20 ನಿಮಿಷ ಜಪ ಮಾಡಿದ ಸಿದ್ದರಾಮಯ್ಯ, ಏನಿದರ ಹಿಂದಿನ ರಹಸ್ಯ?
Recommended Video

ಚಾಮರಾಜನಗರ, ಜನವರಿ 11: ಅದ್ಯಾಕೋ ಗೊತ್ತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇತ್ತೀಚೆಗೆ ಇದ್ದಕ್ಕಿದ್ದಂತಯೇ ದೇವರ ಮೇಲೆ ಪ್ರೀತಿ ಹೆಚ್ಚಾಗಿದೆ.
ಇದಕ್ಕೆ ಪೂರಕವೆಂಬಂತೆ ಇತ್ತೀಚೆಗೆ ನವಕರ್ನಾಟಕ ನಿರ್ಮಾಣ ಯಾತ್ರೆ ಸಂದರ್ಭದಲ್ಲಿ ಉಡುಪಿಯ ಕಟಪಾಡಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು, ಇದೀಗ ಇಂದು (ಜನವರಿ 11) ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ದೇವಾಲಯಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮತ್ತೊಂದೆಡೆ ಅಸ್ತಿಕರಂತೆ ದೇಗುಲದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ವಿಶೇಷ ಅಂದ್ರೆ ಸಿದ್ದರಾಮಯ್ಯ ಅವರು ಇಂದು ಪೂಜೆ ಸಂದರ್ಭದಲ್ಲಿ ಮಲೆ ಮಹದೇಶ್ವರನ ಮುಂದೆ ಸುಮಾರು ಇಪ್ಪತ್ತು ನಿಮಿಷಗಳ ಕಾಲ ಪ್ರಾರ್ಥನೆ ಸಲ್ಲಿಸಿ ಅಚ್ಚರಿ ಮೂಡಿಸಿದರು.
ಸಮಾಜವಾದದ ಹಿನ್ನಲೆಯಿಂದ ಬಂದಿರುವ ಸಿದ್ದರಾಮಯ್ಯ ಅವರು ಪದೇ-ಪದೇ ಚಾಮರಾಜನಗರಕ್ಕೆ ಭೇಟಿ ನೀಡುವ ಮೂಲಕ ಮೂಢನಂಬಿಕೆಯನ್ನು ಅಳಿಸಿ ಹಾಕಿದರೆ.

ಚಾಮರಾಜಪೇಟೆಯಲ್ಲಿರುವ ಶ್ರೀ ಮಲೆ ಮಹದೇಶ್ವರ
ಕೇವಲ ಚಾಮರಾಜನಗರದ ಮಲೆ ಮಹದೇಶ್ವರನಿಗೆ ಮಾತ್ರವಲ್ಲದೆ ಹಾಗಾಗ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಾ ಬಂದಿದ್ದಾರೆ.

ಉಡುಪಿಯ ಕಟಪಾಡಿ ವಿಶ್ವನಾಥ ದೇವಾಲಯಕ್ಕೆ ಭೇಟಿ
ಮುಖ್ಯಮಂತ್ರಿಯಾದ ಬಳಿಕ ಅದೇಷ್ಟೋ ಬಾರಿ ಉಡುಪಿ ಜಿಲ್ಲೆಗೆ ಹೋಗಿದ್ದರು. ಒಂದು ಬಾರಿಯಾದರೂ ಇದುವರೆಗೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿಲ್ಲ. ಆದರೆ, ಇತ್ತೀಚೆಗೆ ನವಕರ್ನಾಟಕ ನಿರ್ಮಾಣ ಯಾತ್ರೆ ಸಂದರ್ಭದಲ್ಲಿ ಉಡುಪಿಯ ಕಟಪಾಡಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು,

ಮಲೆ ಮಹದೇಶ್ವರನ ಸನ್ನಿಧಿಯಲ್ಲಿ 20 ನಿಮಿಷ ಜಪ
ಸಿಎಂ ಸಿದ್ದರಾಮಯ್ಯ ಅವರು ದೇವಲಾಯಗಳಿಗೆ ಭೇಟಿ ನೀಡಿದ ವೇಳೆ ಹೆಚ್ಚಾಗಿ ಪ್ರಾರ್ಥನೆ ಸಲ್ಲಿಸಿರುವುದು ಈವರೆಗೆ ವರದಿಯಾಗಿಲ್ಲ. ಆದರೆ, ಗುರುವಾರ ಚಾಮರಾಜನಗರದ ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ಸುಮಾರು ಇಪ್ಪತ್ತು ನಿಮಿಷಗಳ ಕಾಲ ಪಾರ್ಥನೆ ಮಾಡಿ ಗಮನಸೆಳೆದರು.

ಚುನಾವಣೆ ಗೆಲುವಿಗಾಗಿ ದೇವರ ಮೊರೆ ಹೋದ್ರಾ?
ಇತ್ತೀಚೆಗೆ ಸಿದ್ದರಾಮಯ್ಯ ಅವರು ಹೆಚ್ಚಾಗಿ ದೇವರ ಮೊರೆ ಹೋಗುತ್ತಿರುವುದನ್ನು ಗಮನಿಸಿದರೆ ಚುನಾವಣೆ ಗೆಲುವಿಗಾಗಿ ಅವರು ದೇವರಿಗೆ ವಿಶೇಷ ಪೂಜೆ-ಪುನಸ್ಕಾರಗಳನ್ನು ಸಲ್ಲಿಸುತ್ತಿದ್ದಾರೆಯೇ? ಎಂಬ ಪ್ರಶ್ನೆ ಉದ್ಭವಿಸಿದೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications