ಬಾಕ್ಸಿಂಗ್ನಲ್ಲಿ ಸ್ಪೇನ್ ಮಣಿಸಿದ ಚಾಮರಾಜನಗರ ಯೋಧ
ಚಾಮರಾಜನಗರ, ಆಗಸ್ಟ್ 13: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಯೋಧರೊಬ್ಬರು ಸ್ಪೇನ್ ವಿರುದ್ಧ ನಡೆದ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗಳಿಸಿ ದೇಶಕ್ಕೆ ಕೀರ್ತಿತಂದಿದ್ದಾರೆ.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಹೊನ್ನೇಗೌಡನಹಳ್ಳಿ ಗ್ರಾಮದ ಎಚ್.ವಿ.ಮಹದೇವಪ್ಪ ಹಾಗೂ ಮಲ್ಲಿಗಮ್ಮನವರ ಪುತ್ರ ಎಚ್.ಎಂ.ಶಿವಶಂಕರಪ್ಪ 2003ರಲ್ಲಿ ಭಾರತೀಯ ಗಡಿ ಭದ್ರತಾಪಡೆಗೆ ಪೇದೆಯಾಗಿ ಸೇವೆಗೆ ಸೇರಿದ್ದು, ಸದ್ಯ ದೆಹಲಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಭಾನುವಾರ ಅಮೆರಿಕಾದ ಲಾಸ್ ಏಂಜಲೀಸ್ನಲ್ಲಿ ನಡೆದ ಸ್ಪರ್ಧೆಯಲ್ಲಿ ಸ್ಪೇನ್ ಬಾಕ್ಸರ್ ವಿರುದ್ಧ ಸ್ಪರ್ಧಿಸಿ ಜಯಗಳಿಸಿದ್ದಾರೆ.

2004 ರಿಂದ 2007ರ ವರೆಗೆ ಬಾಕ್ಸಿಂಗ್ ತರಬೇತಿ ಪಡೆದು 2008-09ರಲ್ಲಿ ಅಖಿಲ ಭಾರತ ಪೊಲೀಸ್ ಅಕಾಡೆಮಿಯ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ಬೆಳ್ಳಿ ಪದಕಗಳಿಸಿದ್ದರು. ನಂತರ 2010ರಿಂದ 15ರವರೆಗೆ ನಡೆದ ಎಲ್ಲಾ ಸ್ಪರ್ಧೆಗಳಲ್ಲಿಯೂ ಭಾಗವಹಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. 2012ರಲ್ಲಿ ಬ್ರೆಜಿಲ್ನಲ್ಲಿ ನಡೆದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ, 2016ರಲ್ಲಿ ಯುಎಸ್ಎ ವರ್ಜೀನಿಯಾದ ವಾಷಿಂಗ್ಟನ್ನಲ್ಲಿ ನಡೆದ ವಿಶ್ವ ಪೊಲೀಸ್ ಕ್ರೀಡಾಕೂಟದಲ್ಲಿ ಅತಿಹೆಚ್ಚು ಭಾರದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಬೆಳ್ಳಿಯ ಪದಕ ಪಡೆದುಕೊಂಡಿದ್ದರು.

ಇದೀಗ ಆಗಸ್ಟ್ 13ರ ಭಾನುವಾರ ಅಮೇರಿಕಾದ ಲಾಸ್ ಏಂಜಲೀಸ್ನಲ್ಲಿ ಸ್ಪೇನ್ ವಿರುದ್ದ ನಡೆದ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಚಿನ್ನದ ಪದಕಗಳಿಸಿ ದೇಶಕ್ಕೆ ಕೀರ್ತಿತಂದಿದ್ದಾರೆ. ಇವರ ಪತ್ನಿ ಸಂಧ್ಯಾರಾಣಿ, ಪುತ್ರಿ ಲೇಖನಾ ಮೈಸೂರಿನ ಕುವೆಂಪು ನಗರದಲ್ಲಿ ವಾಸವಾಗಿದ್ದಾರೆ.

-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications