Mysuru Dasara 2024: ವಜ್ರಮುಷ್ಠಿ ಕಾಳಗಕ್ಕೆ ಚಾಮರಾಜನಗರದ ಜಟ್ಟಿ ರೆಡಿ
ಚಾಮರಾಜನಗರ, ಅಕ್ಟೋಬರ್, 08: ವಿಶ್ವ ವಿಖ್ಯಾತ ಮೈಸೂರು ದಸರಾಗೆ ಈಗಾಗಲೇ ಅದ್ಧೂರಿ ಚಾಲನೆ ಸಿಕ್ಕಿದೆ. ಇನ್ನು ಜಂಬುಸವಾರಿಗೆ ದಿನಗಣನೆ ಆರಂಭ ಆಗಿದ್ದು, ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಮುಷ್ಠಿ ಕಾಳಗಕ್ಕೆ ಚಾಮರಾಜನಗರದ ಜಟ್ಟಿ ತಯಾರಿ ಜೋರಾಗಿದ್ದು, ನಿತ್ಯ ಬೆವರು ಹರಿಸುತ್ತಿದ್ದಾರೆ.
ನಾಡಹಬ್ಬ ದಸರಾದ ವಿಜಯದಶಮಿ ದಿನದಂದು ಮೈಸೂರಿನ ಅಂಬಾ ವಿಲಾಸ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುವ ಮೈನವಿರೇಳಿಸುವ ವಜ್ರಮುಷ್ಟಿ ಕಾಳಗಕ್ಕೆ ಚಾಮರಾಜನಗರ ಜಟ್ಟಿ ಶ್ರೀನಿವಾಸ ಜಟ್ಟಿ ಸಜ್ಜುಗೊಳ್ಳುತ್ತಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಚಾಮರಾಜನಗರದ ದೊಡ್ಡ ಗರಡಿಯಲ್ಲಿ ತರಬೇತುದಾರ ಪುಟ್ಟಣ್ಣ ಜಟ್ಟಿ ಅವರಿಂದ ಶ್ರೀನಿವಾಸ್ ತರಬೇತಿ ಪಡೆಯುತ್ತಿದ್ದಾರೆ. ಈ ಹಿಂದೆ 2 ಬಾರಿ ಮುಷ್ಠಿ ಕಾಳಗದಲ್ಲಿ ಭಾಗವಹಿಸಿದ್ದರು. ದಸರಾ ಮಹೋತ್ಸವದಲ್ಲಿ ವಜ್ರಮುಷ್ಟಿ ಕಾಳಗಕ್ಕೆ ಅತ್ಯಂತ ಮಹತ್ವವಿದೆ. ವಿಜಯದಶಮಿ ದಿನ ನಡೆಯುವ ಜಂಬೂ ಸವಾರಿಗೂ ಮೊದಲು ರಾಜ ಮನೆತನದವರ ಸಮ್ಮುಖದಲ್ಲಿ ಈ ಕಾಳಗ ನಡೆಯುತ್ತದೆ. ಸಂಪ್ರದಾಯದ ಉದ್ದೇಶದಿಂದ ನಡೆಯುವ ಈ ಕಾಳಗ ಕೆಲವೇ ಸೆಕೆಂಡುಗಳಲ್ಲಿ ಮುಗಿಯುತ್ತದೆ. ಆದರೂ, ಈ ಕಾಳಗವನ್ನು ವೀಕ್ಷಿಸಲು ಜನರ ದಂಡೇ ನೆರೆಯುತ್ತದೆ.
ಜಟ್ಟಿ ಜನಾಂಗಕ್ಕೆ ಸೇರಿದ ನಾಲ್ವರು ಪೈಲ್ವಾನರು ವಜ್ರಮುಷ್ಟಿ ಕಾಳಗ ಮಾಡುತ್ತಾರೆ. ಕೈಯಲ್ಲಿ ದಂತದ ನಖವನ್ನು ಧರಿಸಿ ಮಾಡುವ ಈ ಹೊಡೆದಾಟದಲ್ಲಿ ಯಾರಾದರೂ ಒಬ್ಬ ಜಟ್ಟಿಯ ತಲೆಯಲ್ಲಿ ರಕ್ತ ಸುರಿಯಲು ಆರಂಭವಾದ ತಕ್ಷಣ ಕಾಳಗವನ್ನು ಮುಕ್ತಾಯ ಮಾಡುವುದು ರೂಢಿಯಿಂದಲೂ ನಡೆದುಕೊಂಡು ಬಂದಿದೆ.
ಈ ವರ್ಷ ಯಾರನ್ನು ಕಳುಹಿಸುತ್ತೇವೆ ಎಂದು ರಾಜಮನೆತನಕ್ಕೆ ಮೊದಲೇ ತಿಳಿಸುತ್ತೇವೆ. ದಸರಾ ಆರಂಭಕ್ಕೆ ಒಂದು ತಿಂಗಳು ಇರುವಾಗ ಆಯ್ಕೆ ಮಾಡಿದವರಿಗೆ ತರಬೇತಿ ನೀಡಲು ಆರಂಭಿಸುತ್ತೇವೆ. ಕಾಳಗದ ನಡೆಗಳನ್ನು ಕಲಿಸಲಾಗುತ್ತದೆ. ನಿತ್ಯ ಬೆಳಗ್ಗೆ ತರಬೇತಿ ಇರುತ್ತದೆ. ಶನಿವಾರ-ಭಾನುವಾರ ದಿನಪೂರ್ತಿ ತರಬೇತಿ ನಡೆಯಲಿದ್ದು, ಜಟ್ಟಿಗಳಾಗಿರುವುದು ನಮಗೆ ಹೆಮ್ಮೆ ಎಂದು ತರಬೇತುದಾರ ಪುಟ್ಟಣ್ಣ ಜಟ್ಟಿ ಸಂತಸಪಟ್ಟರು.
ವಜ್ರಮುಷ್ಟಿ ಕಾಳಗದಲ್ಲಿ ಭಾಗವಹಿಸುವುದು ಎಂದರೆ ಅದೊಂದು ಗೌರವ. ನಮ್ಮ ಜನಾಂಗಕ್ಕೆ ಮಾತ್ರ ಇದರಲ್ಲಿ ಭಾಗಿಯಾಗಲು ಅವಕಾಶ. ಇದಕ್ಕಾಗಿ ನಮಗೆ ಗೌರವಧನ ಸಿಗುತ್ತದೆ. ಆದರೆ, ದುಡ್ಡಿಗಾಗಿ ನಾವು ಇದರಲ್ಲಿ ಪಾಲ್ಗೊಳ್ಳುತ್ತಿಲ್ಲ. ಅದು ನಮಗೆ ಮುಖ್ಯವೂ ಅಲ್ಲ. ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗುವುದು ಮತ್ತು ರೋಮಾಂಚಕಾರಿಯಾದ ಈ ಸಮರ ಕಲೆಯನ್ನು ಉಳಿಸುವುದಕ್ಕಾಗಿ ಸಂತೋಷದಿಂದಲೇ ಪಾಲ್ಗೊಳ್ಳುತ್ತೇವೆ ಎಂದು ಈ ಬಾರಿ ಕಾಳಗಕ್ಕೆ ಅಣಿಯಾಗುತ್ತಿರುವ ಶ್ರೀನಿವಾಸ ಜಟ್ಟಿ ಮಾಹಿತಿ ಹಂಚಿಕೊಂಡರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications