವಿಶೇಷ ಮುತುವರ್ಜಿಯಿಂದ ಜಿಲ್ಲೆಯು ರಾಜ್ಯದಲ್ಲಿ ಆಯ್ಕೆಯಾಗಿದ್ದು, ಪ್ರತಿ ಊರುಗಳಲ್ಲಿ ವಿಶೇಷ ಚೇತನರನ್ನು ಗುರುತಿಸಿ ಅವರಿಗೆ ಸಾರಿಗೆ ಸೌಲಭ್ಯ ಕಲ್ಪಿಸಿ ಸಾಧನಗಳನ್ನು ವಿತರಿಸಲಾಯಿತು.

ಫಲಾನುಭವಿಗಳಿಗೆ ಸಾಧನ ಸಲಕರಣೆ ವಿತರಿಸಿ ಮಾತನಾಡಿದ ಸಚಿವ ನಾರಾಯಣಸ್ವಾಮಿ, ವಿಕಲತೆ ಎನ್ನುವುದು ಶಾಪವಲ್ಲ, ಯಾರ ಕರ್ಮದಿಂದಲೂ ಬಂದಿದ್ದಲ್ಲ. ಎಂಬುದನ್ನು ಜನರು ಅರಿಯಬೇಕಿದೆ. ವಿಟಮಿನ್ ಕೊರತೆ, ಔಷಧಿಗಳ ಪರಿಣಾಮದಿಂದ ವಿಕಲತೆ ಉಂಟಾಗಲಿದ್ದು ದಿವ್ಯಾಂಗರ ಬಾಳಿಗೆ ಅಗತ್ಯ ನೆರವು ಕೊಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದರು.
ಹುಟ್ಟುವಾಗಲೇ ಮೂಕ ಮಕ್ಕಳಾದರೇ ಹಿಂಜರಿಕೆ ಇಲ್ಲದೇ ವೈದ್ಯರನ್ನು ಸಂಪರ್ಕಿಸಬೇಕು, ಒಂದೆರೆಡು ವರ್ಷಗಳಲ್ಲಿ ಮಕ್ಕಳು ಮಾತನಾಡಲಿದ್ದು, ಈ ಚಿಕಿತ್ಸೆಗೆ ತಗಲುವು 7 ಲಕ್ಷ ರೂಪಾಯಿಯನ್ನು ಕೇಂದ್ರ ಸರ್ಕಾರ ಕೊಡಲಿದೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಡಿ ಬಹಳಷ್ಟು ಕಾರ್ಯಕ್ರಮಗಳಿದ್ದು ಪ್ರಚಾರದ ಕೊರತೆಯಿಂದಾಗಿ ಜನರಿಗೆ ತಲುಪುತ್ತಿಲ್ಲ, ಜನಪ್ರತಿನಿಧಿಗಳಷ್ಟೇ ಅಧಿಕಾರಿಗಳದ್ದು ಜವಬ್ದಾರಿ ಇದೆ. ಎಂಬುದನ್ನು ಅಧಿಕಾರಿಗಳು ಅರಿತರೇ ಹಲವು ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ ಎಂದು ಸಚಿವ ನಾರಾಯಣಸ್ವಾಮಿ ಹೇಳಿದರು.

ಇನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದ 4 ವಿಧಾನಸಭಾ ಕ್ಷೇತ್ರದ ಫಲಾನುಭವಿಗಳಿಗೆ ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಾಧನ-ಸಲಕರಣೆಗಳನ್ನು ವಿತರಿಸಲಾಗಿದ್ದು, ಇನ್ನುಳಿದ ನಾಲ್ಕು ಕ್ಷೇತ್ರಗಳಿಗೆ ನಂಜನಗೂಡಿನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications