Mysuru Dasara: ಮಹಿಷ ಸಾಂಸ್ಕೃತಿಕ ಹಬ್ಬದ ಬಗ್ಗೆ ದಲಿತ ಸಂಘರ್ಷ ಸಮಿತಿಯ ಮುಖಂಡ ಹೇಳಿದ್ದೇನು ಗೊತ್ತಾ?
ಚಾಮರಾಜನಗರ, ಸೆಪ್ಟೆಂಬರ್, 26: ಈಗಾಗಲೇ ನಾಡಹಬ್ಬ ದಸರಾಗೆ ಭಾರೀ ಸಿದ್ಧತೆ ನಡೆದಿವೆ. ಇನ್ನು ವಿವಿಧ ಸಂಘಟನೆ ವತಿಯಿಂದ ಮೈಸೂರಿನಲ್ಲಿ ಸೆಪ್ಟೆಂಬರ್ 29ರಂದು ಮಹಿಷ ಮಂಡಲೋತ್ಸವ ಹಾಗೂ ರಾಜ್ಯದ ಮೂಲ ನಿವಾಸಿಗಳಿಂದ ಮಹಿಷ ಸಾಂಸ್ಕೃತಿಕ ಹಬ್ಬಕ್ಕೆ ಆಯೋಜನೆ ಮಾಡಲಾಗುತ್ತದೆ. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕೆಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಕೆ.ಎಂ.ನಾಗರಾಜು ಮನವಿ ಮಾಡಿದರು.
ಮೈಸೂರಿನಿಂದ ಅಂದು ಬೆಳಗ್ಗೆ 8:30ಕ್ಕೆ ಬೈಕ್ ಜಾಥಾದ ಮೂಲಕ ಚಾಮುಂಡಿ ಬೆಟ್ಟಕ್ಕೆ ತೆರಳಿ ಅಲ್ಲಿರುವ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಗುವುದು. ಬಳಿಕ 10:30ಕ್ಕೆ ಮೈಸೂರಿನ ಪುರಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಗುರುವಾರ (ಸೆಪ್ಟೆಂಬರ್ 26) ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಹಿಷ ಎಂಬ ಹೆಸರಿನಿಂದ ಮೈಸೂರು ಎಂಬ ಹೆಸರು ಬಂದಿದೆ. ಮೈಸೂರು ಸಂಸ್ಕೃತಿಕ, ಪರಂಪರೆ ಉಳಿಸುವ ಅಗತ್ಯವಿದೆ. ಪ್ರತಿ ವರ್ಷದಂತೆ ಈ ಬಾರಿಯೂ ವಿಜೃಂಭಣೆಯಿಂದ ಮಹಿಷ ಮಂಡಲೋತ್ಸವ ಆಚರಣೆ ಮಾಡಲಾಗುವುದು. ಕಳೆದ ಬಾರಿ 30,000 ಜನರು ಸೇರಿದ್ದು, ವಿಚಾರಸಂಕಿರಣ ಆಯೋಜಿಸಲಾಗಿತ್ತು. ಈ ಬಾರಿಯೂ 30,000ಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಇದೇ ವೇಳೆ, ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಘನತೆಯಿಂದ ಮಾತನಾಡಿದ್ದಾರೆ. ಆದರೆ, ಮಾಜಿ ಸಂಸದ ಪ್ರತಾಪ್ ಸಿಂಹ ವಿವೇಚನೆ ರಹಿತವಾಗಿ ಮಾತನಾಡಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಮಹಿಷ ಮಂಡೋಲತ್ಸವಕ್ಕೂ ಮುನ್ನ ಪ್ರತಾಪ್ ಸಿಂಹ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘಸೇನಾ, ದಸಂಸ ಮುಖಂಡ ಯರಿಯೂರು ರಾಜಣ್ಣ, ಬಂಗಾರಸ್ವಾಮಿ ಹಾಜರಿದ್ದರು.
ಇನ್ನು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಜಂಬೂ ಸವಾರಿ ದಿನ ಚಿನ್ನದ ಅಂಬಾರಿ ಹೋರುವ ಗಜಪಡೆ ಹಾಗೂ ಮೆರವಣಿಗೆಯಲ್ಲಿ ಭಾಗವಹಿಸುವ ಕುದುರೆಗಳಿಗೆ ಕುಶಾಲತೋಪುಗಳ ಶಬ್ದಕ್ಕೆ ಹೆದರದಂತೆ ತಾಲೀಮು ನೀಡಲಾಗುತ್ತಿದೆ.
ಈ ಕುಶಾಲತೋಪು ತಾಲೀಮಿನ ಮೊದಲನೇ ದಿನದ ನಾಲ್ಕನೇ ಹಂತದ ವೇಳೆ ದಸರಾ ಗಜಪಡೆ ಏಕಲವ್ಯ ಹಾಗೂ ಹಿರಣ್ಯ ಆನೆಗಳು ಗಾಬರಿಗೊಂಡಿದ್ದು, ಅವುಗಳನ್ನು ಮಾವುತರು-ಕಾವಾಡಿಗಳು ಸಮಾಧಾನ ಮಾಡಿದರು.
ನಗರದ ವಸ್ತು ಪ್ರದರ್ಶನ ಆವರಣದ ಪಾರ್ಕಿಂಗ್ ಸ್ಥಳದಲ್ಲಿ ದಸರಾ ಗಜಪಡೆ ಹಾಗೂ ಅಶ್ವದಳಕ್ಕೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಯನ್ನು ಅರಮನೆಯಿಂದ ಕರೆದುಕೊಂಡು ಹೋಗಿ, ಮೈದಾನದಲ್ಲಿ ಸಾಲಾಗಿ ನಿಲ್ಲಿಸಲಾಯಿತು. ಬಳಿಕ ಗಜಪಡೆಯ ಮುಂಭಾಗದಲ್ಲಿ ಕುಶಾಲತೋಪು ಹಾರಿಸುವ ಫಿರಂಗಿಗಳನ್ನು ಇಟ್ಟು ತಾಲೀಮು ನಡೆಸಲಾಯಿತು. ಇದಕ್ಕೂ ಮುನ್ನ ನಾಡದೇವತೆ ಪೂಜೆ ಸಲ್ಲಿಸಲಾಯಿತು. ನಂತರ, ಫಿರಂಗಿಗಳಿಂದ 21 ಸುತ್ತು ಕುಶಾಲತೋಪು ಸಿಡಿಸುವಿಕೆಯು ಮೊದಲ ದಿನದ ಅಭ್ಯಾಸದಲ್ಲಿ ನಡೆಯಿತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications