ಬಾಕ್ಸಿಂಗ್ನಲ್ಲಿ ಸ್ಪೇನ್ ಮಣಿಸಿದ ಚಾಮರಾಜನಗರ ಯೋಧ
ಚಾಮರಾಜನಗರ, ಆಗಸ್ಟ್ 13: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಯೋಧರೊಬ್ಬರು ಸ್ಪೇನ್ ವಿರುದ್ಧ ನಡೆದ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗಳಿಸಿ ದೇಶಕ್ಕೆ ಕೀರ್ತಿತಂದಿದ್ದಾರೆ.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಹೊನ್ನೇಗೌಡನಹಳ್ಳಿ ಗ್ರಾಮದ ಎಚ್.ವಿ.ಮಹದೇವಪ್ಪ ಹಾಗೂ ಮಲ್ಲಿಗಮ್ಮನವರ ಪುತ್ರ ಎಚ್.ಎಂ.ಶಿವಶಂಕರಪ್ಪ 2003ರಲ್ಲಿ ಭಾರತೀಯ ಗಡಿ ಭದ್ರತಾಪಡೆಗೆ ಪೇದೆಯಾಗಿ ಸೇವೆಗೆ ಸೇರಿದ್ದು, ಸದ್ಯ ದೆಹಲಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಭಾನುವಾರ ಅಮೆರಿಕಾದ ಲಾಸ್ ಏಂಜಲೀಸ್ನಲ್ಲಿ ನಡೆದ ಸ್ಪರ್ಧೆಯಲ್ಲಿ ಸ್ಪೇನ್ ಬಾಕ್ಸರ್ ವಿರುದ್ಧ ಸ್ಪರ್ಧಿಸಿ ಜಯಗಳಿಸಿದ್ದಾರೆ.

2004 ರಿಂದ 2007ರ ವರೆಗೆ ಬಾಕ್ಸಿಂಗ್ ತರಬೇತಿ ಪಡೆದು 2008-09ರಲ್ಲಿ ಅಖಿಲ ಭಾರತ ಪೊಲೀಸ್ ಅಕಾಡೆಮಿಯ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ಬೆಳ್ಳಿ ಪದಕಗಳಿಸಿದ್ದರು. ನಂತರ 2010ರಿಂದ 15ರವರೆಗೆ ನಡೆದ ಎಲ್ಲಾ ಸ್ಪರ್ಧೆಗಳಲ್ಲಿಯೂ ಭಾಗವಹಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. 2012ರಲ್ಲಿ ಬ್ರೆಜಿಲ್ನಲ್ಲಿ ನಡೆದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ, 2016ರಲ್ಲಿ ಯುಎಸ್ಎ ವರ್ಜೀನಿಯಾದ ವಾಷಿಂಗ್ಟನ್ನಲ್ಲಿ ನಡೆದ ವಿಶ್ವ ಪೊಲೀಸ್ ಕ್ರೀಡಾಕೂಟದಲ್ಲಿ ಅತಿಹೆಚ್ಚು ಭಾರದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಬೆಳ್ಳಿಯ ಪದಕ ಪಡೆದುಕೊಂಡಿದ್ದರು.

ಇದೀಗ ಆಗಸ್ಟ್ 13ರ ಭಾನುವಾರ ಅಮೇರಿಕಾದ ಲಾಸ್ ಏಂಜಲೀಸ್ನಲ್ಲಿ ಸ್ಪೇನ್ ವಿರುದ್ದ ನಡೆದ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಚಿನ್ನದ ಪದಕಗಳಿಸಿ ದೇಶಕ್ಕೆ ಕೀರ್ತಿತಂದಿದ್ದಾರೆ. ಇವರ ಪತ್ನಿ ಸಂಧ್ಯಾರಾಣಿ, ಪುತ್ರಿ ಲೇಖನಾ ಮೈಸೂರಿನ ಕುವೆಂಪು ನಗರದಲ್ಲಿ ವಾಸವಾಗಿದ್ದಾರೆ.

-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications