ದೇಗುಲದ ಪ್ರಸಾದ ತಯಾರಿಸಿದ ಅಡುಗೆಯವನಿಗೆ ಮೊದಲೇ ಅನುಮಾನ ಬಂದಿತ್ತು!
Recommended Video

ಚಾಮರಾಜನಗರ, ಡಿಸೆಂಬರ್ 15: ಚಾಮರಾಜನಗರ ಜಿಲ್ಲೆಯ ಹನೂರಿನ ಸುಳವಾಡಿಯ 'ವಿಷ ಪ್ರಸಾದ' ಸೇವನೆಯ ಪ್ರಕರಣ ಇಡೀ ರಾಜ್ಯವನ್ನೂ ದುಃಖದಲ್ಲಿ ಮುಳುಗಿಸಿದೆ.
ಪ್ರಸಾದ ತಯಾರಿಸಿದ ನಂತರ, ಅದನ್ನು ಭಕ್ತರಿಗೆ ಹಂಚುವ ಮುನ್ನ ಅಡುಗೆಯವರಾದ ಪುಟ್ಟಸ್ವಾಮಿ ಎಂಬುವವರು ಒಮ್ಮೆ ಪ್ರಸಾದವನ್ನು ತಿಂದಿದ್ದರು. ಆಗಲೇ ಅವರಿಗೆ ಪ್ರಸಾದ ಎಂದಿನಂತಿಲ್ಲ ಎಂಬ ಅನುಮಾನ ಬಂದಿತ್ತು. ಪ್ರಸಾದದಲ್ಲಿ ವಿಲಕ್ಷಣ ವಾಸನೆಯೂ ಗೋಚರಿಸಿತ್ತು. ಆದರೆ ಪ್ರಸಾದ ತಿಂದ ಕೆಲ ಹೊತ್ತಾದರೂ ಅವರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳಲಿಲ್ಲ. ಆದ್ದರಿಂದ ಅವರು ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ.
ಆದರೆ ದುರಂತ ಎಂದರೆ, ಪ್ರಸಾದ ಸೇವಿಸಿದ ಪುಟ್ಟಸ್ವಾಮಿ ಅವರ 12 ವರ್ಷ ವಯಸ್ಸಿನ ಮಗಳು ನಳಿನಿ ಮೃತರಾಗಿದ್ದಾಳೆ. ನಳಿನಿ ಸ್ಥಳೀಯ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದಳು.

ಅಡುಗೆಯವನಿಗೆ ಅನುಮಾನ ಬಂದಿತ್ತು!
ಪುಟ್ಟಸ್ವಾಮಿಯವರಿಗೆ ಪ್ರಸಾದ ಎಂದಿನಂತಿಲ್ಲ ಎಂಬುದು ಅರಿವಿಗೆ ಬಂದರೂ, ಅದನ್ನು ತಾವು ಸೇವಿಸಿದ ಮೇಲೂ ಏನೂ ಆಗದಿರುವುದನ್ನು ಕಂಡು ಎಲ್ಲೋ ತಮಗೆ ಭ್ರಮೆ ಇರಬೇಕೆಂದುಕೊಂದು ಸುಮ್ಮನಾಗಿದ್ದರು. ಬಹುಶಃ ಅವರು ಪ್ರಸಾದವನ್ನು ಸ್ವಲ್ಪವೇ ತಿಂದಿದ್ದರಿಂದ ಅವರ ಆರೋಗ್ಯದ ಮೇಲೆ ಅದು ತಕ್ಷಣವೇ ಹೆಚ್ಚು ಪರಿಣಾಮ ಬೀರಿರದಿರಲಿಕ್ಕೆ ಸಾಕು. ಪುಟ್ಟಸ್ವಾಮಿ ಅವರೊಂದಿಗೆ ಇತರರೂ ಕೆಲವರು ಪ್ರಸಾದವನ್ನು ತಿಂದಿದ್ದರು. ಆದರೆ ಯಾರಿಗೂ ಏನೂ ಆಗಿರಲಿಲ್ಲ.

ಅಪ್ಪ ಕೈಯಾರೆ ತಯಾರಿಸಿದ ಪ್ರಸಾದ ತಿಂದು ಮಗಳ ಸಾವು!
ಅಪ್ಪ ತನ್ನ ಕೈಯಾರೆ ತಯಾರಿಸಿದ ಪ್ರಸಾದ ತಿಂದು ಸ್ವತಃ ಮಗಳೇ ಮೃತಳಾಗಿರುವುದು ದುರಂತ ಎನ್ನಿಸಿದೆ. 'ಛೆ ನಾನು ಅನುಮಾನ ಬರುತ್ತಿದ್ದಂತೆಯೇ ಇದನ್ನು ಯಾರಿಗೂ ತಿನ್ನುವುದಕ್ಕೆ ಕೊಡಬಾರದಿತ್ತು' ಎಂದು ತಾವು ಮಾಡದ ತಪ್ಪಿಗೆ ಪರಿತಪಿಸುತ್ತಿದ್ದಾರೆ ಪುಟ್ಟಸ್ವಾಮಿ. ಆದರೆ ಮಗಳು ಮಾತ್ರ ಸಾಯಬಾರದ ವಯಸ್ಸಲ್ಲಿ, ಇಹಲೋಕದ ಪಯಣ ಮುಗಿಸಿದ್ದಾಳೆ!

11 ಜನರ ದಾರುಣ ಸಾವು
ಚಾಮರಾಜನಗರ ಜಿಲ್ಲೆಯ ಕಿಚ್ಚುಗುತ್ತಿ ಮಾರಮ್ಮ ದೇವಾಲಯದ ಗೋಪುರ ನಿರ್ಮಾಣದ ಶಿಲಾನ್ಯಾಸ ಪೂಜೆ ಅಂಗವಾಗಿ ಶುಕ್ರವಾರ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಸುಳವಾಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಾದ ಬಿದರಹಳ್ಳಿ, ಹಳೇ ಮಾರ್ಟಳ್ಳಿ, ತಂಡಮೇಡು ಗ್ರಾಮಗಳ ನೂರಾರು ಜನರು ದೇವಾಲಯಕ್ಕೆ ಬಂದಿದ್ದರು. ಪೂಜೆಯ ನಂತರ ಟೊಮ್ಯಾಟೋ ಬಾತ್ ಅನ್ನು ಪ್ರಸಾದವಾಗಿ ಹಂಚಲಾಗಿತ್ತು. ಕೆಲವರು ಪ್ರಸಾದವನ್ನು ಅಲ್ಲಿಯೇ ಸೇವಿಸಿದರೆ, ಕೆಲವರು ಮನೆಗೆ ಕೊಂಡೊಯ್ದಿದ್ದರು. ಆದರೆ ಪ್ರಸಾದ ಸೇವಿಸಿದ ಕೆಲ ಹೊತ್ತಿನಲ್ಲೇ ಒಬ್ಬರಾದ ನಂತರ ಒಬ್ಬರು ಎಂಬಂತೆ ಹನ್ನೊಂದು ಜನ ಮೃತರಾದರೆ ನೂರಕ್ಕೂ ಹೆಚ್ಚು ಜನ ಜೀವನ್ಮರಣ ಹೋರಾಟದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರ್ಘಟನೆಗೆ ಇಡೀ ದೇಶವೂ ಕಂಬನಿ ಮಿಡಿದಿದೆ.

ಈ ದುರಂತಕ್ಕೆ ಕಾರಣವೇನು?
ದೇವಾಲಯದ ಗೋಪುರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಎರಡು ಪಂಗಡಗಳ ನಡುವೆ ವೈಮನಸ್ಯವಿತ್ತು. ಒಂದು ಬಣದ ಮೇಲಿನ ಕೋಪಕ್ಕೆ ಇನ್ನೊಂದು ಬಣದವರೇ ಭಕ್ತರಿಗೆ ನೀಡುವ ಪ್ರಸಾದಲ್ಲಿ ಕೀಟನಾಶಕ ಬೆರೆಸಿ ಪ್ರತೀಕಾರ ತೀರಿಸಿಕೊಳ್ಳಲು ಯತ್ನಿಸಿದ್ದೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಯುತ್ತಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications