ಚಾಮರಾಜನಗರ: ಬಾವಿಯಲ್ಲಿ ಕೊಳೆತ ನವಜಾತ ಶಿಶು ಪತ್ತೆ
ಚಾಮರಾಜನಗರ, ಸೆಪ್ಟೆಂಬರ್ 9: ಯಾರೋ ಮಹಿಳೆಯೊಬ್ಬಳು ತನ್ನ ಕರಳು ಕುಡಿಯನ್ನೇ ಬಾವಿಗೆ ಎಸೆದು ಹೋಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಹೊರವಲಯದಲ್ಲಿ ಬೆಳಕಿಗೆ ಬಂದಿದೆ.
ನವಜಾತ ಶಿಶು ಯಾರದ್ದು ಎಂಬುದು ಗೊತ್ತಾಗಿಲ್ಲ. ಮಗುವಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ಕಳೆದ ಎರಡು ದಿನಗಳ ಹಿಂದೆಯೇ ಎಸೆದು ಹೋಗಿರಬಹುದೆಂದು ಶಂಕಿಸಲಾಗಿದೆ.

ನವಜಾತ ಗಂಡು ಶಿಶು ಹನೂರು ಪಟ್ಟಣದ ಹೊರವಲಯದಲ್ಲಿರುವ ತಿಪ್ಪರಾಯ ಎಂಬುವರಿಗೆ ಸೇರಿದ ಬಾವಿಯಲ್ಲಿ ಪತ್ತೆಯಾಗಿದೆ. ಬಹುಶಃ ಅನೈತಿಕ ಸಂಬಂಧದಿಂದ ಹುಟ್ಟಿದ ಮಗು ಇದಾಗಿರಬಹುದೇ? ಅದರಿಂದ ಸಮಾಜಕ್ಕೆ ಹೆದರಿ ಮಗುವನ್ನು ಬಾವಿಗೆ ಎಸೆದು ಹೋಗಿರಬಹುದೆಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.
ಯಾರೋ ದಾರಿ ಹೋಕರು ಬಾವಿಗೆ ಇಣುಕಿ ನೋಡಿದಾಗ ಮಗುವಿನ ಶವವಿರುವುದು ಗೋಚರಿಸಿದ್ದು, ಈ ವಿಷಯವನ್ನು ಹನೂರು ಪೊಲೀಸರ ಗಮನಕ್ಕೆ ತಂದ ಕಾರಣದಿಂದ ಸ್ಥಳಕ್ಕೆ ಬಂದ ಪೊಲೀಸರು ಶಿಶುವಿನ ಮೃತ ದೇಹವನ್ನು ಬಾವಿಯಿಂದ ಹೊರತೆಗೆದಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
More From
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications