ಚಾಮರಾಜನಗರ: ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿದ ನಿರ್ದೇಶಕ ಎಸ್.ಎಸ್ ರಾಜಮೌಳಿ
ಚಾಮರಾಜನಗರ, ಸೆಪ್ಟೆಂಬರ್ 16: ತೆಲುಗು ಚಿತ್ರರಂಗದ ಖ್ಯಾತ ಚಲನಚಿತ್ರ ನಿರ್ದೇಶಕ ಎಸ್.ಎಸ್ ರಾಜಮೌಳಿ ಅವರು ಇಂದು ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ಹಿಮವದ್ ಗೋಪಾಲಸ್ವಾಮಿ ಬೆಟ್ಟವಿದ್ದು, ಇಂದು ಬೆಳಿಗ್ಗೆ ನಿರ್ದೇಶಕ ರಾಜಮೌಳಿ ಅವರು ತಮ್ಮ ಪತ್ನಿಯೊಂದಿಗೆ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
ಗೋಪಾಲಸ್ವಾಮಿ ಬೆಟ್ಟದ ಪ್ರಕೃತಿ ಸೌಂದರ್ಯಕ್ಕೆ ಮನಸೋತ ರಾಜಮೌಳಿ ದಂಪತಿ, ನಂತರ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶಕ್ಕೂ ಭೇಟಿ ನೀಡಿದರು.

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಸಫಾರಿಗೆ ಹೋಗಿದ್ದ ಅವರು ಬಂಡೀಪುರ ಅರಣ್ಯ ಪ್ರದೇಶದ ಸಿಬ್ಬಂದಿಯೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು. ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ ಸೌಂದರ್ಯಕ್ಕೆ ತಲೆ ಬಾಗಿದ್ದಾರೆ. ನಂತರ ಸಿಬ್ಬಂದಿ ಜೊತೆ ಗುಂಪು ಫೋಟೋ ತೆಗೆಸಿಕೊಂಡು ವಾಪಸ್ ಹೋಗಿದ್ದಾರೆ.

ಈ ಹಿಂದೆ ಕೊರೊನಾ ವೈರಸ್ ನಿಂದ ಬಳಲುತ್ತಿದ್ದ ರಾಜಮೌಳಿ ಕುಟುಂಬ ಸದ್ಯ ಸಂಪೂರ್ಣ ಗುಣಮುಖವಾಗಿದ್ದಾರೆ. ರಾಜಮೌಳಿ ಅವರು ಮೂಲತಃ ಕರ್ನಾಟಕದವರೇ ಆಗಿದ್ದು, ಸದ್ಯ ಆಂಧ್ರಪ್ರದೇಶದಲ್ಲಿ ನೆಲೆಸಿದ್ದಾರೆ. ಮಗಧೀರ, ಈಗ, ಬಾಹುಬಲಿ, ಬಾಹುಬಲಿ-2 ನಂತಹ ಹಿಟ್ ಚಿತ್ರಗಳನ್ನು ನೀಡಿದ್ದಾರೆ.

ಸದ್ಯ ಇವರ ನಿರ್ದೇಶನದಲ್ಲಿ 'ಆರ್ಆರ್ಆರ್' ಸಿನಿಮಾ ತಯಾರಾಗುತ್ತಿದೆ. ಜೂ.ಎನ್ಟಿಆರ್ ಮತ್ತು ರಾಮ್ ಚರಣ್ ನಾಯಕತ್ವದಲ್ಲಿ ಮೂಡಿ ಬರಲಿರುವ ಈ ಸಿನಿಮಾದ ಚಿತ್ರೀಕರಣ ಕೊರೊನಾ ಲಾಕ್ ಡೌನ್ ನಿಂದಾಗಿ ನಿಂತಿತ್ತು. ಸದ್ಯದರಲ್ಲಿಯೇ ಚಿತ್ರೀಕರಣ ಪ್ರಾರಂಭವಾಗಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications