ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜೀನಾಮೆ ನೀಡಲು ಮುಂದಾಗಿದ್ದ ಸಚಿವ ಸುರೇಶ್‌ ಕುಮಾರ್‌

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಮೇ 06; ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಕೊರೊನಾ ಸೋಂಕಿತರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ರಾಜೀನಾಮೆ ನೀಡಲು ಮುಂದಾಗಿದ್ದ ವಿಷಯ ತಡವಾಗಿ ಬಹಿರಂಗವಾಗಿದೆ.

ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ದುರಂತದಲ್ಲಿ 24 ಜನರು ಮೃತಪಟ್ಟ ಕುರಿತು ತುಂಬಾ ಮನನೊಂದಿದ್ದರು. ವಿಧಾನಸೌಧದಲ್ಲಿ ಬುಧವಾರ ನಡೆದ ವಿಶೇಷ ಸಂಪುಟ ಸಭೆಗೆ ರಾಜೀನಾಮೆ ಪತ್ರ ಹಿಡಿದುಕೊಂಡು ಬಂದಿದ್ದರು ಎಂದು ತಿಳಿದುಬಂದಿದೆ.

ಚಾಮರಾಜನಗರ ಸರಣಿ ಸಾವಿಗೆ ಹೊಣೆ ಹೊತ್ತು ಸುರೇಶ್ ಕುಮಾರ್ ರಾಜೀನಾಮೆ ಕೊಡ್ತಾರಾ ? ಚಾಮರಾಜನಗರ ಸರಣಿ ಸಾವಿಗೆ ಹೊಣೆ ಹೊತ್ತು ಸುರೇಶ್ ಕುಮಾರ್ ರಾಜೀನಾಮೆ ಕೊಡ್ತಾರಾ ?

ದುರಂತ ನಡೆಯಲು ಉಸ್ತುವಾರಿ ಮಂತ್ರಿಗಳ ನಿರ್ಲಕ್ಷ್ಯವೂ ಕಾರಣ ಎಂಬ ಆರೋಪಗಳು ಕೇಳಿಬಂದ ಹಿನ್ನಲೆಯಲ್ಲಿ ಅವರು ತುಂಬಾ ಬೇಸರಗೊಂಡಿದ್ದರು. ಇದರಿಂದಾಗಿ ತಮ್ಮ ವಿರುದ್ದ ಕೇಳಿ ಬಂದಿರುವ ಟೀಕೆಗಳಿಂದ ಹೊರಬರಲು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲು ಮುಂದಾಗಿದ್ದರು.

ಚಾಮರಾಜನಗರ; ಕೋವಿಡ್ ನಿರ್ವಹಣೆಯಲ್ಲಿ ಎಡವಿದ ಜಿಲ್ಲಾಡಳಿತ ಚಾಮರಾಜನಗರ; ಕೋವಿಡ್ ನಿರ್ವಹಣೆಯಲ್ಲಿ ಎಡವಿದ ಜಿಲ್ಲಾಡಳಿತ

Chamarajanagar Incident Suresh Kumar Wish To Quit Minister Post

ಆದರೆ ಈ ವಿಷಯ ತಿಳಿದುಕೊಂಡ ಸಣ್ಣ ನೀರಾವರಿ ಸಚಿವ ಜೆ. ಸಿ. ಮಾಧುಸ್ವಾಮಿ ರಾಜೀನಾಮೆ ಪತ್ರವನ್ನು ಓದಲು ಪಡೆದುಕೊಂಡು ಹರಿದು ಹಾಕಿದರು ಎಂದು ತಿಳಿದು ಬಂದಿದೆ. ಚಾಮರಾಜನಗರ ಜಿಲ್ಲೆಗೆ ಉಸ್ತುವಾರಿಯಾದ ನಂತರ 62 ಬಾರಿ ಹೋಗಿದ್ದೇನೆ. ಅಲ್ಲಿ ಸಭೆಗಳನ್ನು ನಡೆಸಿದ್ದೇನೆ. ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ಹೆಚ್ಚಿನ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲಾಗಿತ್ತು.

ಚಾಮರಾಜನಗರ, ಮೈಸೂರು ಜಿಲ್ಲಾಧಿಕಾರಿ ಕಚೇರಿ ದಾಖಲೆ ಜಪ್ತಿಗೆ ಆದೇಶಚಾಮರಾಜನಗರ, ಮೈಸೂರು ಜಿಲ್ಲಾಧಿಕಾರಿ ಕಚೇರಿ ದಾಖಲೆ ಜಪ್ತಿಗೆ ಆದೇಶ

Recommended Video

Tejasvi Surya ಹೇಳಿದ ಮಾತಿಗೆ ತಿರುಗಿಬಿದ್ದ ಜನ | Oneindia Kannada

ಘಟನೆ ಬಳಿಕ ಕೇಳಿ ಬಂದ ಆರೋಪಗಳು ತುಂಬಾ ಬೇಸರ ತಂದಿದೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದರು. ಸುರೇಶ್ ಕುಮಾರ್ ನಿರ್ಧಾರವನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕೂಡ ತಿರಸ್ಕರಿಸಿದ್ದು, ಇಂತಹ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದು ಮನವೊಲಿಸಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಸಚಿವ ಮಾಧುಸ್ವಾಮಿ ಅವರ ಮನವೊಲಿಸಿ ಸುರೇಶ್ ಕುಮಾರ್ ಸಮಾಧಾನಪಡಿಸಿದರು.

English summary
Chamarajnagar district in-charge minister Suresh Kumar wish to quit minister post after 24 patients including some Covid-19 positive died at Chamarajanagar district hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X