ನವದೆಹಲಿಯಲ್ಲಿ ಸಿದ್ದರಾಮಯ್ಯ ಮಾಂಸಹಾರ ಸೇವನೆ ಮಾಡಿಲ್ಲ ಮಾರಾಯ.. ಸುಮ್ನೆ ಸುಳ್ ಹೇಳ್ತಾರೆ: ಹೀಗೇಳಿದ್ದು ಯಾರು?
ಚಾಮರಾಜನಗರ, ಫೆಬ್ರವರಿ, 08: ನವದೆಹಲಿಯಲ್ಲಿ ಸಿದ್ದರಾಮಯ್ಯ ಮಾಂಸಹಾರ ಸೇವನೆ ಮಾಡಿಲ್ಲ ಎಂದು ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ಚಾಮರಾಜನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿ, ಬಿಜೆಪಿಯವರು ಸುಮ್ಮನೆ ಸುಳ್ಳು ಹಬ್ಬಿಸುತ್ತಿದ್ದಾರೆ, ಸಿದ್ದರಾಮಯ್ಯ, ಸಚಿವ ವೆಂಕಟೇಶ್ ಅವರೆಲ್ಲಾ ಊಟ ಮಾಡದೇ ಹಾಗೆ ಹೊರಟುಬಿಟ್ಟರು. ನಾನು, ಮಹಾದೇವಪ್ಪ ಊಟ ಮಾಡಿದೆವು. ಒಂದು ನಿಮಿಷ ಕುಳಿತುಕೊಳ್ಳಿ ಎಂದು ಕೂರಿಸಿ ಎಲ್ಲರ ಒಟ್ಟಿಗೆ ಫೋಟೋ ತೆಗೆಯಲಾಗಿದೆ ಅಷ್ಟೇ, ಅವರು ಊಟ ಮಾಡಲಿಲ್ಲ ಎಂದು ಸ್ಪಷ್ಟಪಡಿಸಿದರು.

ಲೋಕಸಭಾ ಚುನಾವಣೆಗೆ ಪ್ರಬಲ ಅಭ್ಯರ್ಥಿ: ಮುಂಬರುವ ಲೋಕಸಭಾ ಚುನಾವಣೆಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಕಾಂಗ್ರೆಸ್ ಪರ ಒಲವಿದ್ದರೂ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ದಲಿತ ಮತಗಳನ್ನು ಸೆಳೆಯುವ ನಾಯಕ ಅಭ್ಯರ್ಥಿ ಆಗಲಿದ್ದಾರೆ. ಈ ಬಗ್ಗೆ ವರಿಷ್ಠರು ಸಭೆಗಳನ್ನು ನಡೆಸಿದ್ದಾರೆ ಎಂದರು.
ಕರ್ನಾಟಕದಲ್ಲಿ ನರೇಂದ್ರ ಮೋದಿ ಅಲೆ ಇಲ್ಲ, ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ ಅಂಥಾ ಅವರಿಗೆ ಮತ ಹಾಕುತ್ತಾರೆ.? ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ಏನು ಮಾಡಲಿಲ್ಲ. ಕೇಂದ್ರ ಸರ್ಕಾರ ನಮ್ಮ ಪಾಲಿನ ಹಣವನ್ನು ಕೊಡುತ್ತಿಲ್ಲ. ಹೀಗಾದಾಗ ಕರ್ನಾಟಕದ ಜನ ಮತ ಯಾಕೆ ಹಾಕುತ್ತಾರೆ ಎಂದರು.
ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡಿ ಎಂದು ಕೇಳಿದಾಗ ಅಕ್ಕಿ ಇಲ್ಲ ಎಂದರು. ಈಗ 29 ರೂಪಾಯಿಗೆ ಅಕ್ಕಿ ಕೊಡುತ್ತೇವೆ ಎನ್ನುತ್ತಿದ್ದಾರೆ. ಈ ಮೂಲಕ ವಾಮಮಾರ್ಗದ ರಾಜಕಾರಣ ಮಾಡುತ್ತಿದ್ದಾರೆ. ಸಂಸತ್ತಿನಲ್ಲಿ ಕಾಂಗ್ರೆಸ್ ಕುರಿತು ಹಾಗೆ-ಹೀಗೆ ಎಂದು ಮಾತನಾಡುತ್ತಾರೆ. ಅದನ್ನು ಹೇಳುವುದಕ್ಕಾ ಪ್ರಧಾನಿ ಇರುವುದು? ಯಾರು ಏನೆಂದು ಜನರು ತೀರ್ಮಾನ ಮಾಡುತ್ತಾರೆ ಎಂದು ಪ್ರಧಾನಿ ಮೋದಿ ಭಾಷಣದ ವಿರುದ್ಧ ವಾಗ್ದಾಳಿ ನಡೆಸಿದರು.
ಅನುದಾನ ಕೊರತೆ: ಅನುದಾನ ಕೊರತೆ ಎಂದು ಚಾಮರಾಜನಗರ ಜಿಲ್ಲೆಯ ಯಳಂದೂರು ತಹಶಿಲ್ದಾರ್ ಅಳಲು ತೋಡಿಕೊಂಡ ಘಟನೆ ಇಂದು ನಡೆದಿದೆ.
ಯಳಂದೂರಿನ ತಹಶಿಲ್ದಾರ್ ಕಚೇರಿಯಲ್ಲಿ ಇಂದು (ಫೆಬ್ರವರಿ 08) ಸವಿತಾ ಮಹರ್ಷಿ ಜಯಂತಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಸವಿತಾ ಸಮುದಾಯದ ಮುಖಂಡರು ಮಾತನಾಡಿ, ಸವಿತಾ ಮಹರ್ಷಿ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಬೇಕು. ಕಾಟಾಚಾರದ ಜಯಂತಿ ಆಚರಣೆ ಮಾಡುವುದು ಸರಿಯಲ್ಲ. ಮಹನೀಯರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಬೇಕು ಎಂದರು.
ತಹಶಿಲ್ದಾರ್ ಜಯಪ್ರಕಾಶ್ ಮಾತನಾಡಿ, ಸರ್ಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ. ನಮ್ಮ ಸಂಬಳದ ಕಥೆ ಮುಂದೆ ಏನಾಗತ್ತೋ ಗೊತ್ತಿಲ್ಲ. ಸರ್ಕಾರವನ್ನು ದೂಷಿಸುವುದು ಸರಿಯಲ್ಲ. ಸರಳವಾಗಿ ಆಚರಿಸಿ ಮಹನೀಯರಿಗೆ ಗೌರವಿಸೋಣ ಎಂದಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications