ಡಾ. ಬಿ.ಆರ್ ಅಂಬೇಡ್ಕರ್ ನಿಂದನೆ ಆರೋಪ: ಸಿಮ್ಸ್ ಡೀನ್ ಮುಖಕ್ಕೆ ಮಸಿ, ಕಾರು ಜಖಂ
ಚಾಮರಾಜನಗರ, ಮೇ 19: ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆಂದು ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಡಾ.ಸಂಜೀವ್ ಕುಮಾರ್ ಮುಖಕ್ಕೆ ಮಸಿ ಬಳಿದು ಆಕ್ರೋಶ ಹೊರಹಾಕಿರುವ ಘಟನೆ ಇಂದು ಚಾಮರಾಜನಗರದಲ್ಲಿ ನಡೆದಿದೆ.
ಸಿಮ್ಸ್ ಡೀನ್ ಡಾ. ಸಂಜೀವ್ ಕುಮಾರ್ ರೆಡ್ಡಿ ಅವರನ್ನು ಮುತ್ತಿಗೆ ಹಾಕಿದ ಬಿಎಸ್ಪಿ ಹಾಗೂ ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಸಂಜೀವ್ ಕುಮಾರ್ ಅವರ ಕಾರನ್ನು ಜಖಂಗೊಳಿಸಿ ಮುಖಕ್ಕೆ ಮಸಿ ಬಳಿದು ಆಕ್ರೋಶ ಹೊರಹಾಕಿದ್ದಾರೆ.

ವಿಚಾರ ಅರಿತ ಪೊಲೀಸರು ದೌಡಾಯಿಸಿ ಡೀನ್ ಅವರನ್ನು ಪ್ರತಿಭಟನಾಕಾರರಿಂದ ರಕ್ಷಿಸಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಬಳಿಕ, ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಟೈರ್ ಸುಟ್ಟು ರಸ್ತೆ ತಡೆ ನಡೆಸಿ ಡೀನ್ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ ಕಿಡಿಕಾರಿದರು.
ಗುರುವಾರ ಸಂಜೆ ತನ್ನ ಹಾಗೂ ಡಾ.ಗಿರೀಶ್ ಪಾಟೀಲ್, ಡಾ.ಹರ್ಷ ಸಮ್ಮುಖದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಡಾ.ಸಂಜೀವ್ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಡಾ.ಮಾರುತಿ ಚಾಮರಾಜನಗರ ಜಿಲ್ಲಾಧಿಕಾರಿಗೆ ದೂರು ಕೊಟ್ಟಿದ್ದಾರೆ.

ಆರೋಪ ಏನು..?
ಹಲವು ತಿಂಗಳುಗಳಿಂದ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕರರಿಗೆ ವೇತನ ಆಗಿಲ್ಲ. ಇದನ್ನು ಕೇಳಲು , ಗುರುವಾರ ಡೀನ್ ಕೊಠಡಿಗೆ ತೆರಳಿದ್ದ ವೇಳೆ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಡಾ.ಸಂಜೀವ್ ಕುಮಾರ್ ಅಂಬೇಡ್ಕರ್ ಹಾಗೂ ಸಂವಿಧಾನ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications