ಚಾಮರಾಜ ನಗರ: ಅಕ್ಟೋಬರ್ ನಲ್ಲಿ ತೆಂಗಿನಕಾಯಿ ಸಂಸ್ಕರಣಾ ಘಟಕಕ್ಕೆ ಚಾಲನೆ
ಚಾಮರಾಜನಗರ, ಸೆಪ್ಟೆಂಬರ್ 19 : ತಾಲೂಕಿನ ಕಾಳನಹುಂಡಿ ಸಮೀಪದ ಮುಣಚನಹಳ್ಳಿಯಲ್ಲಿ ತೆಂಗು ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರ ಸಂಘದಿಂದ ಸರ್ಕಾರದ ಅನುದಾನದಡಿಯಲ್ಲಿ ತೆಂಗಿನಕಾಯಿ ಪೌಡರ್ ತಯಾರು ಮಾಡುವ ಘಟಕ ಆರಂಭವಾಗಿದ್ದು ಮುಂದಿನ ತಿಂಗಳು(ಅಕ್ಟೋಬರ್) ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವ ಸಾಧ್ಯತೆಯಿದೆ.
ವಿಶಾಲವಾದ ಮೈದಾನದಲ್ಲಿ ರೈತ ಸಂಘದ ಮುಖಂಡರ ಶ್ರಮದಿಂದ ಜಿಲ್ಲೆಯಲ್ಲಿಯೇ ಪ್ರಥಮವಾಗಿ ಆರಂಭವಾದ ತೆಂಗಿನ ಕಾಯಿ ಪೌಡರ್ ನಿರ್ಮಾಣ ಘಟಕ ಇದಾಗಿದೆ. ಇದರಿಂದ ಜಿಲ್ಲೆಯ ತೆಂಗು ಬೆಳೆಗರರಿಗೆ ಉತ್ತಮ ಬೆಲೆ ದೊರೆಯುವ ಮತ್ತು ಒಂದಷ್ಟು ಮಂದಿಗೆ ಉದ್ಯೋಗ ದೊರಕುವ ನಿರೀಕ್ಷೆಯೂ ಇದೆ.

ಈ ಕುರಿತು ಮಾಹಿತಿ ನೀಡಿರುವ ಸಹಕಾರ ಸಂಘದ ಅಧ್ಯಕ್ಷ ಮಹೇಶ್ ಪ್ರಭು ಅವರು, ಪ್ರತಿ ದಿನ 50 ಸಾವಿರ ಕಾಯಿಯನ್ನು ಪೌಡರ್ ಮಾಡುವ ಘಟಕ ಇದಾಗಿದೆ. ಸರ್ಕಾರದ ಅನುದಾನ ಮತ್ತು ಸದಸ್ಯರ ಷೇರು ಹಣವನ್ನು ವಿನಿಯೋಗ ಮಾಡಿ ಘಟಕವನ್ನು ನಿರ್ಮಿಸಲಾಗಿದೆ.
ತೆಂಗಿನಕಾಯಿ ಪೌಡರ್ ಘಟಕದ ಜೊತೆಗೆ ನೀರಾ ಸಂಸ್ಕರಣ ಘಟಕವನ್ನು ನಿರ್ಮಾಣ ಮಾಡುವ ಆಲೋಚನೆ ನಮ್ಮದಾಗಿದೆ. ಈಗಾಗಲೇ ಇದಕ್ಕಾಗಿ ಜಾಗವನ್ನು ಸಿದ್ದಪಡಿಸಿಕೊಂಡಿದ್ದೇವೆ. ನೀರಾ ಪೇಯವನ್ನು ಟಾಟ್ರಾ ಪ್ಯಾಕೇಟ್ನಲ್ಲಿ ಸಂಸ್ಕರಣ ಮಾಡಿ ಮಾರಾಟ ಮಾಡಲು ಅನುಮತಿಯನ್ನು ಕೊಡಿಸುವಂತೆ ಸರ್ಕಾರವನ್ನು ಕೋರಿರುವುದಾಗಿಯೂ ಅವರು ಹೇಳಿದರು.

ಈ ನಡುವೆ ಸಂಸದ ಆರ್. ಧ್ರುವನಾರಾಯಣ್ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಮಗಾರಿಯ ಗುಣಮಟ್ಟ ಹಾಗೂ ಮಿಷನರಿಗಳ ಜೋಡಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ, ತೆಂಗಿನಕಾಯಿ ದಾಸ್ತಾನು ಘಟಕ, ಬ್ಲಾಯರ್ ವಿಭಾಗ, ಪೌಡರ್ ತಯಾರಿಕೆ ಘಟಕ ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು, ಮಿಷನರಿಗಳ ಜೋಡಣೆ ಮತ್ತು ಅವುಗಳ ಕಾರ್ಯಾರಂಭದ ಬಗ್ಗೆ ಮಾಹಿತಿ ಪಡೆದುಕೊಂಡರು.

ಅಕ್ಟೋಬರ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಬಹು ಕುಡಿಯುವ ನೀರು ಯೋಜನೆಯ 2ನೇ ಹಂತದ ಯೋಜನೆಗೆ ಚಾಲನೆ ನೀಡಲು ಆಗಮಿಸುತ್ತಿದ್ದು, ಈ ಸಂದರ್ಭದಲ್ಲಿಯೇ ಈ ಘಟಕವನ್ನು ಉದ್ಘಾಟನೆ ಮಾಡುವಂತೆ ಅವರಲ್ಲಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ












Click it and Unblock the Notifications