Get Updates
Get notified of breaking news, exclusive insights, and must-see stories!

ಚಾಮರಾಜನಗರ: ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿದ ನಿರ್ದೇಶಕ ಎಸ್.ಎಸ್ ರಾಜಮೌಳಿ

ಚಾಮರಾಜನಗರ, ಸೆಪ್ಟೆಂಬರ್ 16: ತೆಲುಗು ಚಿತ್ರರಂಗದ ಖ್ಯಾತ ಚಲನಚಿತ್ರ ನಿರ್ದೇಶಕ ಎಸ್.ಎಸ್ ರಾಜಮೌಳಿ ಅವರು ಇಂದು ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ಹಿಮವದ್ ಗೋಪಾಲಸ್ವಾಮಿ ಬೆಟ್ಟವಿದ್ದು, ಇಂದು ಬೆಳಿಗ್ಗೆ ನಿರ್ದೇಶಕ ರಾಜಮೌಳಿ ಅವರು ತಮ್ಮ ಪತ್ನಿಯೊಂದಿಗೆ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಗೋಪಾಲಸ್ವಾಮಿ ಬೆಟ್ಟದ ಪ್ರಕೃತಿ ಸೌಂದರ್ಯಕ್ಕೆ ಮನಸೋತ ರಾಜಮೌಳಿ ದಂಪತಿ, ನಂತರ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶಕ್ಕೂ ಭೇಟಿ ನೀಡಿದರು.

Chamarajanagara: Telugu Director SS Rajamouli Has Visited To Gopalaswamy Betta

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಸಫಾರಿಗೆ ಹೋಗಿದ್ದ ಅವರು ಬಂಡೀಪುರ ಅರಣ್ಯ ಪ್ರದೇಶದ ಸಿಬ್ಬಂದಿಯೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು. ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ ಸೌಂದರ್ಯಕ್ಕೆ ತಲೆ ಬಾಗಿದ್ದಾರೆ. ನಂತರ ಸಿಬ್ಬಂದಿ ಜೊತೆ ಗುಂಪು ಫೋಟೋ ತೆಗೆಸಿಕೊಂಡು ವಾಪಸ್ ಹೋಗಿದ್ದಾರೆ.

Chamarajanagara: Telugu Director SS Rajamouli Has Visited To Gopalaswamy Betta

ಈ ಹಿಂದೆ ಕೊರೊನಾ ವೈರಸ್ ನಿಂದ ಬಳಲುತ್ತಿದ್ದ ರಾಜಮೌಳಿ ಕುಟುಂಬ ಸದ್ಯ ಸಂಪೂರ್ಣ ಗುಣಮುಖವಾಗಿದ್ದಾರೆ. ರಾಜಮೌಳಿ ಅವರು ಮೂಲತಃ ಕರ್ನಾಟಕದವರೇ ಆಗಿದ್ದು, ಸದ್ಯ ಆಂಧ್ರಪ್ರದೇಶದಲ್ಲಿ ನೆಲೆಸಿದ್ದಾರೆ. ಮಗಧೀರ, ಈಗ, ಬಾಹುಬಲಿ, ಬಾಹುಬಲಿ-2 ನಂತಹ ಹಿಟ್ ಚಿತ್ರಗಳನ್ನು ನೀಡಿದ್ದಾರೆ.

Chamarajanagara: Telugu Director SS Rajamouli Has Visited To Gopalaswamy Betta

ಸದ್ಯ ಇವರ ನಿರ್ದೇಶನದಲ್ಲಿ 'ಆರ್‍ಆರ್‍ಆರ್' ಸಿನಿಮಾ ತಯಾರಾಗುತ್ತಿದೆ. ಜೂ.ಎನ್‍ಟಿಆರ್ ಮತ್ತು ರಾಮ್ ಚರಣ್ ನಾಯಕತ್ವದಲ್ಲಿ ಮೂಡಿ ಬರಲಿರುವ ಈ ಸಿನಿಮಾದ ಚಿತ್ರೀಕರಣ ಕೊರೊನಾ ಲಾಕ್ ಡೌನ್ ನಿಂದಾಗಿ ನಿಂತಿತ್ತು. ಸದ್ಯದರಲ್ಲಿಯೇ ಚಿತ್ರೀಕರಣ ಪ್ರಾರಂಭವಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+