ಸಾಲೂರು ಮಠದ ಉತ್ತರಾಧಿಕಾರಿ ನೇಮಕ ವಿವಾದ: ತಡೆಯಾಜ್ಞೆ ರದ್ದುಗೊಳಿಸಿದ ನ್ಯಾಯಾಲಯ
ಚಾಮರಾಜನಗರ, ಆಗಸ್ಟ್ 04: ಚಾಮರಾಜನಗರ ಜಿಲ್ಲೆ ಸಾಲೂರು ಮಠದಿಂದ ತಮ್ಮ ಉಚ್ಚಾಟನೆ ಮತ್ತು ಬದಲಿ ಉತ್ತರಾಧಿಕಾರಿ ನೇಮಕ ಸಂಬಂಧ ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಪಡೆದಿದ್ದ ತಾತ್ಕಾಲಿಕ ನಿರ್ಬಂಧ ತಡೆಯಾಜ್ಞೆಯನ್ನು ಕೊಳ್ಳೇಗಾಲ ಸಿವಿಲ್ ನ್ಯಾಯಾಲಯ ರದ್ದುಗೊಳಿಸಿದೆ.
ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಇಮ್ಮಡಿ ಮಹದೇವಸ್ವಾಮಿ, ಸಾಲೂರು ಬೃಹನ್ಮಠದ ಕಿರಿಯ ಶ್ರೀಗಳಾಗಿದ್ದರು. ವಿಷ ಪ್ರಸಾದ ಪ್ರಕರಣದ ಬಳಿಕ ಸಾಲೂರು ಮಠದಿಂದ ಉಚ್ಚಾಟನೆಗೊಂಡಿದ್ದರು. ಬೃಹನ್ಮಠದ ಭಕ್ತ ಮಂಡಳಿ, ರಾಜ್ಯದ 20 ಹಳ್ಳಿಗಳು ಮತ್ತು ತಮಿಳುನಾಡಿನ 33 ಹಳ್ಳಿಗಳ ಬೇಡಗಂಪಣ ಮುಖಂಡರು ಸಭೆ ನಡೆಸಿ ಕಿರಿಯ ಶ್ರೀಗಳನ್ನು ಉಚ್ಚಾಟನೆ ಮಾಡಲು ತೀರ್ಮಾನ ಕೈಗೊಂಡಿದ್ದರು.
ಆ ಬಳಿಕ ಇಮ್ಮಡಿ ಮಹದೇವಸ್ವಾಮಿಯು ತನ್ನನ್ನು ಮಠದಿಂದ ಉಚ್ಛಾಟನೆ ಮಾಡುತ್ತಾರೆ ಮತ್ತು ಬದಲಿ ಉತ್ತರಾಧಿಕಾರಿ ನೇಮಕ ಮಾಡಲಿದ್ದಾರೆ ಎಂಬುದನ್ನು ಅರಿತು 2019 ರ ಆಗಸ್ಟ್ 28 ರಂದು ಕೊಳ್ಳೇಗಾಲ ಸಿವಿಲ್ ನ್ಯಾಯಾಲಯದಲ್ಲಿ ತಾತ್ಕಾಲಿಕ ನಿರ್ಬಂಧ ತಡೆಯಾಜ್ಞೆಯನ್ನು ಪಡೆದಿದ್ದರು.

ಬಳಿಕ ನ್ಯಾಯಾಲಯದ ತಡೆಯಾಜ್ಞೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ಕೊಳ್ಳೇಗಾಲ ಸಿವಿಲ್ ನ್ಯಾಯಾಲಯವು ಈ ಪ್ರಕರಣವು ತಮ್ಮ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ ಎಂಬ ಅಂಶವನ್ನು ಪರಿಗಣಿಸಿ ತಡೆಯಾಜ್ಞೆಯನ್ನು ತೆರವು ಮಾಡಿದೆ.
ಇತ್ತೀಚಿಗೆ ಸಾಲೂರು ಮಠಾಧ್ಯಕ್ಷ ಗುರುಸ್ವಾಮಿಗಳು ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ ಉತ್ತರಾಧಿಕಾರಿ ನೇಮಕ ವಿಚಾರ ಮುನ್ನೆಲೆಗೆ ಬಂದಿತ್ತು. ಉತ್ತರಾಧಿಕಾರಿ ನೇಮಕಕ್ಕೆ ಸಾಲೂರು ಮಠದ ಭಕ್ತ ವೃಂದ ಒಂಬತ್ತು ಜನರ ಸಮಿತಿಯನ್ನು ರಚಿಸಿದೆ.
ಒಂಬತ್ತು ಜನರ ಸಮಿತಿ ಮುಂದಿನ ಪೀಠಾಧ್ಯಕ್ಷರನ್ನು ನೇಮಕ ಮಾಡಲಿದ್ದು, ತಡೆಯಾಜ್ಞೆ ತೆರವಿನಿಂದ ಇಮ್ಮಡಿ ಮಹದೇವಸ್ವಾಮಿ ಬಣಕ್ಕೆ ಹಿನ್ನಡೆಯಾದಂತಾಗಿದೆ. ಇಮ್ಮಡಿ ಮಹದೇವಸ್ವಾಮಿ ಜೈಲಿನಿಂದ ಬಿಡುಗಡೆಯಾಗಿ ಸಾಲೂರು ಮಠಾಧ್ಯಕ್ಷರಾಗಲು ಹುನ್ನಾರ ನಡೆಸಿದ್ದರು.
ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟ ದ ಸಾಲೂರು ಮಠದ ಉತ್ತರಾಧಿಕಾರಿ ನೇಮಕಕ್ಕೆ ಎರಡು ಬಣಗಳು ಸಾಕಷ್ಟು ಸಭೆಗಳನ್ನು ನಡೆಸಿದ್ದವು. ಇದೀಗ ಉತ್ತರಾಧಿಕಾರಿ ನೇಮಕ ವಿವಾದ ಬಗೆಹರಿದಿದ್ದು, ಇಂದಿನಿಂದ ಚಟುವಟಿಕೆ ಗರಿಗೆದರಲಿವೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications