Get Updates
Get notified of breaking news, exclusive insights, and must-see stories!

ಚಾಮರಾಜನಗರ: ಕರ್ತವ್ಯ ಲೋಪದಿಂದಾಗಿ ಸಿಪಿಐ, ಪಿಎಸ್ಐ ಅಮಾನತು

ಚಾಮರಾಜನಗರ, ಜೂನ್ 12: ಅಪಘಾತ ಪ್ರಕರಣವೊಂದರಲ್ಲಿ ಕರ್ತವ್ಯಲೋಪ ಎಸಗಿರುವ ಆರೋಪದ ಮೇರೆಗೆ ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್ಸ್​ಪೆಕ್ಟರ್​​​​, ಪೂರ್ವ ಪೊಲೀಸ್ ಠಾಣೆಯ ಸಬ್​​ ಇನ್ಸ್ ​​ಪೆಕ್ಟರ್ ಹಾಗೂ ಹೆಡ್ ಕಾನ್ಸ್​ಟೆಬಲ್ ಅವರನ್ನು ಅಮಾನತು ಮಾಡಿ ದಕ್ಷಿಣ ವಲಯ ಐಜಿಪಿ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

Recommended Video

      Indian stands 4th in the world in corona cases count | Oneindia Kannada

      ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್ಸ್​ಪೆಕ್ಟರ್​​​​ ಕೆ.ಎಂ ಮಂಜು, ಪೂರ್ವ ಪೊಲೀಸ್ ಠಾಣೆ ಸಬ್​​ ಇನ್ಸ್​​ಪೆಕ್ಟರ್ ಎಸ್.ಪಿ ಸುನೀಲ್ ಹಾಗೂ ಹೆಡ್ ಕಾನ್ಸ್​ಟೆಬಲ್ ನಾಗ ನಾಯಕ ಎಂಬುವವರೇ ಅಮಾನತುಗೊಂಡ ಅಧಿಕಾರಿಗಳಾಗಿದ್ದಾರೆ.

      ಕಳೆದ ಮೇ, 15 ರಂದು ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್​ವೊಂದು ಚಾಮರಾಜನಗರ ತಾಲೂಕಿನ ಮಾದಾಪುರದ ಬಳಿ ನಿಂತಿತ್ತು. ವಿಷಯ ತಿಳಿದ ಸರ್ಕಲ್ ಇನ್ಸ್​ಪೆಕ್ಟರ್​​ ಮಂಜು ತಮ್ಮ ಜೀಪಿನಲ್ಲಿ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಪೊಲೀಸ್ ಜೀಪ್ ನೋಡಿದ ಚಾಲಕ ಟಿಪ್ಪರ್​​ನಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದನು.

      Chamarajanagar: CPI, PSI Suspended For Negligence In Duty

      ಆದರೆ ಅಕ್ರಮ ಮರಳು ಸಾಗಾಣಿಕೆ ಪ್ರಕರಣವನ್ನು ಮುಚ್ಚಿಹಾಕಲು ಟಿಪ್ಪರ್​​ನಲ್ಲಿದ್ದ ಮರಳನ್ನು ರಸ್ತೆ ಬದಿ ಸುರಿದು ಎಂ ಸ್ಯಾಂಡ್ ಸಾಗಾಣಿಕೆಯಾಗುತ್ತಿತ್ತು ಎಂದು ಎಫ್‌ಐಆರ್ ದಾಖಲಿಸಲಾಗಿತ್ತು.

      ಪೊಲೀಸರು ಯಾರಿಗೋ ಸಹಾಯ ಮಾಡಲು ತನಿಖೆಯನ್ನು ಸರಿಯಾಗಿ ಮಾಡದೆ ಕರ್ತವ್ಯ ಲೋಪ ಎಸಗಿದ್ದರು. ಈ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದಿದ್ದವು ಎಂದು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್ ಮಾಧ್ಯಮಗಳಿಗೆ ತಿಳಿಸಿದರು.

      ಈ ಹಿನ್ನೆಲೆಯಲ್ಲಿ ಇವರನ್ನು ಅಮಾನತು ಮಾಡಿ ದಕ್ಷಿಣ ವಲಯ ಪೊಲೀಸ್ ಮಹಾನಿರೀಕ್ಷಕ ವಿಫುಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.]

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+