ವ್ಯಾಪಕ ಆಕ್ರೋಶ; ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ನಿಷೇಧ ಆದೇಶ ವಾಪಸ್
ಸಾರ್ವಜನಿಕರು ಹಾಗೂ ಭಕ್ತಾದಿಗಳಿಂದ ಭಾರೀ ಟೀಕೆ ವ್ಯಕ್ತವಾದ ಹಿನ್ನೆಲೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಮಧ್ಯಾಹ್ನ 3 ಗಂಟೆಯೊಳಗೆ ಬಸ್ ಸಂಚಾರ ನಿಷೇಧಿಸಿ ಹೊರಡಿಸಿದ ಆದೇಶವನ್ನು ತಹಸೀಲ್ದಾರ್ ಟಿ.ರಮೇಶ್ ಬಾಬು ಒಂದೇ ದಿನಕ್ಕೆ ಹಿಂಪಡೆದಿದ್ದಾರೆ. ಈ ಮೂಲಕ ಪ್ರವಾಸಿಗರಿಗೆ ಗೋಪಾಲನ ದರ್ಶನ ಎಂದಿನಂತೆ ಸಿಗಲಿದೆ.
ವಿವಿಧ ಕಾರಣ ನೀಡಿ ತಾಲ್ಲೂಕು ಆಡಳಿತ ಹಾಗೂ ತಹಸೀಲ್ದಾರ್ ಟಿ.ರಮೇಶ್ ಬಾಬು ಗೋಪಾಲಸ್ವಾಮಿ ಬೆಟ್ಟಕ್ಕೆ ಮಧ್ಯಾಹ್ನ 3 ಗಂಟೆಗೆ ಬಸ್ ಸಂಚಾರ ನಿಷೇಧಿಸಿ ಗುರುವಾರ ಆದೇಶ ಹೊರಡಿಸಿದ್ದರು. ಆದರೆ ಸಾರ್ವಜನಿಕರು ಹಾಗೂ ಭಕ್ತಾದಿಗಳು ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಕನ್ನೇಗಾಲ ಗ್ರಾಮಸ್ಥರು ಸ್ವತಃ ತಹಸೀಲ್ದಾರ್ ಬಳಿ ಆದೇಶ ಹಿಂಪಡೆಯುವಂತೆ ಲಿಖಿತ ಮನವಿ ಸಲ್ಲಿಸಿದ್ದರು. ಈ ಕುರಿತು ತಹಸೀಲ್ದಾರ್ ಟಿ.ರಮೇಶ್ ಬಾಬು ಮೇಲಾಧಿಕಾರಿಗಳ ಜೊತೆ ಚರ್ಚಿಸಿ ಅವರ ಸೂಚನೆಯ ಮೇರೆಗೆ ಈ ಹಿಂದೆ ಇದ್ದ ನಿಯಮದಂತೆ 4 ಗಂಟೆಯವರೆಗೆ ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟು ಹೊಸ ಆದೇಶವನ್ನು ಹಿಂಪಡೆದಿದ್ದಾರೆ. ಜೊತೆಗೆ ಅರಣ್ಯ ಇಲಾಖೆಯಿಂದ ಹೆಚ್ಚುವರಿ ಸಿಬ್ಬಂದಿ ನೇಮಿಸಿ ದೇವಾಲಯಕ್ಕೆ ಪ್ರಸಾದ ತಿನ್ನಲು ಬರುವ ಕಾಡಾನೆಯ ಮೇಲೆ ನಿಗಾವಹಿಸುವಂತೆ ಸೂಚಿಸಿದ್ದಾರೆ.
ಈ ಕುರಿತು ತಹಸೀಲ್ದಾರ್ ಟಿ.ರಮೇಶ್ ಬಾಬು ಪ್ರತಿಕ್ರಿಯೆ ನೀಡಿದ್ದು, ದೂರದ ಊರುಗಳಿಂದ ಬರುವ ಪ್ರವಾಸಿಗರು, ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ 3 ಗಂಟೆಯೊಳಗೆ ಬಸ್ ಸಂಚಾರ ನಿಷೇಧದ ಆದೇಶದಿಂದ ಸಮಸ್ಯೆಯಾಗುತ್ತದೆ ಎಂದು ದೂರುಗಳು ಕೇಳಿಬಂದ ಹಿನ್ನೆಲೆ ಜೊತೆಗೆ ಪ್ರವಾಸಿಗರ ಅನುಕೂಲತೆಯ ಉದ್ದೇಶದಿಂದ ಹೊಸ ಆದೇಶವನ್ನು ಹಿಂಪಡೆಯಲಾಗಿದೆ ಎಂದಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications