Get Updates
Get notified of breaking news, exclusive insights, and must-see stories!

ಹನೂರು: ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ, ಅಂಧರ ಬಾಳಿಗೆ ಬೆಳಕಾದ ಯುವಕ

ಚಾಮರಾಜನಗರ, ಜುಲೈ, 12: ಮಗ ಮೃತಪಟ್ಟ ನೋವಿನ ನಡುವೆಯೂ ಆತನ ಕಣ್ಣುಗಳನ್ನು ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರೆದ ಘಟನೆ ಹನೂರು ತಾಲೂಕಿನ ಕುರಟ್ಟಿಹೊಸೂರು ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿಹೊಸೂರು ಗ್ರಾಮದಲ್ಲಿ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು, ಪೋಷಕರು ಈತನ ಕಣ್ಣುಗಳನ್ನು ದಾನ ಮಾಡುವ ಮೂಲಕ ಅಂಧರ ಬಾಳಿಗೆ ಬೆಳಕಾಗಿದ್ದಾರೆ.

Death in accident: A Family donates organ of son at Hanur

ಕುರಟ್ಟಿಹೊಸರು ಗ್ರಾಮದ ಅಂಬರೀಶ್ (27) ಎಂಬ ಯುವಕ ಕುರಟ್ಟಿಹೊಸರು ಗ್ರಾಮದಲ್ಲಿ ಬೈಕ್ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅಂಬರೀಶ್ ಮಂಗಳವಾರ (ಜುಲೈ 11) ನಿಧನ ಹೊಂದಿದ್ದು, ಈತನ ಕಣ್ಣುಗಳನ್ನು ‌ಪಾಲಕರ ಒಪ್ಪಿಗೆಯಂತೆ ದಾನ ಮಾಡಲಾಗಿದೆ.

ತನ್ನ ಮರಣದ ಬಳಿಕ ನೇತ್ರದಾನ ಮಾಡಬೇಕು ಎಂಬುದು ಅಂಬರೀಶ್ ಅವರ ಆಸೆಯಾಗಿತ್ತಂತೆ. ಅದರಂತೆಯೇ ಮಗನ ನೇತ್ರದಾನ ಮಾಡಲಾಗಿದೆ ಎಂದು ‌ಪಾಲಕರು ತಿಳಿಸಿದ್ದಾರೆ.

ಪೊರಕೆ ಕಡ್ಡಿ ಕೀಳಲು ಹೋದಾಗ ಆನೆ ದಾಳಿ

ಮತ್ತೊಂದೆಡೆ ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಪಿ.ಜಿ‌.ಪಾಳ್ಯ ಸಮೀಪದ ಆಲದಕೆರೆ ಕಾಡಿನಲ್ಲಿ ನಡೆದಿದೆ.

ಪಿ‌.ಜಿ‌‌‌.ಪಾಳ್ಯ ಸಮೀಪದ ಮಾಳಿಗನತ್ತ ಗ್ರಾಮದ ಪ್ರಭುಸ್ವಾಮಿ (55) ಮೃತ ದುರ್ದೈವಿ. ಮಲೆ ಮಹದೇಶ್ವರ ವನ್ಯಜೀವಿಧಾಮ ಪಿ.ಜಿ. ಪಾಳ್ಯ ಅರಣ್ಯ ವಲಯಕ್ಕೆ ಸೇರಿದ ಆಲದಕೆರೆ ಬಯಲು ಅರಣ್ಯ ಪ್ರದೇಶಕ್ಕೆ ಪ್ರಭುಸ್ವಾಮಿ ಹಾಗೂ ಮಗ ಚಂದ್ರು ಇಬ್ಬರೂ ಪೊರಕೆ ಕಡ್ಡಿ ಕೀಳಲು ತೆರಳಿದ್ದರು. ಅಪ್ಪ ಒಂದು ಭಾಗದಲ್ಲಿ ಮಗ ಒಂದು ಭಾಗದಲ್ಲಿ ಪೊರಕೆ ಕಡ್ಡಿ ಕೀಳುತ್ತಿದ್ದಾಗ ಆನೆ ದಾಳಿ ಮಾಡಿದೆ. ಈ ವೇಳೆ ಪ್ರಭುಸ್ವಾಮಿ ಸ್ಥಳದಲ್ಲೇ ಅಸುನೀಗಿದ್ದಾರೆ.

ಇನ್ನು ಬಚಾವಾದ ಮಗನಿಂದ ಆನೆ ದಾಳಿ ವಿಚಾರ ಬೆಳಕಿಗೆ ಬಂದಿದೆ‌. ಪ್ರಭುಸ್ವಾಮಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಮಲೆಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+