ವಿಷಯುಕ್ತ ಪ್ರಸಾದ ಸೇವಿಸಿ ಚಿಕಿತ್ಸೆ ಪಡೆಯುತ್ತಿರುವವನ್ನು ಕಟ್ಟಿಹಾಕಿದ್ದಾರೆ ವೈದ್ಯರು! ಏಕೆ?
ಚಾಮರಾಜನಗರ, ಡಿಸೆಂಬರ್ 15: ಜಿಲ್ಲೆಯ ಕಿಚ್ಚುಗತ್ತಿ ಮಾರಮ್ಮ ದೇವಾಲಯದ ಪ್ರಸಾದ ಸೇವಿಸಿ ಈಗಾಗಲೇ 11 ಮಂದಿ ಸಾವನ್ನಪ್ಪಿದ್ದರೆ 104 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಾಮರಾಜನಗರ, ಮಂಡ್ಯ ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಚಿಕಿತ್ಸೆಗೆ ಬಂದ ರೋಗಿಗಳನ್ನು ಆಸ್ಪತ್ರೆಯ ಬೆಡ್ಗೆ ಕಟ್ಟಿ ಹಾಕಿ ಚಿಕಿತ್ಸೆ ನೀಡುತ್ತಿರುವ ದೃಶ್ಯ ಆಸ್ಪತ್ರೆಗಳಲ್ಲಿ ಕಾಣುತ್ತಿದೆ.
ಟಿವಿ ಮಾಧ್ಯಮಗಳಲ್ಲಿ ಈ ದೃಶ್ಯಗಳನ್ನು ನೋಡುವವರಿಗೆ ವಿಚಿತ್ರವಾಗಿ ಕಾಣುತ್ತದೆಯಾದರೂ ವೈದ್ಯರ ಈ ಕ್ರಮ ಅತ್ಯಂತ ಅವಶ್ಯಕ ಎಂದು ಚಿಕಿತ್ಸೆಯ ಬಗ್ಗೆ ತಿಳಿದಿರುವವರಿಗೆ ಗೊತ್ತಾಗುತ್ತದೆ.
ಹೌದು, ಪ್ರಸಾದ ತಿಂದು ಚಿಕಿತ್ಸೆ ಪಡೆಯುತ್ತಿರುವವರನ್ನು ಆಸ್ಪತ್ರೆಯಲ್ಲಿ ಮಂಚಕ್ಕೆ ಕಟ್ಟಿಹಾಕಲಾಗಿದೆ. ಅವರು ಬಿಡಿಸಿಕೊಳ್ಳಲು ಒದ್ದಾಡುತ್ತಿರುವ ದೃಶ್ಯಗಳು ಟಿವಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ. ಆದರೆ ಇದಕ್ಕೆ ಕಾರಣವೇನು. ಇಲ್ಲಿದೆ ಮಾಹಿತಿ.

ವಿಷ ಸೇವಿಸಿದವರಿಗೆ, ಹಾವು ಕಚ್ಚಿದವರಿಗೆ ಅಟ್ರೋಪಿನ್
ವಿಷ ತೆಗೆದುಕೊಂಡ ವ್ಯಕ್ತಿಗಳಿಗೆ ಅಥವಾ ಹಾವು ಕಚ್ಚಿದ ವ್ಯಕ್ತಿಗಳಿಗೆ ಅಟ್ರೋಪಿನ್ ನೀಡಲಾಗುತ್ತದೆ. ಇದು ನಾಡಿ ಬಡಿತ ಹೆಚ್ಚು ಮಾಡುತ್ತದೆ. ನಾಡಿ ಬಡಿತ ಹೆಚ್ಚಾದಾಗ ದೇಹದ ಮೇಲೆ ವಿಷದ ಪ್ರಭಾವ ಕಡಿಮೆ ಮಾಡುತ್ತದೆ ಎನ್ನುತ್ತಾರೆ ವೈದ್ಯರು.

ಅಟ್ರೋಪಿನ್ ನಿಂದಾಗಿ ಹಿಂಸಾತ್ಮಕವಾಗಿ ವರ್ತಿಸುತ್ತಾರೆ ರೋಗಿಗಳು
ಆದರೆ ಅಟ್ರೋಪಿನ್ ನೀಡಿದಾಗ ವ್ಯಕ್ತಿ ಬಹಳ ಹಿಂಸಾತ್ಮಕ ರೂಪ ತಾಳುತ್ತಾನೆ. ಕೂಗಾಡುತ್ತಾನೆ, ಕಿರುಚಾಡುತ್ತಾನೆ, ಚಾಕು ತೆಗೆದುಕೊಂಡು ಚುಚ್ಚಿದ ಉದಾಹರಣೆಯೂ ಇದೆ. ಹಾಗಾಗಿ ಅಟ್ರೋಪಿನ್ ನೀಡುವ ಮುನ್ನಾ ರೋಗಿಗಳನ್ನು ಆಸ್ಪತ್ರೆಯ ಬೆಡ್ಗೆ ಕಟ್ಟಿಹಾಕಿ ಇಂಜೆಕ್ಷನ್ ನೀಡಲಾಗುತ್ತದೆ.

48 ಗಂಟೆಗಳ ಕಾಲ ಹಿಂಸಾತ್ಮಕ ರೂಪ ತಾಳುತ್ತಾನೆ ರೋಗಿ
ಈ ಅಟ್ರೋಪಿನ್ ಅನ್ನು ಜೀವ ರಕ್ಷಕ ಔಷಧವಾಗಿ ವೈದ್ಯರು ಬಳಸುತ್ತಾರೆ. ಸಾಮಾನ್ಯವಾಗಿ ದೊರೆಯುವ ವಿಷಗಳ ಚಿಕಿತ್ಸೆಗೆ ಇದೇ ಅಟ್ರೋಪಿನ್ ಅನ್ನು ಬಳಸಲಾಗುತ್ತದೆ. ಇದರ ಪ್ರಭಾವ ಸುಮಾರು 48 ಗಂಟೆಗಳ ಕಾಲ ಇರುತ್ತದೆ. 48 ಗಂಟೆಗಳ ಕಾಲ ರೋಗಿಯು ತಾನು-ತಾನಾಗಿರುವುದಿಲ್ಲ.

ನರಕವಾಗಿರುವ ಚಾಮರಾಜನಗರ ಆಸ್ಪತ್ರೆ
ಚಾಮರಾಜನಗರ ಆಸ್ಪತ್ರೆಯಲ್ಲಿ ಒಟ್ಟಿಗೆ 60-70 ಜನರಿಗೆ ಈ ಅಟ್ರೋಪಿನ್ ನೀಡಲಾಗಿದೆ. ಎಲ್ಲರೂ ಹಿಂಸಾತ್ಮಕವಾಗಿ ವರ್ತಿಸುತ್ತಿದ್ದಾರೆ, ಕೂಗಾಡುತ್ತಿದ್ದಾರೆ, ಕಿರುಚಾಡುತ್ತಿದ್ದಾರೆ ಅಲ್ಲಿನ ಪರಿಸ್ಥಿತಿಯನ್ನು ಒಮ್ಮೆ ಊಹಿಸಿಕೊಳ್ಳಿ ಸತ್ತವರ ಆಕ್ರಂದನ ಒಂದೆಡೆ ಆದರೆ ರೋಗಿಗಳ ಆಕ್ರಂದನ ಆಸ್ಪತ್ರೆ ಸಿಬ್ಬಂದಿಗಳ ಪರಿಸ್ಥಿತಿ ದೇವರಿಗೆ ಪ್ರೀತಿ ಆಗಿರುತ್ತದೆ ಅಷ್ಟೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications