ಚಾಮರಾಜನಗರ: ಚರಂಡಿಯ ಕಲ್ಲು ಹೊತ್ತೊಯ್ದ ಜನಪ್ರತಿನಿಧಿ!
ಚಾಮರಾಜನಗರದ ಹನೂರು ಪಟ್ಟಣ ಪಂಚಾಯಿತಿ ಸದಸ್ಯರೊಬ್ಬರ ಮೇಲ ಚರಂಡಿಯ ಕಲ್ಲನ್ನು ಮನೆಗೆ ಹೊತ್ತೊಯ್ದ ಆರೋಪ ಕೇಳಿ ಬಂದಿದೆ.
ಚಾಮರಾಜನಗರ, ಜನವರಿ 29: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎನ್ನುವುದಕ್ಕೆ ಇದಕ್ಕಿಂತ ಒಳ್ಳೆ ಉದಾಹರಣೆ ಇರಲಿಕ್ಕಿಲ್ಲ. ಊರು ಉದ್ಧಾರ ಮಾಡಲು ಕಳುಹಿಸಿದ ಜನಪ್ರತಿನಿಧಿ ಸಾರ್ವಜನಿಕ ರಸ್ತೆ ಬದಿಯಲ್ಲಿದ್ದ ಸೈಜ್ಕಲ್ಲನ್ನೇ ಹೊತ್ತೊಯ್ದಿದ್ದ ಪ್ರಕರಣ ಚಾಮರಾಜನಗರದಿಂದ ವರದಿಯಾಗಿದೆ.
ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಲೊಕ್ಕನಹಳ್ಳಿ ಮುಖ್ಯರಸ್ತೆಯಲ್ಲಿರುವ ಬಿ.ಎಂ.ಜಿ ಪ್ರೌಢಶಾಲೆಯಿಂದ ತಟ್ಟೆಹಳ್ಳದವರೆಗೆ ದಲಿತರ ಕಾಲೋನಿಯಲ್ಲಿ ಸುಸ್ಥಿತಿಯಲ್ಲಿದ್ದ ಚರಂಡಿಯನ್ನು ಜೆಸಿಬಿ ಯಂತ್ರದಿಂದ ನಾಶಗೊಳಿಸಿ ಅದರಲ್ಲಿದ್ದ ಸುಮಾರು 20 ಸಾವಿರ ಸೈಜು ಕಲ್ಲುಗಳನ್ನು ಅಕ್ರಮವಾಗಿ ದಾಸ್ತಾನಿರಿಸಿಕೊಂಡಿದ್ದಾರೆ ಎಂಬ ಆರೋಪ ಇಲ್ಲಿನ ಸ್ಥಳೀಯ ಜನಪ್ರತಿನಿಧಿಯ ಮೇಲೆ ಕೇಳಿ ಬಂದಿದೆ.[ನಂಜನಗೂಡು: ದನ ಮೇಯಿಸುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ]

ಕಲ್ಲುಗಳನ್ನು ಅಕ್ರಮವಾಗಿ ಸಾಗಿಸಿ ತಮ್ಮ ನಿವೇಶನದಲ್ಲಿ ಮಾತ್ರವಲ್ಲದೆ, ತೋಟದಲ್ಲಿ ಅಕ್ರಮವಾಗಿ ದಾಸ್ತಾನಿರಿಸಲಾಗಿತ್ತು. ಈ ಬಗ್ಗೆ ಪೋಟೋ ಸಮೇತ ಪ.ಪಂ. ನಾಲ್ಕನೇ ವಾರ್ಡ್ ಸದಸ್ಯ ಬಸವರಾಜು ಸಾಕ್ಷ್ಯಾಧಾರ ಸಮೇತ ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು. ದೂರು ನೀಡಿ ಎರಡು ತಿಂಗಳುಗಳೇ ಕಳೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ತನಿಖಾಧಿಕಾರಿ ವರ್ಗ ಸ್ಥಳ ಪರಿಶೀಲನೆ ಮಾಡಿ ವರದಿ ತರಿಸಿಕೊಂಡಿದ್ದರೂ ಜಿಲ್ಲಾಡಳಿತ ಮಾತ್ರ ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ಮೌನಕ್ಕೆ ಶರಣಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.[ಕಾಡಿನಿಂದ ಕರೆತಂದವರಿಗೆ ಕನಿಷ್ಠ ಸೌಲಭ್ಯವೂ ಇಲ್ಲ, ಇದೆಂಥ ಶಿಕ್ಷೆ?]
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications