Chikkalluru Jatra: ಇಡೀ ರಾಜ್ಯದ ಗಮನ ಸೆಳೆಯುವ ಚಿಕ್ಕಲ್ಲೂರು ಜಾತ್ರೆಗೆ ಕ್ಷಣಗಣನೆ, ಪ್ರಾಣಿ ಬಲಿ ನಿಷೇಧದ ಜಟಾಪಟಿ
ಚಾಮರಾಜನಗರ, ಜನವರಿ, 24: ರಾಜ್ಯದ ಗಮನ ಸೆಳೆಯುವ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆ ಗುರುವಾರ ರಾತ್ರಿ ಆರಂಭಗೊಳ್ಳಲಿದ್ದು, ಲಕ್ಷಾಂತರ ಮಂದಿ ಭಕ್ತರು ಭಾಗಿಯಾಗಲಿದ್ದಾರೆ.
ಕೊಳ್ಳೇಗಾಲ ತಾಲೂಕಿನ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಪೌರಾಣಿಕ, ಐತಿಹಾಸಿಕ ಕ್ಷೇತ್ರವಾದ ಚಿಕ್ಕಲ್ಲೂರಿನಲ್ಲಿ ಜನವರಿ 25 ರಿಂದ 29ರ ವರೆಗೆ ನಡೆಯುವ ಚಿಕ್ಕಲ್ಲೂರು ಜಾತ್ರೆಯಲ್ಲಿ ಗುರುವಾರ ರಾತ್ರಿ ಚಂದ್ರಮಂಡೋಲತ್ಸವ ನೆರವೇರಿಸುವ ಮೂಲಕ ಚಾಲನೆ ದೊರೆಯಲಿದೆ.

ಜಿಲ್ಲೆ, ಹೊರ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಭಕ್ತರು ಟೆಂಟ್ಗಳನ್ನು ಹಾಕಿ ಬಿಡಾರ ಹೂಡಲಿದ್ದು, ಒಂದೊಂದು ಸಮುದಾಯ ಒಂದೊಂದು ಸೇವೆ ಸಲ್ಲಿಸಲಿದ್ದಾರೆ. 5 ಹಗಲು 5 ರಾತ್ರಿ ನಡೆಯುವ ಈ ಜಾತ್ರೆಯಲ್ಲಿ 4ನೇ ದಿನ ಪಂಕ್ತಿ ಸೇವೆ ನಡೆಸಲಿದ್ದು, ಮಾಂಸದ ಅಡುಗೆ ಮಾಡಿ ಸಿದ್ದಪ್ಪಾಜಿ ದೇವರಿಗೆ ಎಡೆ ಇಟ್ಟು ಸಹಪಂಕ್ತಿ ಭೋಜನ ಮಾಡಲಿದ್ದಾರೆ.
ಪ್ರಾಣಿ ಬಲಿ ನಿಷೇಧ: ಪ್ರಾಣಿ ದಯಾ ಸಂಘದ ದಯಾನಂದ ಸ್ವಾಮೀಜಿ ನ್ಯಾಯಾಲಯದಲ್ಲಿ ದಾವೆ ಹೂಡಿದ ಪರಿಣಾಮ ಪ್ರಾಣಿ ಬಲಿ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಿಲ್ಲಾಡಳಿತ ಮಾಡಿಕೊಂಡು ಬರುತ್ತಿದೆ. ಈಗಾಗಲೇ, ಡಿಸಿ ಶಿಲ್ಪಾನಾಗ್ ಈ ಕುರಿತು ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಪ್ರಾಣಿ, ಪಕ್ಷಿ ಬಲಿಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 7 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದು, 18 ಮಂದಿ ಸೆಕ್ಟರ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸುಗಮ ಸಂಚಾರ ದೃಷ್ಟಿಯಿಂದ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ನೀಡಿ ಡಿಸಿ ಆದೇಶಿಸಿದ್ದಾರೆ. ಇನ್ನು ಪ್ರಾಣಿ ಬಲಿ ನಿಷೇಧಕ್ಕೆ ಭಕ್ತರು, ಹೋರಾಟಗಾರರು ಅಪಸ್ವರ ಎತ್ತಿದ್ದು, ಚಿಕ್ಕಲ್ಲೂರು ದೇಗುಲದಲ್ಲಿ ಬಲಿಪೀಠವೇ ಇಲ್ಲ. ಆದ್ದರಿಂದ ತಾವು ಬಲಿ ನೀಡುವುದಿಲ್ಲ. ಸಹಪಂಕ್ತಿ ಭೋಜನ ಮಾತ್ರ ಮಾಡಲಿದ್ದು, ಮಾಂಸದೂಟಕ್ಕೆ ಅವಕಾಶ ಮಾಡಿಕೊಡಬೇಕೆಂದು ಈಗಾಗಲೇ ಡಿಸಿಗೆ ಭಕ್ತರು ಮನವಿ ಸಲ್ಲಿಸಿದ್ದಾರೆ.
ಪವಾಡದ ಭೂಮಿ: ಲಕ್ಷಾಂತರ ಮಂದಿ ಜಮೀನಿನಲ್ಲಿ ಟೆಂಟ್ ಹಾಕಿಕೊಂಡು ಮಲಗಿದರೂ, ಯಾವುದೇ ವಿಷಜಂತುಗಳು ಕಂಡುಬರುವುದಿಲ್ಲ ಹಾಗೂ ಕ್ಷೇತ್ರದಲ್ಲಿ ನೊಣ, ಕಾಗೆಯೂ ಕಾಣದೇ ಇರುವುದು ಈ ಕ್ಷೇತ್ರದ ಪವಾಡವೇ ಆಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications