ಬಂಡೀಪುರ ಶಿಬಿರದಿಂದ ಸಾಕಾನೆಗಳ ಸ್ಥಳಾಂತರ?
ಚಾಮರಾಜನಗರ, ಫೆಬ್ರವರಿ 06: ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ರಾಂಪುರ ಶಿಬಿರದಲ್ಲಿರುವ ಸಾಕಾನೆಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ ಎಂಬ ಮಾತುಗಳು ಕೇಳಿ ಬಂದಿವೆ.
ಸಾಕಾನೆಗಳಿಗೆ ದುಬಾರಿ ಖರ್ಚು ಬೀಳುತ್ತಿದ್ದು, ಅವುಗಳನ್ನು ಪೋಷಿಸುವುದೇ ಕಷ್ಟದ ಕೆಲಸವಾಗಿ ಮಾರ್ಪಟ್ಟಿದೆ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ಕೆಲವು ದಿನಗಳ ಹಿಂದೆ ಇಲ್ಲಿನ ಶಿಬಿರಗಳಲ್ಲಿ ಸಾಕಾನೆಗಳಿಗೆ ಆಹಾರವಿಲ್ಲದೆ ಕಾಡಿಗೆ ಬಿಡುವಂತಾಗಿತ್ತು. ಈ ಸಾಕಾನೆಗಳ ಆಹಾರಕ್ಕೆ ವರ್ಷಕ್ಕೆ ಸುಮಾರು 20ಲಕ್ಷ ರೂ.ಗಿಂತ ಹೆಚ್ಚು ಖರ್ಚಾಗುತ್ತಿದೆ ಜತೆಗೆ ಕಾವಾಡಿ, ಮಾವುತರಿಗೂ ವೇತನ ನೀಡಬೇಕಾಗಿದೆ.
ಇದೆಲ್ಲಕ್ಕಿಂತ ಹೆಚ್ಚಾಗಿ ಈ ಸಾಕಾನೆಗಳಿಗೆ ಯಾವುದೇ ತರಬೇತಿ ನೀಡದ ಕಾರಣ ಹುಲಿ ಕಾರ್ಯಾಚರಣೆಗಾಗಲೀ, ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಕ್ಕೂ ಬಳಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇಲ್ಲಿರುವ ಸಾಕಾನೆಗಳ ಪೈಕಿ ಕೆಲವು ಆನೆಗಳನ್ನು ಬಿಹಾರ, ಜಾರ್ಖಂಡ್ ಮತ್ತು ದುಬಾರೆಗೆ ಸ್ಥಳಾಂತರಿಸಿ ಬಳಿಕ ಶಿಬಿರವನ್ನು ಮುಚ್ಚಲಾಗುತ್ತಿದೆ ಎಂಬ ವದಂತಿ ಅರಣ್ಯ ಇಲಾಖೆ ಮೂಲಗಳಿಂದಲೇ ಹೊರಬಂದಿದೆ.

ಬಂಡೀಪುರದ ಕಲ್ಕೆರೆ ವಲಯಕ್ಕೆ ಸೇರಿದ ರಾಂಪುರ ಸಾಕಾನೆ ಶಿಬಿರದಲ್ಲಿದ್ದ 17 ಸಾಕಾನೆಗಳ ಪೈಕಿ ಭಾಸ್ಕರ, ನಯನ, ನಿಸರ್ಗ ಮತ್ತು ಐಶ್ವರ್ಯ ಎಂಬ ನಾಲ್ಕು ಸಾಕಾನೆಗಳನ್ನು ಜಾರ್ಖಂಡ್ ರಾಜ್ಯಕ್ಕೆ ಕಳುಹಿಸುವ ಸಲುವಾಗಿ ಈಗಾಗಲೇ ಮೈಸೂರು ಮೃಗಾಲಯಕ್ಕೆ ಕಳುಹಿಸಲಾಗಿದೆ. ಈ ನಡುವೆ ಬಿಹಾರದಿಂದಲೂ ಮೂರು ಆನೆಗಳಿಗೆ ಬೇಡಿಕೆ ಬಂದಿದೆ ಎನ್ನಲಾಗಿದೆ. ಇದೆಲ್ಲವನ್ನು ಗಮನಿಸಿದರೆ ಬಂಡೀಪುರ ಅರಣ್ಯದಲ್ಲಿರುವ ಶಿಬಿರಗಳಿಂದ ಸಾಕಾನೆಗಳನ್ನು ಸ್ಥಳಾಂತರಿಸಿ ಮುಚ್ಚುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆ.
ರಾಂಪುರ ಸಾಕಾನೆ ಶಿಬಿರವು ಬಂಡೀಪುರದ ಮೂಲೆಹೊಳೆ ಹಾಗೂ ಕಲ್ಕೆರೆ ಅರಣ್ಯ ವಲಯಗಳ ಮಧ್ಯೆಯಿದ್ದು, ಮೂಲೆಹೊಳೆ ದಡದಲ್ಲಿದೆ. ಇಲ್ಲಿಗೆ ತೆರಳಬೇಕಾದರೆ ಮುಖ್ಯ ರಸ್ತೆಯಿಂದ 10 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ತೆರಳಬೇಕಾಗಿದೆ. ಸಾಕಾನೆಗಳನ್ನು ನೋಡಿಕೊಳ್ಳಲು ಇಲ್ಲಿಯೇ ಮಾವುತರು ಮತ್ತು ಕಾವಾಡಿಗಳ ಕುಟುಂಬಗಳು ನೆಲೆಸಿದ್ದು, ಇವು ಮೂಲ ಸೌಕರ್ಯವಿಲ್ಲದೆ ಪರದಾಡುವಂತಾಗಿದೆ.

ಇಲ್ಲಿರುವ ಸಮಸ್ಯೆಗಳನ್ನು ಗಮನಿಸಿದರೆ ಸಾಕಾನೆಗಳ ಶಿಬಿರವನ್ನು ಸ್ಥಳಾಂತರಿಸುವ ಅನಿವಾರ್ಯತೆ ಎದ್ದು ಕಾಣುತ್ತಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications