ಚಾಮರಾಜನಗರದಲ್ಲಿ ನವಜೋಡಿಗಳ ಜಾತ್ರೆ: ಈ ರಥೋತ್ಸವದ ವಿಶೇಷತೆ ಏನು ಗೊತ್ತಾ?
ಚಾಮರಾಜನಗರ, ಜುಲೈ 03: ರಾಜ್ಯದಲ್ಲೇ ಆಷಾಢ ಮಾಸದಲ್ಲಿ ನಡೆಯುವ ಏಕೈಕ ರಥೋತ್ಸವವಾದ ಚಾಮರಾಜನಗರದ ಚಾಮರಾಜೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವವು ಇಂದು(ಜುಲೈ 03) ವಿಜೃಂಭಣೆಯಿಂದ ನಡೆಯಿತು.
ಆಷಾಢ ಮಾಸದಲ್ಲಿ ನಡೆಯುವ ರಾಜ್ಯದ ಏಕೈಕ ರಥೋತ್ಸವವು ಇದಾಗಿದ್ದು ನವಜೋಡಿಗಳ ಜಾತ್ರೆ ಎಂದೇ ಖ್ಯಾತಿ ಪಡೆದಿದೆ. ಆಷಾಢ ಮಾಸದಲ್ಲಿ ನವದಂಪತಿಗಳು ದೂರ ಇರಲಿದ್ದು, ಪರಸ್ಪರ ಭೇಟಿಯಾಗಲು ಅಪೂರ್ವ ಸದಾವಕಾಶವನ್ನು ಈ ಜಾತ್ರೆ ಕಲ್ಪಿಸುವುದರಿಂದ ಜಾತ್ರೆಯಲ್ಲಿ ನವದಂಪತಿಗಳ ಕಲರವ ಹೆಚ್ಚಿರುವುದು ಈ ರಥೋತ್ಸವದ ವಿಶೇಷ.

ಚಾಮರಾಜೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವವು ಇಂದು ಪೂರ್ವಾಷಾಢ ನಕ್ಷತ್ರದ ಮಧ್ಯಾಹ್ನ 12 ರಿಂದ 1 ರವರೆಗೆ ಸಲ್ಲುವ ಶುಭ ಕನ್ಯಾ ಲಗ್ನದಲ್ಲಿ ಶ್ರೀ ಚಾಮರಾಜೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಸಾವಿರಾರು ಭಕ್ತರು ಹರ್ಷೋದ್ಗಾರದ ಹಾಕುತ್ತಾ ರಥ ಬೀದಿಯಲ್ಲಿ ತೇರನ್ನು ಎಳೆದರು.
ಹಣ್ಣು ಧವನ ಎಸೆದ ನವ ದಂಪತಿಗಳು
ಮದುವೆಯಾದ ಪ್ರಥಮ ಆಷಾಢ ಮಾಸದಲ್ಲಿ ನವದಂಪತಿಗಳು ಪರಸ್ಪರ ದೂರ ಇರುವುದು ವಾಡಿಕೆ. ಇದರಿಂದ ಅವರು ಪರಸ್ಪರ ಮುಖಾಮುಖಿ ಭೇಟಿಯಾಗಲು ಆಗುವುದಿಲ್ಲ. ಆದರೆ ಆಷಾಢ ಮಾಸದಲ್ಲಿ ಚಾಮರಾಜನಗರದಲ್ಲಿ ನಡೆಯುವ ಈ ರಥೋತ್ಸವಕ್ಕೆ ನವದಂಪತಿಗಳು ತಮ್ಮ ತಮ್ಮ ಊರಿನಿಂದ ಬೇರೆ ಬೇರೆಯಾಗಿ ಬಂದು ಇಲ್ಲಿನ ನೆಂಟರಿಷ್ಟರ ಮನೆಯಲ್ಲಿ ಅಥವಾ ಪ್ರತ್ಯೇಕವಾಗಿ ಭೇಟಿಯಾಗಿ ರಥೋತ್ಸವದಲ್ಲಿ ಪಾಲ್ಗೊಂಡು ರಥಕ್ಕೆ ಹಣ್ಣು-ಧವನ ಎಸೆಯುತ್ತಾ, ಕೈ ಕೈ ಹಿಡಿದುಕೊಂಡು ಸಂಭ್ರಮದಿಂದ ಓಡಾಡಿದರು.

ನವದಂಪತಿಗಳು ಬಂದು ರಥಕ್ಕೆ ಹಣ್ಣು-ಧವನ ಎಸೆದರೆ ಸಂತಾನ ಭಾಗ್ಯ ಹಾಗೂ ಸುಖ ಸಂಸಾರ ಪ್ರಾಪ್ತಿಯಾಗಲಿದೆ ಎಂಬ ನಂಬಿಕೆ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ.
ರಾಜ್ಯದ ವಿವಿಧ ಮೂಲೆಗಳಿಂದ, ತಮಿಳುನಾಡಿನ ಗಡಿ ಗ್ರಾಮಗಳಿಂದಲೂ ನೂತನ ದಂಪತಿಗಳು, ಚಾಮರಾಜೇಶ್ವರನ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ನೂತನ ದಂಪತಿಗಳಿಗೆ ಎಂಥಲೇ ವಿವಿಧ ಸಂಘಟನೆಗಳು ಅನ್ನ ಸಂತರ್ಪಣೆಯನ್ನು ಆಯೋಜಿಸಿದ್ದವು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications