ಆನೆ-ಹುಲಿಗೆ ಹೆದರದವರನ್ನು ಕಂಗೆಡಿಸಿದ ಕೋತಿಗಳು
ಚಾಮರಾಜನಗರ, ನವೆಂಬರ್3: ಕಾಡಿನಲ್ಲೇ ಜೀವಿಸಿ ಕಾಡನ್ನೇ ದೇವರಾಗಿ ಕಾಣುವ ಸೋಲಿಗರಿಗೆ ಆನೆ, ಹುಲಿ ಸೇರಿದಂತೆ ಕಾಡುಪ್ರಾಣಿಗಳು ಎಂದರೆ ಯಾವ ಭಯವೂ ಇಲ್ಲ. ಅವುಗಳಿಂದ ತೊಂದರೆಯೂ ಇಲ್ಲ. ಆದರೆ ಚಾಮರಾಜನಗರ ತಾಲೂಕಿನ ಕನ್ನೇರಿ ಕಾಲೋನಿಯ ಜನರು ಕೋತಿಗಳ ಕಾಟದಿಂದ ಬೇಸತ್ತು ರೋಸಿ ಹೋಗಿದ್ದಾರೆ.
ಕನ್ನೇರಿ ಕಾಲೋನಿ ಗಿರಿಜನರ ಹಾಡಿಯಲ್ಲಿ 150ಕ್ಕೂ ಹೆಚ್ಚು ಮನೆಗಳಿದ್ದು, ಬಿಳಿಗಿರಿರಂಗನ ಬೆಟ್ಟ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕೆ.ಗುಡಿ ವಲಯ ವ್ಯಾಪ್ತಿಗೆ ಒಳಪಡಲಿದೆ. ಈ ಹಿಂದೆ ಇಲ್ಲಿ ಇರದ ಕೋತಿಗಳು ಕಳೆದ 15 ದಿನಗಳಿಂದ ಪ್ರತ್ಯಕ್ಷವಾಗಿದ್ದು ವನ್ಯಪ್ರಾಣಿಗಳಿಗೆ ಹೆದರದ ಇಲ್ಲಿನ ಜನರು ಈಗ ಕೋತಿ ಕಾಟಕ್ಕೆ ಬೇಸತ್ತಿದ್ದಾರೆ.

ಕೂಲಿ ಮಾಡಿ ತಿನ್ನುವವರಿಗೆ ಪಜೀತಿ ತಂದಿಟ್ಟ ಅರಣ್ಯ ಇಲಾಖೆ
ಬಿಳಿಗಿರಿರಂಗನಾಥ ದೇವಸ್ಥಾನದಲ್ಲಿದ್ದ ಅಥವಾ ಬೇರೆ ಕಡೆಯಲ್ಲಿದ್ದ ಕೋತಿಗಳನ್ನು ಹಿಡಿದು ಅರಣ್ಯ ಇಲಾಖೆಯವರು ಕಾಲೋನಿ ಬಳಿ ತಂದು ಬಿಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಕೂಲಿ ಕೆಲಸ ಮಾಡಿ ಬದುಕು ಸಾಗಿಸುತ್ತಿದ್ದ ಜನರಿಗೆ ಫಜೀತಿ ತಂದಿಟ್ಟಿದ್ದಾರೆ. ಮನೆಯ ಹೆಂಚನ್ನು ತೆಗೆದು ಒಳಗಿಳಿಯುವ ಕೋತಿಗಳು ಕಾಳು- ಕಡ್ಡಿ, ಊಟ, ಊಟದ ಪಾತ್ರೆಗಳು, ಮೊಟ್ಟೆ, ಎಣ್ಣೆ ಪ್ಯಾಕೆಟ್ ಎಲ್ಲವನ್ನೂ ತೆಗೆದುಕೊಂಡು ಹೋಗುತ್ತವೆ. ನಾವುಗಳು ಕೂಲಿ ಕೆಲಸಕ್ಕೆ ಹೋದರೆ ಅವುಗಳದ್ದೇ ರಾಜ್ಯಭಾರ ಎಂದು ಕಾಲೋನಿಯ ಕೇತಮ್ಮ ಎನ್ನುವರರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಕೋತಿಗಳನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರ ಆಗ್ರಹ
ಕೋತಿಗಳಿಂದ ತುಂಬಾ ತೊಂದರೆ ಉಂಟಾಗುತ್ತಿದೆ, ಸರ್ಕಾರ ಕೊಡುವ ಪೌಷ್ಟಿಕ ಆಹಾರವೂ ಕಪಿಗಳ ಪಾಲಾಗುತ್ತಿದೆ. ಈ ಭಾಗದಲ್ಲಿ 300ಕ್ಕೂ ಹೆಚ್ಚು ಕೋತಿಗಳಿವೆ. ನಮಗೆ ಆನೆ-ಹುಲಿಯಿಂದ ತೊಂದರೆ ಇಲ್ ಕೋತಿಗಳಿಂದಲೇ ತೊಂದರೆ. ಬೇರೆ ಭಾಗದಿಂದ ತಂದು ಇಲ್ಲಿಗೆ ಬಿಟ್ಟಿರುವ ಕೋತಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸೆರೆಹಿಡಿಯಬೇಕು ಎಂದು ಕನ್ನೇರಿ ಕಾಲೋನಿ ನಿವಾಸಿ ರಂಗೇಗೌಡ ಒತ್ತಾಯಿಸಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಕೋತಿಗಳ ಕಾಟಕ್ಕೆ ಬೇಸತ್ತಿರುವ ಕಾಡಿನ ಜನರ ಸಮಸ್ಯೆಗೆ ಸೂಕ್ತ ಪರಿಹಾರ ನೀಡಬೇಕಿದೆ.
ನಕಲಿ ವೈದ್ಯರಿಗೆ ಬಿಸಿಮುಟ್ಟಿಸಿದ ಚಾಮರಾಜನಗರ ಆರೋಗ್ಯ ಇಲಾಖೆ
ಚಾಮರಾಜನಗರದಲ್ಲಿ ವಿವಿಧಡೆ ನಕಲಿ ಕ್ಲಿನಿಕ್ಗಳ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು ವಿವಿಧ ತಾಲೂಕುಗಳಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.

ಮೂರು ಕ್ಲಿನಿಕ್ಗಳಿಗೆ ಬೀಗ ಜಡಿದ ಆರೋಗ್ಯಾಧಿಕಾರಿಗಳು
ಚಾಮರಾಜನಗರದಲ್ಲಿ ಜನರ ಜೀವದೊಟ್ಟಿಗೆ ಚೆಲ್ಲಾಟ ಆಡುತ್ತಿದ್ದ ನಕಲಿ ಅಲೋಪತಿ ವೈದ್ಯರಿಗೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಹನೂರು ತಾಲೂಕಿನ ಕೌದಳ್ಳಿಯಲ್ಲಿ ಮೂರು ಕ್ಲಿನಿಕ್ಗಳನ್ನು ಅಧಿಕಾರಿಗಳು ಬಂದ್ ಮಾಡಿಸಿದ್ದಾರೆ. ಜಿಲ್ಲಾ ಡಿಎಷ್ಓ ಡಾ.ವಿಶ್ವೇಶ್ವರಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಕೌದಳ್ಳಿ ಗ್ರಾಮದಲ್ಲಿ ಇರುವ ಆದಮ್ ಕ್ಲಿನಿಕ್, ಜನತಾ ಕ್ಲಿನಿಕ್ ಹಾಗೂ ದೀಪಾ ಕ್ಲಿನಿಕ್ ಮಾಲೀಕರಿಗೆ ನೋಟಿಸ್ ಜಾರಿ ಮಾಡಿದ ಅಧಿಕಾರಿಗಳು ಕ್ಲಿನಿಕ್ಗಳಿಗೆ ಬೀಗ ಜಡಿದಿದ್ದಾರೆ.

ಆಯುಷ್ ವೈದ್ಯರಿಂದ ಅಲೋಪತಿ ಚಿಕಿತ್ಸೆ
ಹನೂರು ತಾಲೂಕಿನ ವಿವಿಧಡೆ ನಕಲಿ ಕ್ಲಿನಿಕ್ಗಳ ಹಾವಳಿ ಹೆಚ್ಚಾಗಿದೆ ಎಂದು ಸಾರ್ವಜನಿಕರು ದೂರು ನೀಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಅಜ್ಜೀಪುರ, ರಾಮಾಪುರ ಮತ್ತು ಕೂಡ್ಲೂರು, ಹೂಗ್ಯಂ ಇನ್ನಿತರ ಭಾಗಗಳಲ್ಲಿ ಇರುವ ಕ್ಲಿನಿಕ್ಗಳನ್ನು ಸಹ ಅಧಿಕಾರಿಗಳ ತಂಡ ಪರಿಶೀಲನೆ ಮಾಡಲಿದ್ದಾರೆ. ಕ್ಲಿನಿಕ್ ಲೈಸೆನ್ಸ್ ಒಬ್ಬರದ್ದಾದರೇ, ಚಿಕಿತ್ಸೆ ಕೊಡುವವರು ಮತ್ತೊಬ್ಬರು, ಹಾಗೂ ಆಯುಷ್ ವೈದ್ಯರು ಅಲೋಪತಿ ಚಿಕಿತ್ಸೆ ಕೊಡುತ್ತಿರುವುದು ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications