ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಲಿತ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ, ಇಬ್ಬರ ಬಂಧನ

|
Google Oneindia Kannada News

ಚಾಮರಾಜನಗರ, ಜೂನ್ 11: ಚಾಮರಾಜನಗರ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೊಬ್ಬರನ್ನು ಅಮಾನವೀಯವಾಗಿ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿರುವ ಘಟನೆ ತಡವಾಗಿ ವರದಿಯಾಗಿದೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕು, ಕಬ್ಬೆಕಟ್ಟೆ ಗ್ರಾಮದಲ್ಲಿ ಜೂನ್ 3 ರಂದು ದಲಿತ ವ್ಯಕ್ತಿಯೊಬ್ಬನನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಲಾಗಿದ್ದು, ಅದರ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಚಾಮರಾಜನಗರದಲ್ಲಿ ರೈಸ್ ಪುಲ್ಲಿಂಗ್ ದಂಧೆ: ಹೋಂ ಸ್ಟೇಗೆ ಬೀಗ! ಚಾಮರಾಜನಗರದಲ್ಲಿ ರೈಸ್ ಪುಲ್ಲಿಂಗ್ ದಂಧೆ: ಹೋಂ ಸ್ಟೇಗೆ ಬೀಗ!

ಚಾಮರಾಜನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಈಗಾಗಲೇ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೂ ನಾಲ್ಕು ಮಂದಿ ತಲೆಮರೆಸಿಕೊಂಡಿದ್ದಾರೆ.

Dalit man harassed and beaten by people in Chamarajnagar

ಪ್ರತಾಪ್ ಎಂಬಾತನನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿದೆ. ಆದರೆ ಈತ ಮಾನಸಿಕ ಅಸ್ವಸ್ಥನಾಗಿದ್ದಾನೆ. ಪ್ರತಾಪ್ ಅವರ ತಂದೆಯೇ ಆತನ ವೈದ್ಯಕೀಯ ವರದಿಗಳನ್ನು ಪೊಲೀಸರಿಗೆ ನೀಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಸುಳ್ವಾಡಿ ವಿಷಪ್ರಸಾದ ದುರಂತ; ಇನ್ನೂ ಪಾವತಿಯಾಗಿಲ್ಲ ಆಸ್ಪತ್ರೆ ಬಿಲ್ ಸುಳ್ವಾಡಿ ವಿಷಪ್ರಸಾದ ದುರಂತ; ಇನ್ನೂ ಪಾವತಿಯಾಗಿಲ್ಲ ಆಸ್ಪತ್ರೆ ಬಿಲ್

ಪ್ರತಾಪ್ ಪ್ರಸ್ತುತ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮಾನವೀಯವಾಗಿ ವರ್ತಿಸಿರುವವ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಾಪ್ ಅವರ ಸಹೋದರ ಸಂಬಂಧಿ ಕಾಂತರಾಜು ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

English summary
Dalit man harassed, beaten by people in Chamarajanagar's Gundlupet talluk. Police booked FIR on six people and arrested two.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X