ಮಲೆ ಮಹದೇಶ್ವರ ಬೆಟ್ಟಕ್ಕೆ ತಿರುಪತಿ ಮಾದರಿಯಲ್ಲೇ ಮೆಟ್ಟಿಲು: ಸಿಎಂ ಭರವಸೆ
Recommended Video

ಬೆಂಗಳೂರು, ಡಿಸೆಂಬರ್ 1: ತಿರುಪತಿ ಮಾದರಿಯಲ್ಲೇ ಮಲೆ ಮಹದೇಶ್ವರ ಬೆಟ್ಟಕ್ಕೂ ಮೆಟ್ಟಿಲುಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಜನರ ಸಮಸ್ಯೆಗಳಲ್ಲು ಆಲಿಸಿ ಪರಿಹಾರ ಕಾರ್ಯ ಮಾಡುತ್ತೇನೆ, ಪ್ರಸಿದ್ಧ ರ್ತೀರ್ಥಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಮಗ್ರ ಅಭಿವೃದ್ಧಿಗೆ ನೀಲ ನಕ್ಷೆ ತಯಾರಿಸಿ ಸರ್ಕಾರಕ್ಕೆ 15 ದಿನಗಳೊಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಮಹದೇಶ್ವರ ಬೆಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಅಭಿವೃದ್ಧಿ ಕಾರ್ಯಗಳಿಗೆ ಅರಣ್ಯ ಇಲಾಖೆಯ ಕಾನೂನುಗಳು ಅಡ್ಡಿಯಾಗಿವೆ. ಇದನ್ನು ನಿವಾರಿಸಿ ಸಮಸ್ಯೆ ಬಗೆ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಲೆ ಮಹದೇಶ್ವರ ಬೆಟ್ಟ ಮುಜರಾಯಿ ಇಲಾಖೆಗೆ ಅತಿ ಹೆಚ್ಚು ಆದಾಯ ತಂದುಕೊಡುವ 2 ನೇ ದೇವಾಲಯವಾಗಿದ್ದು, ಭಕ್ತಾದಿಗಳೇ ಅತಿ ಹೆಚ್ಚಿನ ಹಣವನ್ನು ದೇವಾಲಯಕ್ಕೆ ಕಾಣಿಕೆಯಾಗಿ ನೀಡುತ್ತಿದ್ದಾರೆ. ಹೀಗಾಗಿ ತಿರುಪತಿ ಮಾದರಿಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಬರಲು 16 ಕಿ.ಮೀ ದೂರದಿಂದ ಮೆಟ್ಟಿಲುಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.












Click it and Unblock the Notifications