ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಗೆ ಕಂಪ್ಯೂಟರ್ ಶಿಕ್ಷಣ- ಈ ವಿಶೇಷ ಯೋಜನೆ ಹಿಂದಿದೆ ಮಹತ್ವದ ಉದ್ದೇಶ
ಚಾಮರಾಜನಗರ, ನವೆಂಬರ್, 16: ಕೈದಿಗಳಿಗೂ ಕಾಲ ಬದಲಾದಂತೆ ತಾವು ಕೂಡ ಕೆಟ್ಟ ದಾರಿಯನ್ನು ಮರೆತು ಜೀವನದಲ್ಲಿ ಮತ್ತೆ ಏನಾದರೂ ಸಾಧನೆ ಮಾಡಬೇಕೆಂಬ ಆಸೆಯಿರುತ್ತದೆ. ಅದರಂತೆಯೇ ಇದೀಗ ಕಂಪ್ಯೂಟರ್ ಕಲಿಕೆ ಮೂಲಕ ವಿಚಾರಣಾ ಕೈದಿಗಳು, ಕಾರಗೃಹ ಬಂಧಿಗಳು ಭವಿಷ್ಯದಲ್ಲಿ ಬದುಕು ಬದಲಿಸಿಕೊಳ್ಳಬೇಕು ಎಂದು ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ಕಂಪ್ಯೂಟರ್ ಶಿಕ್ಷಣ ಆರಂಭ ಮಾಡಲಾಗಿದೆ.
ರಾಜ್ಯದಲ್ಲೇ ಮೊದಲು ಎನ್ನಬಹುದಾದ ಕಾರಾಗೃಹ ಬಂಧಿಗಳಿಗೆ ಕಂಪ್ಯೂಟರ್ ಶಿಕ್ಷಣ ತರಬೇತಿಯನ್ನು ನೀಡುವ ವಿನೂತನ ಕಾರ್ಯಕ್ರಮ ಚಾಮರಾಜನಗರ ಕಾರಾಗೃಹದಲ್ಲಿ ಆರಂಭಗೊಂಡಿದೆ. ಈ ವಿಶೇಷ ಯೋಜನೆ ಇನ್ಫೋಸಿಸ್ ರೋಟರಿ ಪಂಚಶೀಲ ಸಹಯೋಗದಿಂದ ಆರಂಭಗೊಂಡಿದೆ. ಕಾರಾಗೃಹ ಬಂಧಿಗಳು ಕಾರಾಗೃಹದಲ್ಲೇ ಕಂಪ್ಯೂಟರ್ ತರಬೇತಿ ಪಡೆಯಲು ಸುಸಜ್ಜಿತ ಕೊಠಡಿಯಲ್ಲಿ 10 ಕಂಪ್ಯೂಟರ್ ಮತ್ತು ಪ್ರಿಂಟರ್ಗಳನ್ನು ಇನ್ಫೋಸಿಸ್ ನೀಡಿದೆ. ಜೊತೆಗೆ ತರಬೇತಿದಾರರನ್ನು ನಿಯೋಜಿಸಲಾಗಿದೆ.

ಕಂಪ್ಯೂಟರ್ ಶಿಕ್ಷಣದ ಜೊತೆಗೆ ಕಲಿಕಾರ್ಥಿಗಳಿಗೆ ಸುಲಭವಾಗಿ ಕಂಪ್ಯೂಟರ್ ಅರ್ಥೈಸುವ ಕನ್ನಡ ಕಿರುಪುಸ್ತಕಗಳನ್ನು ಇಡಲಾಗಿದೆ. ಕಂಪ್ಯೂಟರ್ ಕಲಿತ ಬಳಿಕ ಉದ್ಯೋಗ ಪಡೆದು ಬದುಕು ಬದಲಿಸಿಕೊಳ್ಳಲಿ ಎಂಬ ಮಾದರಿ ಉದ್ದೇಶ ಈ ಯೋಜನೆ ಹಿಂದಿದ್ದು, ಬುಧವಾರ ಸಂಜೆ ಈ ಕಲಿಕೆ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗಿದೆ.
ಸ್ವಂತ ಶಕ್ತಿ ಮೇಲೆ ಜೀವನ ರೂಪಿಸಿಕೊಳ್ಳಿ
ಜಿಲ್ಲಾಧಿಕಾರಿ ಶಿಲ್ಪಾನಾಗ್ ಈ ಸಂಬಂಧ ಮಾತನಾಡಿ, ಕೆಲವು ದಿನಗಳ ಹಿಂದೆ ಸಾಕ್ಷರತಾ ಕಾರ್ಯಕ್ರಮಕ್ಕಾಗಿ ಕಾರಾಗೃಹಕ್ಕೆ ಬಂದ ವೇಳೆ ಕಾರಾಗೃಹ ಬಂಧಿಗಳಿಗೂ ಕಂಪ್ಯೂಟರ್ ಶಿಕ್ಷಣ ನೀಡಬೇಕೆಂಬ ಆಲೋಚನೆ ಬಂತು. ಅಂದೇ ಕಾರ್ಯಕ್ರಮದಲ್ಲಿ ಕಂಪ್ಯೂಟರ್ ಶಿಕ್ಷಣ ತರಬೇತಿಗೆ ಕ್ರಮವಹಿಸುವುದಾಗಿ ಭರವಸೆ ನೀಡಿದ್ದೆ. ಇನ್ಫೋಸಿಸ್ ಸೇರಿದಂತೆ ಇತರೆ ಸಂಸ್ಥೆಗಳು ನಮ್ಮ ಮನವಿಗೆ ಸ್ಪಂಧಿಸಿ ಇಲ್ಲಿನ ಬಂಧಿಗಳಿಗೆ ಅತ್ಯಾಧುನಿಕ 10 ಕಂಪ್ಯೂಟರ್, ಪ್ರಿಂಟರ್ಗಳನ್ನು ನೀಡಿ ತರಬೇತಿಗೆ ಅಗತ್ಯ ಸಿಬ್ಬಂದಿ ನಿಯೋಜಿಸಿದೆ.
ಕಾರಾಗೃಹದಲ್ಲಿರುವ ಸಮಯ ಸದುಪಯೋಗವಾಗಲಿ. ಇಲ್ಲಿಂದ ಹೊರಹೋದ ಮೇಲೆ ಸ್ವಂತ ಶಕ್ತಿಯ ಮೇಲೆ ಜೀವನ ರೂಪಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಕಂಪ್ಯೂಟರ್ ತರಬೇತಿಗೆ ವ್ಯವಸ್ಥೆ ಮಾಡಲಾಗಿದೆ. ಹೆಚ್ಚು ಓದಿಲ್ಲದೆ ಇರುವವರಿಗೂ ಸಹ ಕಂಪ್ಯೂಟರ್ ಕಲಿಯಲು ಅವಕಾಶವಿದೆ. ಇಲ್ಲಿ ಅನೇಕ ಬಗೆಯ ಕಂಪ್ಯೂಟರ್ ತರಬೇತಿ ನೀಡಲಾಗುತ್ತದೆ. ಈಗಿರುವ ಗ್ರಂಥಾಲಯದ ಜೊತೆ ಇ ಲೈಬ್ರರಿ ಸಹ ಆರಂಭಿಸಿದರೆ ಬಂಧಿಗಳಿಗೆ ಅವರವರ ಭಾಷೆಯಲ್ಲಿಯೇ ಓದಲು ಅನುಕೂಲ ಮಾಡಿಕೊಡಬಹುದು ಎಂದು ತಿಳಿಸಿದರು.
-
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications