ಬೆಂಗಳೂರು: ರಾಷ್ಟ್ರಪತಿ ಅವರೊಂದಿಗೆ ಸಂವಾದಕ್ಕೆ ಆಯ್ಕೆಯಾದ ಜಿಲ್ಲಾವಾರು ಬುಡಕಟ್ಟು ಜನರ ವಿವರ ತಿಳಿಯಿರಿ
ಚಾಮರಾಜನಗರ, ಜುಲೈ, 02: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಜುಲೈ 3ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಂವಾದಕ್ಕೆ ಮೈಸೂರು, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಬುಡಕಟ್ಟು ಜನಾಂಗದವರನ್ನು ಆಯ್ಕೆ ಮಾಡಲಾಗಿದೆ.
ಈ ಜಿಲ್ಲೆಗಳಲ್ಲಿರುವ ನೈಜ ದುರ್ಬಲ ಸಮುದಾಯಗಳಾದ ಜೇನುಕುರುಬ, ಕೊರಗ ಸಮಾಜದ ಕೆಲವರನ್ನು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಆಯ್ಕೆ ಮಾಡಿದೆ. ಈ ಸಂಬಂಧ ಆಯಾ ಜಿಲ್ಲೆಗಳ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಪತ್ರ ಕಳುಹಿಸಲಾಗಿದೆ.

ಗುಂಡ್ಲುಪೇಟೆಯ ಜೇನು ಕುರುಬರ ಆಯ್ಕೆ
1: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಸಂವಾದದಲ್ಲಿ ಭಾಗವಹಿಸಲು ಗುಂಡ್ಲುಪೇಟೆಯ ದೇಶಿಪುರ ಕಾಲನಿಯ ಸಿದ್ದಮ್ಮ, ಪುಟ್ಟಮ್ಮ, ಮದ್ದೂರು ಕಾಲನಿಯ ಗೋವಿಂದ ಈ ಮೂವರು ಜೇನು ಕುರುಬರನ್ನು ಆಯ್ಕೆ ಮಾಡಲಾಗಿದೆ.
2. ಮೈಸೂರಿನ ಎಚ್.ಡಿ.ಕೋಟೆಯ ಬಸಮ್ಮ, ರಾಜೇಶ್, ಅಯ್ಯಪ್ಪ, ಭೈರಾ, ಸಿ.ಭಾಸ್ಕರ, ಪುಟ್ಟಬಸವಯ್ಯ, ಹುಣಸೂರಿನ ಜೆ.ಪಿ.ಪಾರ್ವತಿ, ಸುಮಾ, ರಾಜಪ್ಪ, ಸಚಿನ್, ಪಿರಿಯಾಪಟ್ಟಣದ ಜಯಮ್ಮ, ಗೌರಿ, ಲಕ್ಷ್ಮೀ, ಜಾನಕಮ್ಮ, ಬಸವಣ್ಣ, ಬಸಪ್ಪ, ಸರಗೂರಿನ ವಿಜಯ್ ಅವರನ್ನು ಆಯ್ಕೆ ಮಾಡಲಾಗಿದೆ.
3. ಕೊಡಗು ಜಿಲ್ಲೆಯ ಸೋಮವಾರಪೇಟೆಯ ಜೆ.ಕೆ.ಮುತ್ತಮ್ಮ, ಬಿ.ಕೆ.ಧರ್ಮಪ್ಪ, ಉಡುಪಿ ಜಿಲ್ಲೆಯ ನಳಿನಿ, ಡಾ.ಸಬಿತಾ, ಸುಶೀಲಾ, ಪ್ರಕೃತಿ, ಶಕೀಲಾ, ಸುನಂದಾ, ಕುಡ್ಪಾ, ಬಾಬು, ರಮೇಶ್, ಕೊಗ್ಗ, ಅಕ್ಷಯ್, ಕುಮಾರ್, ಸಂಜೀವ ಕೊರಗ, ಕೆ.ಪುತ್ರಯ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ರತ್ನ, ಚಂದ್ರವತಿ, ಶಶಿಕಲಾ, ರಾಧಾ, ಎಂ.ಸುಂದರ್, ಬಾಬು, ಮಥಾಡಿ, ಶ್ಯಾಮ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಸಂವಾದದಲ್ಲಿ ರಾಷ್ಟ್ರಪತಿಯವರೊಂದಿಗೆ ಪೌಷ್ಟಿಕತೆ, ಶಿಕ್ಷಣ, ಅನುವಂಶೀಯ ಕಾಯಿಲೆಗಳು, ಬುಡಟ್ಟು ಜನರ ಸಮಸ್ಯೆಗಳ ಕುರಿತು ಚರ್ಚೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಹಾಲ್ನಲ್ಲಿ ಜುಲೈ 3ರಂದು ಸಂಜೆ 7ರಿಂದ 7:30ರವರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಬುಡಕಟ್ಟು ಜನಾಂಗದವರ ಸಂವಾದ ನಡೆಯಲಿದೆ. ಇದರಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ಜೇನುಕುರುಬ, ಕೊರಗ ಸಮಾಜದವರನ್ನು ಆಯ್ಕೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯಿಂದ ಗುಂಡ್ಲುಪೇಟೆಯ ಮೂವರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ತಿಳಿಸಿದ್ದಾರೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications