ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚಿದ ಬಹಿಷ್ಕಾರ ಪದ್ಧತಿ: ಅಧಿಕಾರಿಗಳಿಂದ ಖಡಕ್ ಎಚ್ಚರಿಕೆ
ಚಾಮರಾಜನಗರ, ಡಿಸೆಂಬರ್ 24: ಚಾಮರಾಜನಗರ ಜಿಲ್ಲೆಯ ಗ್ರಾಮಗಳಲ್ಲಿ ಬಹಿಷ್ಕಾರ, ದಂಡ ವಿಧಿಸುವಿಕೆ, ಕಾನೂನು ಕೈಗೆತ್ತಿಕೊಳ್ಳುವ ಪ್ರಕರಣಗಳು ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಎಚ್ಚರಿಕೆ ನೀಡಿದ್ದಾರೆ.
ಚಾಮರಾಜನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರ ಕೇಂದ್ರದಲ್ಲಿಂದು ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿಯಲ್ಲಿ ಒಂದೇ ಕೋಮಿನ ಕುಟುಂಬಗಳಿಗೆ ಅದೇ ಕೋಮಿನ ಮುಖಂಡರು, ಯಜಮಾನರು ಬಹಿಷ್ಕಾರ ಹಾಕಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಮುಖಂಡರು ಮತ್ತು ಬಹಿಷ್ಕಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಕುಟುಂಬ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮದಲ್ಲಿ ಯಾವುದೇ ತಪ್ಪುಗಳಾದರೆ ಪೊಲೀಸ್ ಅವರಿಗೆ ಮಾಹಿತಿ ನೀಡಬೇಕು. ತಪ್ಪು ಎಸಗಿದವರ ವಿರುದ್ದ ಬಹಿಷ್ಕಾರ ಹಾಕುವ ಪದ್ಧತಿ ಯಾರಿಗೂ ಇಲ್ಲ. ತಪ್ಪು ಎಸಗಿದ್ದಾರೆ ಎನ್ನುವವರ ವಿರುದ್ಧ ದಂಡನೆ ವಿಧಿಸುವ ಯಾವುದೇ ಅಧಿಕಾರ ನಿಮಗಿಲ್ಲ. ಕಾನೂನು ಕೈಗೆತ್ತಿಕೊಳ್ಳುವ ಪ್ರಕರಣಗಳಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಬಹಿಷ್ಕಾರ ಹೇರುವುದು ಕಾನೂನು ಬಾಹಿರ. ಈ ಬಗ್ಗೆ ಯಾವುದೇ ಮಾನ್ಯತೆ ಇಲ್ಲ. ಬಹಿಷ್ಕಾರ ಸೇರಿದಂತೆ ತೊಂದರೆ ನೀಡುವ ಕಟ್ಟುಪಾಡುಗಳನ್ನು ಕೈಬಿಡಬೇಕು. ಕಾನೂನು ಪಾಲನೆಯನ್ನು ಪ್ರತಿಯೊಬ್ಬರು ಮಾಡಬೇಕು. ಕಾನೂನಿಗೆ ಹೊರತಾದ ಯಾವುದೇ ತೀರ್ಮಾನ ಮಾಡುವಂತಿಲ್ಲ. ತಪ್ಪು ನಡೆ, ನಿರ್ಧಾರ ಕೈಗೊಂಡು ಮತ್ತೊಂದು ಕುಟುಂಬವನ್ನು ಸಂಕಷ್ಟಕ್ಕೆ ಗುರಿ ಮಾಡಿದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಅವರು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಇದ್ದೇವೆ. ಕಾನೂನನ್ನು ಪ್ರತಿಯೊಬ್ಬರು ಗೌರವಿಸಬೇಕು. ಬಹಿಷ್ಕಾರ, ದಂಡ ವಿಧಿಸುವಂತಹ ಪದ್ಧತಿಗಳನ್ನು ಮುಂದುವರೆಸಿದರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಗ್ರಾಮದಲ್ಲಿ ಯಾವುದೇ ಕಲಹ, ಇನ್ನಿತರ ವ್ಯತ್ಯಾಸಗಳಾದಾಗ ನಮಗೆ ಮಾಹಿತಿ ನೀಡಿ, ದೂರು ದಾಖಲಿಸಬೇಕು. ನಿಮ್ಮಲ್ಲಿಯೇ ತೀರ್ಮಾನ ಮಾಡಿ ಕಠಿಣ ಕ್ರಮಗಳನ್ನು ಹೇರುವಂತಿಲ್ಲ. ಒಳ್ಳೆಯ ಉದ್ದೇಶಗಳಿಗೆ, ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳಿಗೆ ಊರಿನ ಯಜಮಾನರು ಮುಂದಾಗಬೇಕು. ಕಾನೂನು ಬಾಹಿರ ಕ್ರಮಗಳಿಗೆ ಅವಕಾಶ ಕೊಡಬಾರದು ಎಂದು ಡಾ. ಬಿ.ಟಿ. ಕವಿತಾ ಅವರು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ ಅವರು ಕಾನೂನಿಗೆ ವಿರುದ್ಧವಾದ ಯಾವುದೇ ಕ್ರಮ ತೆಗೆದುಕೊಳ್ಳಬಾರದು. ಗ್ರಾಮದ ಹಂತದಲ್ಲಿ ಮತ್ತೊಬ್ಬರಿಗೆ ತೊಂದರೆ ಉಂಟುಮಾಡುವ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದರು. ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ, ಇತರರು ಸಭೆಯಲ್ಲಿ ಇದ್ದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications