Chamarajanagar oxygen tragedy: ನ್ಯಾಯ ಕೊಡಿ.. ಇಲ್ಲಾ ದಯಾ ಮರಣ ಕೊಡಿ: ಸಂತ್ರಸ್ತ ಮಹಿಳೆಯರ ಕಣ್ಣೀರು
ಚಾಮರಾಜನಗರ, ಜುಲೈ, 09: ಕೊರೊನಾ ಕಾಲದಲ್ಲಿ ಆಕ್ಸಿಜನ್ ದುರಂತ ನಡೆದು ಕುಟುಂಬದ ಆಧಾರಸ್ತಂಭ ಕಳೆದುಕೊಂಡ ಸಂತ್ರಸ್ತರು ನ್ಯಾಯ ಸಿಗದಿದ್ದಕ್ಕೆ ತಮಗೆ ದಯಾ ಮರಣ ಕೊಡಿ ಎಂದು ಕಣ್ಣೀರು ಇಟ್ಟಿದ್ದಾರೆ.
ಚಾಮರಾಜನಗರದಲ್ಲಿ ಸಂತ್ರಸ್ತ ಮಹಿಳೆಯರು ಸುದ್ದಿಗೋಷ್ಠಿ ನಡೆಸಿ ತಮ್ಮ ಅಳಲು ತೋಡಿಕೊಂಡಿದ್ದು, ಈ ವೇಳೆ ಉಮ್ಮಳಿಸಿ ಬಂದ ದುಃಖ ತಾಳಲಾರದೇ ಕಣ್ಣೀರಿಟ್ಟರು.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕಳೆದ 3 ವರ್ಷದ ಹಿಂದೆ ನಡೆದ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಇನ್ನೂ ಕೂಡ ಸರಿಯಾದ ನ್ಯಾಯ ಸಿಗದೇ, ಪರಿಹಾರ ಸಿಗದೇ ಅಲೆದಾಡುತ್ತಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ನೌಕರಿಗೂ ಈಗ ಕುತ್ತು ಬಂದಿದೆ.
ತಾಲೂಕು ಕಚೇರಿ, ಸ್ಥಳೀಯ ಹಾಸ್ಟೆಲ್ಗಳಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರನ್ನು ಏಕಾಏಕಿ ಸಿಮ್ಸ್ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿ ಎಂದು ಸೂಚಿಸಿದ್ದು, ತಮ್ಮವರನ್ನು ಕಳೆದುಕೊಂಡ ಆಸ್ಪತ್ರೆಯಲ್ಲಿ ತಾವು ಕೆಲಸ ಮಾಡುವುದಿಲ್ಲ. ಬೇರೆ ಕಡೆ ತಮಗೆ ಖಾಯಂ ಉದ್ಯೋಗ ಕೊಡಿ ಎಂದು ಸಂತ್ರಸ್ತರು ಮನವಿ ಮಾಡಿಕೊಂಡಿದ್ದಾರೆ.
ಆಕ್ಸಿಜನ್ ದುರಂತಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ನಮ್ಮ ಕುಟುಂಬಗಳಿಗೆ ನ್ಯಾಯ ಕೊಡಿಸಬೇಕು. ಇದು ಸಾಧ್ಯವಿಲ್ಲ ಎಂದಾದರೇ ತಮಗೆ ದಯಾ ಮರಣ ಕೊಡಿ ಎಂದು ಸಂತ್ರಸ್ತ ಮಹಿಳೆಯರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.
ಭಾರತ್ ಜೋಡೋ ಯಾತ್ರೆ ವೇಳೆ ಸಂತ್ರಸ್ತ ಕುಟುಂಬಗಳನ್ನು ರಾಹುಲ್ ಗಾಂಧಿ ಭೇಟಿ ಮಾಡಿ ಖಾಯಂ ಉದ್ಯೋಗದ ಭರವಸೆ ಕೊಟ್ಟಿದ್ದರು. ತಪ್ಪಿತಸ್ತರಿಗೆ ಶಿಕ್ಷೆ ಕೊಡಿಸುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ, ಸರ್ಕಾರ ಬಂದು ಒಂದು ವರ್ಷವಾದರೂ ಯಾವುದೂ ಈಡೇರಿಲ್ಲ ಎಂದು ಸಂತ್ರಸ್ತ ಕಣ್ಣೀರು ಹಾಕಿದರು.
ನೆಪ ಮಾತ್ರಕ್ಕೆ 9 ಮಂದಿಗೆ ಗ್ರೂಪ್ ಡಿ ಹೊರ ಗುತ್ತಿಗೆ ಆದಾರದ ಮೇಲೆ ಕೆಲಸ ನೀಡಲಾಗಿತ್ತು. ಆದರೆ ಈಗ ಅದು ಕೂಡ ಇಲ್ಲದಂತಾಗಿದೆ. ಅತ್ತ ಕೂಲಿ ಕೆಲಸಕ್ಕೂ ಹೋಗಲಾಗದೆ, ಇತ್ತ ಹೊರ ಗುತ್ತಿಗೆ ಕೆಲಸವನ್ನು ಮಾಡಲಾಗದೆ, ತಾವು ಅತಂತ್ರರಾಗಿದ್ದೇವೆ ಎಂದು ಸಂತ್ರಸ್ತೆಯರು ಪರಿತಪಿಸಿದ್ದಾರೆ. ಇನ್ನಾದರೂ ಸರ್ಕಾರ ಇವರಿಗೆ ನ್ಯಾಯ ಕೊಡುವುದೇ ಎಂದು ಕಾದು ನೋಡಬೇಕಿದೆ.
ಹೆಜ್ಜೇನು ದಾಳಿ: ಅಂತ್ಯಕ್ರಿಯೆಗೆ ತೆರಳಿದ್ದ ವೇಳೆ ಹೆಜ್ಜೆನು ದಾಳಿ ನಡೆಸಿ 42 ಮಂದಿಗೆ ಕಚ್ಚಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ.
ಬಸವಾಪುರ ಗ್ರಾಮದ ಮಹಾದೇವಯ್ಯ (65) ಎಂಬವರು ವಯೋಸಹಜ ಕಾರಣದಿಂದ ಶುಕ್ರವಾರ (ಜುಲೈ 06) ಮೃತಪಟ್ಟಿದ್ದರು. ಇವರ ಅಂತ್ಯಕ್ರಿಯೆ ನಡೆಸುವಾಗ ಬೆಂಕಿ ಹಾಕಿದ್ದ ವೇಳೆಗೆ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿದೆ.
42 ಮಂದಿ ಮೇಲೆ ಹೆಜ್ಜೆನು ದಾಳಿ ನಡೆಸಿದ್ದು, ಇದರಲ್ಲಿ 19 ಮಂದಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಉಳಿದವರು ಹಂಗಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಜ್ಜೇನು ಕಡಿತಕ್ಕೋಳಗಾದವರ ಮುಖ, ಕೈ ಊದಿಕೊಂಡಿದ್ದು, ಆಸ್ಪತ್ರೆಗೆ ಡಿಎಚ್ಒ ಡಾ.ಚಿದಂಬರ, ಟಿಎಚ್ಒ ಡಾ.ಅಲೀಂ ಪಾಷಾ ಭೇಟಿ ನೀಡಿ ಚಿಕಿತ್ಸೆಗೊಳಗಾದವರ ಆರೋಗ್ಯ ವಿಚಾರಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications