ಚಾಮರಾಜನಗರ: ಸಿದ್ದರಾಮಯ್ಯರಿಂದ ಜೆಎಸ್ಎಸ್ ಆಸ್ಪತ್ರೆ ಲೋಕಾರ್ಪಣೆ
ಚಾಮರಾಜನಗರದಲ್ಲಿ ಇಪ್ಪತ್ತೈದು ಕೋಟಿ ರೂಪಾಯಿ ವೆಚ್ಚದಲ್ಲಿ ಜೆಎಸ್ಎಸ್ ಸಂಸ್ಥೆ ನಿರ್ಮಿಸಿದ 100 ಹಾಸಿಗೆಗಳ ನೂತನ ಆಸ್ಪತ್ರೆಯನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಜನತೆಗೆ ಸಮರ್ಪಿಸಿದ್ದಾರೆ.
ಚಾಮರಾಜನಗರ, ಮೇ 14: ಚಾಮರಾಜನಗರದಲ್ಲಿ ಇಪ್ಪತ್ತೈದು ಕೋಟಿ ರೂಪಾಯಿ ವೆಚ್ಚದಲ್ಲಿ ಜೆಎಸ್ಎಸ್ ಸಂಸ್ಥೆ ನಿರ್ಮಿಸಿದ 100 ಹಾಸಿಗೆಗಳ ನೂತನ ಆಸ್ಪತ್ರೆಯನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಜನತೆಗೆ ಸಮರ್ಪಿಸಿದ್ದಾರೆ.
ಇದೇ ವೇಳೆ ಅವರು ಜೆಎಸ್ಎಸ್ ಮಹಿಳಾ ಕಾಲೇಜು ಸುವರ್ಣ ಮಹೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನೂ ನೆರವೇರಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ನಡೆಸಿರುವ ಜೆಎಸ್ಎಸ್ ಆಸ್ಪತ್ರೆ ಆರೋಗ್ಯ ಕ್ಷೇತ್ರದಲ್ಲಿ ಗ್ರಾಮೀಣ ಜನರಿಗೆ ಹೆಚ್ಚಿನ ಸೇವೆ ಒದಗಿಸಬೇಕೆಂಬ ಸದಾಶಯದಿಂದ ಈ ಆಸ್ಪತ್ರೆಯನ್ನು ಸ್ಥಾಪಿಸಿದೆ.
ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ 100 ಹಾಸಿಗೆಗಳ ಈ ನೂತನ ಆಸ್ಪತ್ರೆಯಲ್ಲಿ ಕಳೆದ ವರ್ಷವಷ್ಟೇ ಹೊರ ರೋಗಿಗಳಿಗೆ ಚಿಕಿತ್ಸೆ ಆರಂಭಿಸಲಾಗಿತ್ತು. ಇದೀಗ ಜೆಎಸ್ಎಸ್ ಆಸ್ಪತ್ರೆಯಲ್ಲಿ ನುರಿತ ವೈದ್ಯರು ಕಾರ್ಯ ನಿರ್ವಹಿಸಲಿದ್ದು 18 ಸ್ಪೆಷಾಲಿಟಿ ಹಾಗೂ 5 ಸೂಪರ್ ಸ್ಪೆಷಾಲಿಟಿ ವಿಭಾಗಗಳು ಕಾರ್ಯ ನಿರ್ವಹಣೆ ಮಾಡಲಿವೆ.
ಅತ್ಯಾಧುನಿಕ ಪ್ರಯೋಗಾಲಯಗಳು, ಸಿಟಿ ಸ್ಕ್ಯಾನ್, ಎಕ್ಸ್ ರೇ, ಅಲ್ಟ್ರಾ ಸೌಂಡ್, ಎರಡು ಶಸ್ತ್ರ ಚಿಕಿತ್ಸಾ ಕೊಠಡಿಗಳು, ಹೆರಿಗೆ ಶಸ್ತ್ರ ಚಿಕಿತ್ಸಾ ಕೊಠಡಿಗಳು, ತೀವ್ರಾ ನಿಗಾ ಘಟಕಗಳನ್ನು ಈ ಆಸ್ಪತ್ರೆ ಹೊಂದಿದೆ.
ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಲೋಕೊಪಯೋಗಿ ಸಚಿವ ಮಹದೇವಪ್ಪ, ಉಸ್ತುವಾರಿ ಸಚಿವ ಯುಟಿ ಖಾದರ್, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಸಂಸದ ಧ್ರುವನಾರಾಯಣ್, ಶಾಸಕ ಪುಟ್ಟರಂಗಶೆಟ್ಟಿ, ಮಾಜಿ ಶಾಸಕ ವಾಟಾಳ್ ನಾಗರಾಜ್ ಸೇರಿದಂತೆ ಇನ್ನಿತರು ಹಾಜರಿದ್ದರು
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications