Breaking News: ಚಾಮರಾಜನಗರ ಕಾಡಿಗೆ ಬೆಂಕಿ, ನೂರಾರು ಎಕರೆ ಸುಟ್ಟು ಭಸ್ಮ! ಅರಣ್ಯ ಇಲಾಖೆ ಅನುಮಾನ
ಚಾಮರಾಜನಗರ, ಫೆಬ್ರವರಿ 25: ಬೇಸಿಗೆ ಬಂತೆಂದರೆ ಸಾಕು ನಾಲ್ಕು ತಿಂಗಳು ಅರಣ್ಯ ಇಲಾಖೆಗೆ ಕಾಡ್ಗಿಚ್ಚಿನ ಭಯ ಆವರಿಸುತ್ತದೆ. ಎಷ್ಟೇ ಜಾಗರೂಕರಾಗಿದ್ದರೂ ಕಾಡು, ಪರಿಸರ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿಬಿಡುತ್ತದೆ. ಇದೀಗ ಇಂಥದ್ದೆ ಘಟನೆ ಚಾಮರಾನಗರ ವ್ಯಾಪ್ತಿಯ ಕಾಡಿನಲ್ಲಿ ನಡೆದಿದೆ. ಮಹದೇಶ್ವರ ಮತ್ತು ಕಾವೇರಿ ವನ್ಯಧಾಮದಲ್ಲಿ ಬೆಂಕಿ ಕಾಣಿಸಿಕೊಂಡು, ನೂರಾರು ಎಕರೆ ಅರಣ್ಯ ಸುಟ್ಟು ಭಸ್ಮವಾಗಿದೆ.
ಮೈಸೂರು ಕಾಡಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದ ಘಟನೆ ಮಾಡುವ ಮುನ್ನವೇ ಚಾಮರಾಜನಗರದ ನೂರಾರು ಎಕರೆ ಪ್ರದೇಶದಲ್ಲಿ ಕಾಡಿಗೆ ಬೆಂಕಿ ಹೊತ್ತಿಕೊಂಡಿದೆ. ವ್ಯಾಪಕ ಪ್ರದೇಶದಲ್ಲಿ ಬೆಂಕಿಯ ಕೆನ್ನಾಲಿಗೆ ವಿಸ್ತರಿಸುತ್ತಿದೆ. ಬೆಂಕಿ ನಂದಿಸುವ ಕಾರ್ಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮುಳುಗಿದೆ. ಬೆಂಕಿ ನಂದಿಸುವ ಕಾರ್ಯ ಕಷ್ಟಸಾಧ್ಯ ಅಂತಲೂ ಹೇಳಲಾಗುತ್ತಿದೆ. ಬೆಂಕಿಗೆ ನೂರಾರು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಅರೇ ಬೆಂಕಿ ನಂದಿಸುವುದು ಅಗ್ನಿಶಾಮಕದ ದಳದವರಲ್ಲವೇ ಅಂತ ನೀವು ಕೇಳಬಹುದು. ಆದರೆ ಅರಣ್ಯ ಪ್ರದೇಶದಲ್ಲಿ ದಾರಿ ಯಾವ ಕಡೆ ಇರುತ್ತದೆ. ಎಲ್ಲಿಂದ ಹೋಗಿ ಎಲ್ಲಿಗೆ ಕೂಡುತ್ತದೆ. ಅಪಾಯಕಾರಿ ಸ್ಥಳ ಎಲ್ಲವು ಅರಣ್ಯ ಸಿಬ್ಬಂದಿಗೆ ಗೊತ್ತಿರುತ್ತದೆ. ಹೀಗಾಗಿ ಅರಣ್ಯಕ್ಕೆ ಬೆಂಕಿ ಬಿದ್ದಾಗ, ನಾಡಿನಲ್ಲಿ ಅಗ್ನಿ ಶಾಮಕ ಸಿಬ್ಬಂದಿಯಂತೆ ಕಾಡಿನಲ್ಲಿ ಬೆಂಕಿ ಆರಿಸುವುದು ಕಷ್ಟ. ಹೀಗಾಗಿ ಅರಣ್ಯ ಇಲಾಖೆಯವರೇ ಬೆಂಕಿ ನಂದಿಸಬೇಕು. ಆ ಕಾರ್ಯ ಮಹದೇಶ್ವರ ಮತ್ತು ಕಾವೇರಿ ವನ್ಯಧಾಮದಲ್ಲಿ ನಡೆಯುತ್ತಿದೆ.
ಹೂಗ್ಯಂ, ಪಿಜಿ ಪಾಳ್ಯ ವಲಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದು ನಾಲ್ಕನೇ ಬಾರಿಗೆ ಇಂಥದ್ದೊಂದು ಘಟನೆ ನಡೆದಿದೆ. ಯಾರೋ ಬೇಕು ಅಂತಲೇ ಕಿಡಿಗೇಡಿಗಳು ದುರುದ್ದೇಶಪೂರ್ವವಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಬಿಸಿಲಿನ ವಾತಾವರಣ ಹೆಚ್ಚಿರುವ ಕಾರಣ ಬೆಂಕಿ ಬೇರೆ ಬೇರೆ ಒಣ ಪ್ರದೇಶಗಳಿಗೆ ವಿಸ್ತರಣೆ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಈ ಕಾರಣದಿಂದಾಗಿ ಬೆಂಕಿ ಆರಿಸುವುದು ಅಷ್ಟು ಸುಲಭವಾಗಿರುವುದಿಲ್ಲ. ಚಾಮರಾಜನಗರಕ್ಕೆ, ಇಲ್ಲಿನ ಬಿಆರ್ ಹಿಲ್ಸ್, ಕೆ.ಗುಡಿ, ಸೇರಿದಂತೆ ಪ್ರವಾಸಿ ಸ್ಥಳಗಳಿಗೆ ಪ್ರವಾಸಿಗರು ಬರುತ್ತಾರೆ. ಹೀಗಾಗಿ ಅಗತ್ಯ ಎಚ್ಚರಿಕೆ ವಹಿಸಿದ್ದರೂ ಸಹಿತ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications