ಸ್ವಾತಂತ್ರ್ಯ ಸಂಭ್ರಮ: ಚಾಮರಾಜನಗರ ಜಿಲ್ಲೆಯ 121 ಕೆರೆಗಳಲ್ಲಿ ಹಾರಾಡಲಿದೆ ರಾಷ್ಟ್ರಧ್ವಜ
ಚಾಮರಾಜನಗರ, ಆಗಸ್ಟ್ 14: ಚಾಮರಾಜನಗರ ಜಿಲ್ಲಾ ಪಂಚಾಯತಿ ವತಿಯಿಂದ ಅಮೃತ ಸರೋವರ ಮಿಷನ್ ಅಭಿಯಾನದಡಿ ಪುನಶ್ಚೇತನ ಹಾಗೂ ಹೊಸದಾಗಿ ನಿರ್ಮಿಸಿರುವ ಚಾಮರಾಜನಗರ ಜಿಲ್ಲೆಯ 121 ಕೆರೆಗಳಲ್ಲಿ ತಿರಂಗ ಹಾರಾಡಿಸಲು ಗ್ರಾಮ ಪಂಚಾಯತಿಗಳು ಸಜ್ಜುಗೊಂಡಿವೆ.
ದೇಶವು ಸ್ವಾತಂತ್ರ್ಯ ಗಳಿಸಿ 75 ವರ್ಷಗಳನ್ನು ಪೂರೈಸಿದ ಅಮೃತ ಮಹೋತ್ಸವದ ಸವಿನೆಪಿಗಾಗಿ ಕೇಂದ್ರ ಗ್ರಾಮೀಣಾಭಿವೃದ್ದಿ ಸಚಿವಾಲಯದ ಸುತ್ತೋಲೆ ಅನುಸಾರ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮಿಷನ್ ಅಮೃತ ಸರೋವರ ಅಭಿಯಾನದಡಿ ಜಿಲ್ಲೆಯಲ್ಲಿ ಪುನಶ್ಚೇತನಗೊಂಡ 121 ಕೆರೆಯಂಗಳದಲ್ಲಿ ತಿರಂಗ ಹಾರಾಡಿಸಲು ಗ್ರಾಪಂಗಳು ಸಜ್ಜುಗೊಂಡಿವೆ.

ಚಾಮರಾಜನಗರ ತಾಲೂಕಿನಲ್ಲಿ 40, ಗುಂಡ್ಲುಪೇಟೆ ತಾಲೂಕಿನಲ್ಲಿ 34, ಕೊಳ್ಳೇಗಾಲ ತಾಲೂಕಿನಲ್ಲಿ 13, ಹನೂರು ತಾಲೂಕಿನಲ್ಲಿ 23, ಯಳಂದೂರು ತಾಲೂಕಿನ 11 ಕೆರೆಗಳ ಅಂಗಳ ಇಲ್ಲವೇ ದಡದಲ್ಲಿ ಧ್ವಜಾರೋಹಣ ನಡೆಸಲು ಗ್ರಾಮ ಪಂಚಾಯಿತಿಗಳು ಎಲ್ಲಾ ಸಿದ್ಧತೆ ಮಾಡಿಕೊಂಡಿವೆ.
ಮೇರಾ ಮಾಟಿ, ಮೇರಾ ದೇಶ್ ಅಭಿಯಾನದ ಅಂಗವಾಗಿ ಭೂ ತಾಯಿಗೆ ನಮನ ಹಾಗೂ ವೀರ ಯೋಧರಿಗೆ ವಂದನೆ ಸಲ್ಲಿಸುವ ಉದ್ದೇಶದಿಂದ ಸರೋವರಗಳ ದಂಡೆಯ ಮೇಲೆ ತಿರಂಗಾ ಧ್ವಜ ಹಾರಾಡಲಿದೆ. ಅಮೃತ ಸರೋವರದ ಸ್ಥಳಗಳಲ್ಲಿ ಧ್ವಜಾರೋಹಣವನ್ನು ಸ್ವಾತಂತ್ರ್ಯ ಹೋರಾಟಗಾರರು/ಅವರ ಕುಟುಂಬಂಸ್ಥರು, ಹುತಾತ್ಮ ಯೋಧರ ಕುಟುಂಬಸ್ಥರು ಅಥವಾ ಪದ್ಮ ಪುರಸ್ಕಾರ ಪಡೆದವರು/ಹಿರಿಯ ನಾಗರಿಕರು ನೆರವೇರಿಸುವಂತೆ ಕೇಂದ್ರದಿಂದ ನಿರ್ದೇಶಿಸಲಾಗಿದೆ. ಜೊತೆಗೆ, ಕನಿಷ್ಟ 75 ಗಿಡಗಳನ್ನು ನೆಟ್ಟು ಪೋಷಿಸುವ ಜವಾಬ್ದಾರಿಯನ್ನು ಗ್ರಾಮ ಪಂಚಾಯತಿ ಹೊರಲಿದೆ.
ಸರೋವರಗಳ ಬಳಿ ಮಕ್ಕಳಿಗೆ ಚಿತ್ರ ಕಲೆ, ರಂಗೋಲಿ, ಭಾಷಣ ಇತ್ಯಾದಿ ಸ್ಪರ್ದಾತ್ಮ ಚಟುವಟಿಕೆ ಮತ್ತು ಜನಪದ ಸಂಪ್ರದಾಯಿಕ ಗ್ರಾಮೀಣ ಆಟಗಳಾದ ಖೋ-ಖೋ, ಲಗೋರಿ ಹಗ್ಗ ಜಗ್ಗಾಟ, ಹಗ್ಗ ಜಿಗಿತ, ಕುಂಟ ಓಟ ಕುರ್ಚಿ ಹಾಗೂ ಸ್ಥಳೀಯ ಆಟೋಟಗಳನ್ನೂ ಆಯೋಜಿಸಲಾಗುತ್ತಿದೆ.
ಪಂಚಾಯಿತಿ ಕಚೇರಿಯಲ್ಲಿ ಹೋಮ-ಹವನ ಮಾಡಿಸಿದ ಅಧ್ಯಕ್ಷೆ: ಉಪಾಧ್ಯಕ್ಷ ಉಳಿದ ಸದಸ್ಯರ ಆಕ್ರೋಶ
ಚಾಮರಾಜನಗರ: ನೂತನವಾಗಿ ಚುನಾಯಿತರಾದ ಹಿನ್ನೆಲೆಯಲ್ಲಿ ಮೌಢ್ಯಕ್ಕೆ ಕಟ್ಟುಬಿದ್ದು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಹೋಮ-ಹವನ, ಭರ್ಜರಿ ಪೂಜೆ ನಡೆಸಿರುವ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರು ಗ್ರಾಪಂನಲ್ಲಿ ನಡೆದಿದೆ.
ಕೆಲ ದಿನಗಳ ಹಿಂದೆ ನೂತನವಾಗಿ ಗ್ರಾಮ ಪಂಚಾಯ್ತಿಗೆ ಅಧ್ಯಕ್ಷರಾಗಿ ಶಿವಿಭಾಯಿ ಹಾಗೂ ಉಪಾಧ್ಯಕ್ಷರಾಗಿ ರಾಚಯ್ಯ ಆಯ್ಕೆಯಾದ ಹಿನ್ನಲೆಯಲ್ಲಿ ಗ್ರಾಪಂ ಕಚೇರಿಯಲ್ಲೇ ಹೋಮ ಹವನ, ಪೂಜಾ-ಕೈಂಕಾರ್ಯ ನೆರವೇರಿಸಿದ್ದು ಪಿಡಿಒ ಕೂಡ ಭಾಗಿಯಾಗಿದ್ದಾರೆ.
ಇನ್ನು, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಉಳಿದ ಸದಸ್ಯರು ಸಿಇಒಗೆ ದೂರು ಕೊಟ್ಟಿದ್ದು ಅಧ್ಯಕ್ಷೆ ಹಾಗೂ ಉಪಾಧ್ಯಕ್ಷ ಅವರನ್ನು ಸದಸ್ಯತ್ವದಿಂದ ವಜಾಗೊಳಿಸಬೇಕು, ಪಿಡಿಒ ವಿರುದ್ಧ ಕ್ರಮ ಕೈಗೊಳ್ಳಬೇಕು ಒತ್ತಾಯಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications