ಈ ಗೂಬೆಯ ಬೆಲೆ ಎಷ್ಟು ಗೊತ್ತಾ? ಬರೋಬ್ಬರಿ 3 ಲಕ್ಷ ರೂ.!
ಚಾಮರಾಜನಗರ, ಮಾರ್ಚ್ 09: ತಮಿಳುನಾಡಿಗೆ ಗೂಬೆ ಸಾಗಿಸಿ ಹಣ ಮಾಡಿಕೊಳ್ಳಲು ಮುಂದಾಗಿದ್ದ ಇಬ್ಬರನ್ನು ಚಾಮರಾಜನಗರ ಜಿಲ್ಲಾ ಅಪರಾಧ ವಿಭಾಗದ ಪೊಲೀಸರು ಬಂಧಿಸಿ ಗೂಬೆಯನ್ನು ರಕ್ಷಿಸಿದ್ದಾರೆ.
ವಾಮಾಚಾರಕ್ಕಾಗಿ ಈ ಗೂಬೆಗಳನ್ನು ಬಳಸುವುದರಿಂದ ಇದಕ್ಕೆ ಬೇಡಿಕೆ ಹೆಚ್ಚು! ಹಲವು ವರ್ಷಗಳಿಂದ ಗೂಬೆ, ಆಮೆ, ಎರಡು ತಲೆಯ ಹಾವನ್ನು ಸಾಗಿಸುವ ದಂಧೆ ನಡೆಯುತ್ತಲೇ ಇದೆ ಕೆಲವು ವರ್ಷದ ಹಿಂದೆ ಕೊಡಗಿನಲ್ಲಿ ಈ ದಂಧೆ ಕಂಡು ಬಂದಿತ್ತಲ್ಲದೆ, ಬಿಳಿಗೂಬೆಯನ್ನು ಅಕ್ರಮವಾಗಿ ಇಟ್ಟು ಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದರು.
ಇದೀಗ ಮಲೆಮಹದೇಶ್ವರ ವನ್ಯಧಾಮದಲ್ಲಿ ಗೂಬೆಯನ್ನು ಹಿಡಿದು ತಮಿಳುನಾಡಿನ ರಾಜಕಾರಣಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಹನೂರು ತಾಲೂಕಿನ ಮಿಣ್ಯಂ ಗ್ರಾಮದ ಶಂಬೇಗೌಡ ಹಾಗೂ ಕೆಂಪಣ್ಣ ಎಂಬಿಬ್ಬರು ಸಿಕ್ಕಿಬಿದ್ದಿದ್ದು. 3ಲಕ್ಷ ರೂ.ಗೆ ಗೂಬೆಯನ್ನು ಮಾರಾಟ ಮಾಡಲು ಯತ್ನಿಸಿದ್ದರು ಎಂಬುದು ಬೆಳಕಿಗೆ ಬಂದಿದೆ.

ಇವರಿಬ್ಬರು ಇದಕ್ಕೂ ಮೊದಲು ಈ ದಂಧೆಯಲ್ಲಿ ತೊಡಗಿದ್ದರಾ ಅಥವಾ ಇದೇ ಮೊದಲಾ ಎಂಬುದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ. ಆದರೆ ರಾಮಾಪುರ ವನ್ಯಜೀವಿ ವಲಯದ ಮಂಚಾಪುರ ಗ್ರಾಮದ ಹಿಂಭಾಗದ ಗುಡ್ಡದಲ್ಲಿ ಗೂಬೆ ಹಿಡಿದಿದ್ದ ಇವರು ಅದನ್ನು ಜೋಪಾನವಾಗಿಟ್ಟುಕೊಂಡು ತಮಿಳುನಾಡಿಗೆ ಕೊಂಡೊಯ್ದು ಮಾರಾಟ ಮಾಡಲು ನಿರ್ಧರಿಸಿ ಕೊಂಡೊಯ್ಯುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಅಪರಾಧ ವಿಭಾಗದ ಸರ್ಕಲ್ ಇನ್ಸ್ಪೆಕ್ಟರ್ ರವೀಂದ್ರ, ಸಿಬ್ಬಂದಿ ಸ್ವಾಮಿ, ರವಿ, ಸಿದ್ದಮಲ್ಲಶೆಟ್ಟಿ ಅವರನ್ನೊಳಗೊಂಡ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ವಿಚಾರಣೆಗೊಳಪಡಿಸಿದಾಗ ಅದೃಷ್ಟದ ಗೂಬೆಯೆಂದು ನಂಬಿಸಿ ತಮಿಳುನಾಡಿನ ಮೂಲದವರಿಗೆ 3 ಲಕ್ಷ ರೂಪಾಯಿಗೆ ಮಾರಾಟ ಮಾಡಲು ತೆರಳುತ್ತಿದ್ದುದಾಗಿ ಅವರು ಹೇಳಿದ್ದಾರೆ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಆಧುನಿಕ ಯುಗದಲ್ಲಿಯೂ ವನ್ಯಪ್ರಾಣಿಗಳನ್ನಿಟ್ಟುಕೊಂಡು ವಂಚಿಸುವವರು ಇದ್ದಾರಲ್ಲ ಎನ್ನುವುದೇ ಅಚ್ಚರಿಯ ವಿಷಯವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications