ಎಲ್ಲಾ ಕ್ಷೇತ್ರಗಳಲ್ಲಿ ಭರ್ಜರಿ ಲೀಡ್, ಆದರೆ, ಅಪ್ಪನ ಕ್ಷೇತ್ರದಲ್ಲಿಯೇ ಕಡಿಮೆ ಮತಗಳ ಅಂತರ ಗಳಿಸಿದ ಸುನೀಲ್ ಬೋಸ್
ಚಾಮರಾಜನಗರ, ಜೂನ್. 05: ಆರಂಭದಿಂದಲೂ ಭರ್ಜರಿ ಮುನ್ನಡೆ ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಜಯಭೇರಿ ಬಾರಿಸಿದ್ದಾರೆ. ಬರೋಬ್ಬರಿ 1,88,706 ಮತಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿದ್ದಾರೆ. ಆದರೆ, ಟಿ.ನರಸೀಪುರದಲ್ಲಿ ಮಾತ್ರ ಕಡಿಮೆ ಲೀಡ್ ಪಡೆದಿದ್ದಾರೆ.
ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಚಾಮರಾಜನಗರ, ಗುಂಡ್ಲುಪೇಟೆ, ಹನೂರು ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ಮತ್ತು ಮೈಸೂರು ಜಿಲ್ಲೆಯ ಟಿ.ನರಸೀಪುರ, ವರುಣ, ನಂಜನಗೂಡು ಹಾಗೂ ಎಚ್.ಡಿ.ಕೋಟೆ ಬರಲಿದ್ದು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಕೈ ಅಭ್ಯರ್ಥಿಗೆ ಲೀಡ್ ತಂದುಕೊಟ್ಟರೇ ಟಿ.ನರಸೀಪುರದಲ್ಲಿ ಮಾತ್ರ ಅಲ್ಪ ಲೀಡ್ ಪಡೆದಿದ್ದಾರೆ.

ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ 1 ನೇ ಸುತ್ತಿನಿಂದ 7 ನೇ ಸುತ್ತಿನ ತನಕವೂ ನಿರಂತರ ಮುನ್ನಡೆ ಹೊಂದಿದ್ದರು. ಅದಾದ ಬಳಿಕವೂ, ಸುನಿಲ್ ಬೋಸ್ 76722 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಬಾಲರಾಜು 73801 ಮತಗಳನ್ನು ಪಡೆದುಕೊಂಡು 2921 ಮತಗಳ ಲೀಡ್ ಪಡೆದಿದ್ದಾರೆ. ಲಕ್ಷ ಮತಗಳ ಅಂತರದಲ್ಲಿ ಗೆದ್ದರೂ ಸುನಿಲ್ ಬೋಸ್ ಅವರಿಗೆ ತವರಿನಲ್ಲೇ ಅಲ್ಪ ಲೀಡ್ ಬಂದಿದ್ದು ಮುಜುಗರ ಅನುಭವಿಸಿದ್ದಾರೆ.
ಸಿಎಂ ಕ್ಷೇತ್ರದಲ್ಲಿ 33 ಸಾವಿರ ಲೀಡ್:
ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದಲ್ಲಿ ಆರಂಭಿಕವಾಗಿ ಕೈ ಕಮಲದ ನಡುವೆ ಟೈಟ್ ಫೈಟ್ ನಡೆದರೂ ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿಗೆ 33,352 ಲೀಡ್ ಸಿಕ್ಕಿದೆ. ಬಿಜೆಪಿ ಅಭ್ಯರ್ಥಿ 73852 ಮತ ಪಡೆದರೇ ಕಾಂಗ್ರೆಸ್ ಅಭ್ಯರ್ಥಿ 1,07203 ಮತ ಪಡೆದುಕೊಂಡರು.
ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಾಲರಾಜ್ಗೆ 72997 ಮತಗಳು ಬಂದಿದ್ದು, ಸುನಿಲ್ ಬೋಸ್ಗೆ 96,735 ಮತ ಸಿಕ್ಕಿದ್ದು 23, 738 ಲೀಡ್ ಸಿಕ್ಕಿದೆ. ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ 20,578 ಲೀಡ್, ಜೆಡಿಎಸ್ ಶಾಸಕ ಇರುವ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಕೈಗೆ 36,957 ಲೀಡ್ ಸಿಕ್ಕಿದೆ.

ಕೊಳ್ಳೇಗಾಲದಲ್ಲಿ 33,016 ಲೀಡ್, ಗುಂಡ್ಲುಪೇಟೆಯಲ್ಲಿ 17,982 ಲೀಡ್ ಹಾಗೂ ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 20326 ಮತಗಳು ಲೀಡ್ ಕೊಟ್ಟಿವೆ. 8 ವಿಧಾನಸಭಾ ಕ್ಷೇತ್ರಗಳಲ್ಲಿ ಟಿ.ನರಸಿಪುರ ಹೊರತುಪಡಿಸಿ ಉಳಿದೆಲ್ಲಾ ಕಡೆ ಭರ್ಜರಿ ಮತಗಳು ಕೈ ಬುಟ್ಟಿಗೆ ಬಂದಿವೆ. ಇವಿಎಂ ಮತ ಎಣಿಕೆ ಅಂಕಿ ಅಂಶಗಳು ಇದಾಗಿದ್ದು ಅಂಚೆ ಮತ ಪತ್ರದ ಲೆಕ್ಕ ಇನ್ನಷ್ಟೇ ತಿಳಿದುಬರಬೇಕಿದೆ.
ಕಡಿಮೆ ಲೀಡ್ಗೆ ಸುನೀಲ್ ಬೋಸ್ ಕೊಟ್ಟ ಕಾರಣ
ಎಲ್ಲಾ ಕ್ಷೇತ್ರದಲ್ಲೂ ಲೀಡ್ ಬಂದು ತವರಿನಲ್ಲೇ ಕಡಿಮೆ ಲೀಡ್ ಬಂದಿದ್ದರ ಕುರಿತು ವಿಜೇತ ಅಭ್ಯರ್ಥಿ ಸುನಿಲ್ ಬೋಸ್ ಮಾತನಾಡಿ, ಎಲ್ಲಾ 8 ಕ್ಷೇತ್ರಗಳಲ್ಲೂ ತನ್ನದೇ ಆದ ರಾಜಕೀಯ ಕಾರಣಗಳಿರುತ್ತವೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಹುರುಪು ತುಂಬಿ ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡುವಂತೆ ಮಾಡುತ್ತೇನೆ ಎಂದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications