ಚಾಮರಾಜನಗರ : ನಕ್ಸಲರತ್ತ ಹದ್ದಿನ ಕಣ್ಣಿಡಲು ಎಸ್ಪಿ ಬಾಲಕೃಷ್ಣ ಸೂಚನೆ
ಚಾಮರಾಜನಗರ, ಅಕ್ಟೋಬರ್ 22: ತಮಿಳುನಾಡು ಮತ್ತು ಕೇರಳದೊಂದಿಗೆ ಚಾಮರಾಜನಗರ ಸಂಪರ್ಕ ಹೊಂದಿರುವ ಕಾರಣ ನಕ್ಸಲರು ಜಿಲ್ಲೆಯ ಮೂಲಕ ರಾಜ್ಯದೊಳಕ್ಕೆ ನುಸುಳುವ ಸಾಧ್ಯತೆ ಹೆಚ್ಚಾಗಿದೆ. ಈ ಕಾರಣಕ್ಕೆ ಸನ್ನದ್ಧರಾಗಿರುವಂತೆ ನಕ್ಸಲ್ ನಿಗ್ರಹ ಪಡೆಯ ನೂತನ ಎಸ್ಪಿ ಕೆ.ಟಿ.ಬಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಬರಗಿ ಬಳಿ ನಕ್ಸಲ್ ನಿಗ್ರಹ ಪಡೆಯ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಲು ಆಗಮಿಸಿದ ವೇಳೆ ಅಧಿಕಾರಿಗಳೊಂದಿಗೆ ಅವರು ಮಾತನಾಡಿದರು. ಗಡಿ ಪ್ರದೇಶಗಳು ಅರಣ್ಯದಿಂದ ಆವರಿಸಿರುವ ಕಾರಣ ಮತ್ತು ಕೇರಳ ಹಾಗೂ ತಮಿಳುನಾಡಿಗೆ ಹೊಂದಿಕೊಂಡಿರುವ ಕಾರಣ ನಕ್ಸಲರು ರಾಜ್ಯದೊಳಕ್ಕೆ ನುಗ್ಗಲು ಹವಣಿಸಬಹುದು. ಹೀಗಾಗಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.

ಸದಾ ನಕ್ಸಲರ ಚಲನವಲನದ ಬಗ್ಗೆ ಕಣ್ಣಿಡುವಂತೆ ಹಾಗೂ ಸಂಶಯಾತ್ಮಕ ವ್ಯಕ್ತಿಗಳ ಬಗ್ಗೆ ಮಾಹಿತಿ ಪಡೆದು ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಇನ್ನು ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದ ಅವರು ನಿರ್ಮಾಣದಲ್ಲಿ ನಿಗದಿತ ಗುಣಮಟ್ಟ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ನಂತರ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಗೆ ಬಳಿ ನಿರ್ಮಿಸುತ್ತಿರುವ ಕಟ್ಟಡದ ವೀಕ್ಷಣೆಗೆ ತೆರಳಿದರು. ಈ ವೇಳೆ ಡಿವೈಎಸ್ಪಿ ಪ್ರಸನ್ನಕುಮಾರ್, ಸಿಬ್ಬಂದಿ ಮಹದೇವ ಪ್ರಸಾದ್, ಶಿವಕುಮಾರ್ ಇದ್ದರು.
ಚಾಮರಾಜನಗರದಲ್ಲಿ ನಕ್ಸಲ್ ಭಯ
ಚಾಮರಾಜನಗರದಲ್ಲಿ ಕೇರಳದಿಂದ ನಕ್ಸಲರು ನುಗ್ಗುವ ಭಯ ಮೊದಲಿನಿಂದಲೂ ಇದೆ. ಹೀಗಾಗಿಯೇ ಇಲ್ಲಿನ ಅರಣ್ಯದಂಚಿನ ಚೆಕ್ಪೋಸ್ಟ್ ಗಳಲ್ಲಿ ಪ್ರಮುಖ ನಕ್ಸಲ್ ನಾಯಕರ ಮಾಹಿತಿಯನ್ನು ಕರಪತ್ರ ಹಂಚಿ ಹಾಗೂ ಪೋಸ್ಟರ್ ಅಂಟಿಸಿ ಸಾರ್ವಜನಿಕರಿಗೆ ನೀಡಲಾಗಿತ್ತು.

ದಕ್ಷಿಣಕನ್ನಡ, ಚಿಕ್ಕಮಗಳೂರು ಗಡಿಭಾಗದಲ್ಲಿದ್ದ ಕೆಲವು ನಕ್ಸಲರು ವರ್ಷಗಳ ಹಿಂದೆ ಕೊಡಗಿನ ಮೂಲಕ ಮೈಸೂರು, ಚಾಮರಾಜ ಮಾರ್ಗವಾಗಿ ಕೇರಳದ ಕಡೆಗೆ ತೆರಳಿದ್ದರು ಎಂಬ ವದಂತಿ ಹರಡಿತ್ತು. ಕೊಡಗಿನಲ್ಲಿ ಕೆಲವರನ್ನು ಬೆದರಿಸಿ ತಮಗೆ ಬೇಕಾದ ಆಹಾರ ಪದಾರ್ಥಗಳನ್ನು ಪಡೆದಿದ್ದಾರೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಇನ್ನು ಕೇರಳದಲ್ಲಿ ನಕ್ಸಲ್ ಚಟುವಟಿಕೆ ಜಾಸ್ತಿಯಿರುವ ಕಾರಣ ಅಲ್ಲಿನ ಕೆಲವರು ಚಾಮರಾಜನಗರ ಮತ್ತು ಹೆಚ್.ಡಿ.ಕೋಟೆ ಮೂಲಕ ರಾಜ್ಯದೊಳಕ್ಕೆ ನುಗ್ಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಹೀಗಾಗಿ ಗುಂಡ್ಲುಪೇಟೆಯ ಬರಗಿ ಹಾಗೂ ಹೆಚ್.ಡಿ.ಕೋಟೆಯ ಬೀಚನಹಳ್ಳಿ ಬಳಿ ನಕ್ಸಲ್ ನಿಗ್ರಹ ಪಡೆಯ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು ಕಟ್ಟಡವನ್ನು ನಿರ್ಮಿಸಲಾಗುತ್ತಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications